ಬೆಂಗಳೂರು:ನನ್ನ ತಮ್ಮ ಡ್ರೋನ್​ ಪ್ರತಾಪ್​ ಮತ್ತು ನಾನು ಒಂದೇ ತಾಯಿಯ ಮಕ್ಕಳಿದ್ದಂಗೆ… ಈ ಮಾತನ್ನು ಸ್ವತಃ ನಟ ಹಾಗೂ ನಿರ್ದೇಶಕ ಒಳ್ಳೆ ಹುಡುಗ ಪ್ರಥಮ್​ ಹೇಳಿದ್ದು, ಭಾರಿ ವೈರಲ್​ ಆಗಿದೆ.
ಅಷ್ಟಕ್ಕೂ ಪ್ರಥಮ್​ ಈ ಮಾತನ್ನು ಯಾಕೆ ಹೇಳಿದ್ರು ಅನ್ನೋದನ್ನು ತಿಳಿದುಕೊಳ್ಳುವುದಕ್ಕೂ ಮುನ್ನ ಡ್ರೋನ್​ ಪ್ರತಾಪ್​ ಬಗ್ಗೆ ಹೇಳಿಬಿಡುತ್ತೇನೆ. ಅಂದಹಾಗೆ ಡ್ರೋನ್​ ಪ್ರತಾಪ್​ ಬಗ್ಗೆ ಹೆಚ್ಚಿಗೆ ಹೇಳಬೇಕಿಲ್ಲ. ಇಡೀ ಕರ್ನಾಟಕ ಆತನ ಮಾತಿಗೆ ಮರುಳಾದ ಒಂದು ಕಾಲವಿತ್ತು. ಆದರೆ, ಆತನ ನಿಜರೂಪ ತಿಳಿದಾಗ ಅದೇ ಕರ್ನಾಟಕದ ಜನ ಇಂದಿಗೂ ಆತನನ್ನು ಕಾಗೆ ಪ್ರತಾಪ್​ ಅಂತಾನೇ ಕರೆಯುತ್ತಿದ್ದಾರೆ. ಏಕೆಂದರೆ, ಆತ ಹಾರಿಸಿದ್ದ ಅಂತಿಂಥ ಕಾಗೆಯಲ್ಲ.
ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ದೇಶ-ವಿದೇಶಿಗರು, ದೊಡ್ಡ ದೊಡ್ಡ ರಾಜಕಾರಣಿಗಳು ಹಾಗೂ ಮಾಧ್ಯಮಗಳನ್ನು ಯಾಮಾರಿಸಿದ್ದ. ನಟ ಜಗ್ಗೇಶ್​ ಅವರಿಂದ ಹಿಡಿದು ಅನೇಕರು ಘಟಾನುಘಟಿಗಳು ಡ್ರೋನ್​ ಪ್ರತಾಪ್​ಗೆ ಹಣದ ನೆರವು ನೀಡಿದ್ದರು. ಆದರೆ, ಆತ ಯುವ ವಿಜ್ಞಾನಿಯಲ್ಲ ನಕಲಿ ವಿಜ್ಞಾನಿ, ಆತ ಎಲ್ಲರ ಕಿವಿಗೆ ಹೂ ಇಟ್ಟಿದ್ದಾನೆ ಅಂತಾ ಗೊತ್ತಾದಾಗ ಆತನನ್ನು ನಂಬಿದ್ದ ಅದೇ ಜನ ಯಾರನ್ನು ನಂಬೋದು ಅಂತಾ ಬೇಸರಪಟ್ಟುಕೊಂಡಿದ್ದು ಉಂಟು. ಎಲ್ಲರ ನಂಬಿಕಗೆ ದ್ರೋಹ ಬಗೆದು ಪೊಲೀಸರು ವಿಚಾರಣೆಯನ್ನೂ ಎದುರಿಸಿ ಕಣ್ಮರೆಯಾಗಿದ್ದ ಡ್ರೋನ್​ ಪ್ರತಾಪ್​, ಎರಡು ವರ್ಷಗಳ ಬಳಿಕ ಇತ್ತೀಚೆಗಷ್ಟೇ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರತ್ಯಕ್ಷರಾಗಿರುವ ಪ್ರತಾಪ್​, ಈ ಬಾರಿ ಹೊಸದಾಗಿ ಏನೋ ಪ್ರಾರಂಭಿಸುತ್ತಿರುವಂತೆ ಮುನ್ಸೂಚನೆ ನೀಡಿದ್ದಾರೆ. ಟೇಬಲ್​ ಮೇಲೊಂದು ಲ್ಯಾಪ್​ಲಾಪ್​ ಇಟ್ಟು, ಅದಕ್ಕೆ ಡಾಟಾ ಕೇಬಲ್​ ಅವಳವಡಿಸಿರುವ ಯಾವುದೋ ಒಂದು ಸಾಧನವನ್ನು ತಮ್ಮ ಮುಂದಿಟ್ಟುಕೊಂಡು, ಎರಡು ಕೈಗಳಿಗೆ ಹಳದಿ ಬಣ್ಣದ ರಕ್ಷಾ ಕವಚ ಹಾಗೂ ಕಣ್ಣಿಗೆ ಸುರಕ್ಷಿತ ಕನ್ನಡಕ ಧರಿಸಿ, ಒಂದು ಕೈಯಲ್ಲಿ ಸಾಲ್ಡರಿಂಗ್ ಮೆಶಿನ್​ ಹಿಡಿದು ನಗುತ್ತಾ ಕ್ಯಾಮೆರಾಗೆ ಪೋಸ್​ ನೀಡಿದ್ದಾನೆ. ಟೇಬಲ್​ ಮೇಲೆ ಇನ್ನಿತರ ಎಲೆಕ್ಟ್ರಾನಿಕ್​ ಉಪಕರಣಗಳಿವೆ. ಟೇಬಲ್​ನ ಒಂದು ಬದಿಯಲ್ಲಿ ಡ್ರೋನ್​ ಕ್ಯಾಮೆರಾದ ಅರ್ಧ ಚಿತ್ರ ಕಾಣುತ್ತದೆ.
ಈ ಬಾರಿ ಡ್ರೋನ್​ ಪ್ರತಾಪ್​ ಯಾವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ತಿಳಿಸಿಲ್ಲ. ಆದರೆ, “ಕೆಟ್ಟ ಜನರು ನಿಮ್ಮ ಜೀವನವನ್ನು ತೊರೆದಾಗ, ಸರಿಯಾದ ವಿಷಯಗಳು ನಿಮ್ಮ ಜೀವನದಲ್ಲಿ ನಡೆಯಲು ಪ್ರಾರಂಭಿಸುತ್ತವೆ” ಎಂಬ ಅಡಿಬರಹವನ್ನು ಡ್ರೋನ್​ ಪ್ರತಾಪ್​ ನೀಡಿದ್ದಾರೆ. ಸದ್ಯ ಪ್ರತಾಪ್​ ಅವರ ಹೊಸ ಅವತಾರ ವೈರಲ್​ ಆಗಿದ್ದು, ಫೋಟೋ ನೋಡಿದ ನೆಟ್ಟಿಗರು ಪ್ರತಾಪ್​ ಅವರ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬಗೆಬಗೆಯ ಕಾಮೆಂಟ್​ಗಳೊಂದಿಗೆ ಕಾಲೆಳೆಯುತ್ತಿದ್ದಾರೆ.
ಪ್ರಥಮ್​ ಕಾಮೆಂಟ್​ ವೈರಲ್​ಈಗ ನಟ ಹಾಗೂ ನಿರ್ದೇಶಕ ಪ್ರಥಮ್​ ವಿಚಾರಕ್ಕೆ ಬರುತ್ತೇನೆ. ಡ್ರೋನ್​ ಪ್ರತಾಪ್​ ಇನ್​ಸ್ಟಾಗ್ರಾಂ ಪೋಸ್ಟ್​ಗೆ ಪ್ರಥಮ್​ ಕೂಡ ಕಾಮೆಂಟ್​ ಮಾಡಿದ್ದಾರೆ. ನನ್ನ ತಮ್ಮ ಡ್ರೋನ್​ ಪ್ರತಾಪ್​ ಮತ್ತು ನಾನು ಒಂದೇ ತಾಯಿ ಮಕ್ಕಳಿದ್ದಂಗೆ. ನಾನು ಹುಣ್ಣಿಮೇಲಿ ಹುಟ್ಟಿದೆ ಆದರೆ, ಪ್ರತಾಪ್​ ಹುಟ್ಟಿದಾಗ ಕರೆಂಟ್ ಹೋಗಿತ್ತು. ಯಾವತ್ತಿದ್ರೂ ಪ್ರಥಮ್ಮು, ಪ್ರತಾಪು ಮತ್ತು ನಿರ್ದೇಶಕ ಪ್ರೇಮ್​ ತ್ರಿಮುರ್ತಿಗಳು. ನಾವೆಲ್ಲಾ ಒಂದೇ ಎಂದು ಕಾಮೆಂಟ್​ ಮಾಡುವ ಮೂಲಕ ಕಿಚಾಯಿಸಿದ್ದಾರೆ. ನೆಟ್ಟಿಗರು ಪ್ರಥಮ್​ ಅವರ ಕಾಮೆಂಟ್​ ಪ್ರತಿಕ್ರಿಯೆ ನೀಡಿದ್ದು, ಪ್ರತಾಪ್​ ಕಾಗೆ ಹಾರಿಸ್ತಾರೆ. ನೀವು ಏನು ಹಾರಿಸ್ತೀರಾ ಸರ್​ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ನೆಟ್ಟಿಗ ಎಲ್ಲರು ಹಾರಿಸೋರೆ ಎಂದು ಕಮೆಂಟಿಸಿದ್ದಾರೆ.

ಈ ಬಾರಿ ಯಾವ ರಾಕೆಟ್​ ಹಾರಿಸ್ತೀರಾ ಅಣ್ಣಾ, ಅಣ್ಣಾ ಮಿಕ್ಸಿ ರಿಪೇರಿ ಮಾಡುತ್ತಿದ್ದೀರಾ, ಅಣ್ಣಾ ಅವರು ಯೂಟ್ಯೂಬ್​ ನೋಡ್ಕೊಂಡು ಡ್ರೋನ್​ ಮಾಡ್ತಿದ್ದಾರೆ, ಅವನು ಸಿಗ್ನಲ್​ ಕೊಟ್ಟಿದ್ದಾನೆ ಅಂದ್ರೆ ಏನೋ ದೊಡ್ಡದಾಗಿ ನಡೆಯುತ್ತದೆ, ಅಣ್ಣಾ ನನ್ನ ಇಯರ್​ ಫೋನ್​ನಲ್ಲಿ ಒಂದು ಬದಿ ಕೇಳುತ್ತಿಲ್ಲ, ರಿಪೇರಿ ಮಾಡಿ ಕೊಡು, ಸಾಲ್ಡರಿಂಗ್​ ಮಾಡೋಕೆ ಈ ರೀತಿಯ ಬಿಲ್ಡಪ್​ ಬೇಕಾ?, ಅಣ್ಣನ ಮರು ವಿಶ್ವರೂಪ, ಬ್ರೊ ತುರ್ತಾಗಿ ಶಿವಮೊಗ್ಗದಿಂದ ವಿಜಯಪುರಕ್ಕೆ ಒಂದು ಬ್ಲಡ್​ ಬಾಟಲ್​ ಕಳುಹಿಸಬೇಕಿತ್ತು. 10 ನಿಮಷದಲ್ಲಿ ಕಳುಹಿಸಬೇಕು. ನಿಮ್ಮ ಡ್ರೋಣ್​ ಕಳುಹಿಸಿ, ನಮಗೆ ಸಹಾಯವಾಗುತ್ತೆ ಎಂಬಿತ್ಯಾದಿ ಬಗೆಬಗೆಯ ಕಾಮೆಂಟ್​ಗಳ ಮೂಲಕ ಡ್ರೋನ್​… ಅಲ್ಲ ಅಲ್ಲ ಕಾಗೆ ಪ್ರತಾಪ್​ನನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.
ಯಾರಿದು ಡ್ರೋನ್​ ಪ್ರತಾಪ್​?ಮಾತಿನ ಕಲೆ ಗೊತ್ತಿದ್ದರೆ ಯಾರನ್ನು ಬೇಕಾದರೂ ಮೂರ್ಖರನ್ನಾಗಿಸಬಹುದು ಎಂಬುದನ್ನು ನಿರೂಪಿಸಿ, ಸಮಸ್ತ ಕನ್ನಡಿಗರಿಗೆ ಕಾಗೆ ಹಾರಿಸಿದ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ನಕಲಿ ವಿಜ್ಞಾನಿ ಡ್ರೋನ್ ಪ್ರತಾಪ್, ಈ ಹಿಂದೆ ಬಡತನದ ಬಗ್ಗೆ ಕಟ್ಟಿದ್ದು ಸತ್ಯದ ತಲೆಯ ಮೇಲೆ ಹೊಡೆಯುವಂತೆ ಕಟ್ಟುಕತೆ. ತನ್ನದು ಬಡ ಕುಟುಂಬ. ತಾನು ಬಹಳ ಕಷ್ಟಗಳನ್ನು ಅನುಭವಿಸಿದ್ದಾಗಿ ಪ್ರತಾಪ್ ಈ ಹಿಂದೆ ಹೇಳಿಕೊಂಡಿದ್ದ. ಆದರೆ ವಾಸ್ತವದಲ್ಲಿ ಆತನ ಕುಟುಂಬ ಬಡತನದ ಬೇಗೆಯಲ್ಲೇನು ಬೇಯುತ್ತಿಲ್ಲ. ಪ್ರತಾಪ್ ತಾಯಿಯ ತಂದೆ (ತಾತ) ಸರ್ಕಾರಿ ನೌಕರಿಯಲ್ಲಿದ್ದರು. ಪ್ರತಾಪ್ ದೊಡ್ಡಪ್ಪ ಅಮೆರಿಕದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಪ್ರೊಫೆಸರ್ ಆಗಿದ್ದರು. ಅವರ ಪುತ್ರ ಕೋಲ್ಕತ್ತಾದಲ್ಲಿ ಸಾಫ್ಟ್​ವೇರ್ ಉದ್ಯೋಗಿಯಾಗಿದ್ದಾರೆ.
ಪ್ರತಾಪ್ ತಂದೆ, ತಾಯಿ ರೇಷ್ಮೆ ಬೆಳೆಗಾರರಾಗಿದ್ದು, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಪ್ರತಾಪ್ ಮಳವಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದಾನೆ. ಜೆಎಸ್​ಎಸ್ ಕಾಲೇಜಿನಲ್ಲಿ ಬಿಎಸ್​ಸಿ ವಿದ್ಯಾಭ್ಯಾಸ ಮಾಡುತ್ತಿದ್ದವನಿಗೆ ಹಣ ಮಾಡುವ ಐಡಿಯಾ ಬಂದಿತು. ಸರಿಯಾಗಿ ತರಗತಿಗೆ ಬಾರದ ಈತ ಏನೋ ಸಂಶೋಧನೆ ಮಾಡುತ್ತಿದ್ದಾನೆಂದು ಭಾವಿಸಿ ಉಪನ್ಯಾಸಕರ ಜತೆಗೆ ಮಠದವರು ಕೂಡ ಆರ್ಥಿಕ ನೆರವು ನೀಡಿದ್ದಾರೆ. ಜರ್ಮನಿಯಲ್ಲಿ ಡ್ರೋನ್ ಪ್ರದರ್ಶನ ಮಾಡಲಿಕ್ಕೆ ಜೆಎಸ್​ಎಸ್ ಮಠ 8 ಲಕ್ಷ ರೂ., ವಿದ್ಯಾಸಂಸ್ಥೆಯ ಎಲ್ಲ ಉಪನ್ಯಾಸಕರು ಆರ್ಥಿಕ ನೆರವು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಯಲಾಯಿತು ಪ್ರತಾಪ್​ ಅಸಲಿಯತ್ತುಅದ್ಭುತವಾದ ಡ್ರೋನ್ ಕಂಡುಹಿಡಿದಿರುವುದಾಗಿ ಹೇಳುವ ಪ್ರತಾಪ್, ತನ್ನ ಡ್ರೋನ್ ಅನ್ನು ಯಾರಿಗೂ ತೋರಿಸಿಲ್ಲ. ನೆರವು ನೀಡಿದ ಮಠದ ಶ್ರೀಗಳು ಸುತ್ತೂರು ಜಾತ್ರೆಯಲ್ಲಿ ಪ್ರದರ್ಶನಕ್ಕೆ ಇಡುವಂತೆ ಹೇಳಿದಾಗ ಅದರ ಪೇಟೆಂಟ್ ಮಿಸ್ ಆಗಿಬಿಡುತ್ತದೆ ಎಂದು ನೆಪ ಹೇಳಿ ತಪ್ಪಿಸಿಕೊಂಡಿದ್ದ. ತನ್ನ ಡ್ರೋನ್ ಬಗ್ಗೆ ಯಾವುದೇ ವಿಡಿಯೋ, ಫೋಟೋಗಳನ್ನು ಕೂಡ ಸಂಸ್ಥೆಗಾಗಲಿ, ಮಾಧ್ಯಮಗಳಿಗಾಗಲಿ ಈತನಕ ತೋರಿಸಿಲ್ಲ.
ಏನಿದು ಡ್ರೋನ್​ ಪ್ರತಾಪನ ಹೊಸ ಅವತಾರ? ನೆಟ್ಟಿಗರ ಬಗೆಬಗೆಯ ಕಾಮೆಂಟ್​ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

ಈ ಪಾಕಿಸ್ತಾನದ ರಜಿನಿಕಾಂತ್​ಗೆ ಸೂಪರ್​ಸ್ಟಾರ್​ ರಜಿನಿಕಾಂತ್​ ನೋಡುವ ಆಸೆ: ಇಲ್ಲಿದೆ ವಿಶೇಷ​ ವಿಡಿಯೋ…

ಬಾಲಕಿಯ ಅತ್ಯಾಚಾರ, ಕೊಲೆ ಕೇಸ್​: 16ರ ಬಾಲಕ ಬಂಧನ, ಭಾವುಕರಾಗಿ ಮನವಿ ಒಂದನ್ನು ಮಾಡಿದ ಕಲಬುರಗಿ ಎಸ್ಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − three =
Remember me
