ಬೆಂಗಳೂರು:ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದಲ್ಲದೆ ಬೈಕ್​ಗೆ ಡಿಕ್ಕಿ ಹೊಡೆದು ಅಪಘಾತವನ್ನೂ ಮಾಡಿರುವ ಸಂಬಂಧ ದೂರು ದಾಖಲಾಗಿದ್ದು, ಮಡಿವಾಳ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯ ಭಾರದ್ವಾಜ್ ಎಂಬವರ ವಿರುದ್ಧ ರಮೇಶ್ ಎಂಬವರು ದೂರು ನೀಡಿದ್ದಾರೆ. ಮಡಿವಾಳದ ಅಯ್ಯಪ್ಪ ದೇವಸ್ಥಾನದ ಅಂಡರ್ ಪಾಸ್ ಬಳಿ ಈ ಅಪಘಾತ ನಡೆದಿದೆ. ಆರೋಪಿ ವಿಜಯ್ ಭಾರದ್ವಾಜ್​ ಕಿಮ್ಸ್​ ವೈದ್ಯ ಎಂದು ಹೇಳಲಾಗಿದೆ.
ವಿಜಯ್ ಭಾರದ್ವಾಜ್ ಅಂಡರ್ ಪಾಸ್​ ಬಳಿ ಕಾರಿನಲ್ಲಿ ಹೋಗುತ್ತಿದ್ದು, ನಂತರ ರಿವರ್ಸ್ ಬಂದು ಬೈಕ್ ಡಿಕ್ಕಿ ಹೊಡೆದಿದ್ದಾರೆ ಎಂಬುದಾಗಿ ರಮೇಶ್ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಜಯ್ ಮದ್ಯಪಾನ ಮಾಡಿರುವುದು ತಿಳಿದುಬಂದಿದ್ದು, ಅವರನ್ನು ಕೂಡಲೇ ಮಡಿವಾಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದೇನೆ.ವಿಜಯ್ ಮದ್ಯಪಾನ ಮಾಡಿರುವುದು ಠಾಣೆಯಲ್ಲಿ ಪರಿಶೀಲನೆ ವೇಳೆ ದೃಢಪಟ್ಟಿದ್ದು, ಅವರ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು ಎಂದು ರಮೇಶ್ ದೂರು ನೀಡಿದ್ದಾರೆ.
ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​

ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸಂತಸದ ಸಂಗತಿ; ಟೆಲಿಗ್ರಾಂ ಆ್ಯಪ್​ಗೆ ಪೈಪೋಟಿಯಂತೆ ಮತ್ತೊಂದು ಅಪ್​ಡೇಟ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
