ಧಾರವಾಡ:ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆಯಾಗಿರುವ ಆಘಾತಕಾರಿ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದ್ದು, ಭೀಕರ ಹತ್ಯೆಯಿಂದಾಗಿ ವಿದ್ಯಾಕಾಶಿ ಜನತೆ ಭಯಭೀತರಾಗಿದ್ದಾರೆ.
ಮಹಮ್ಮದ್​ ಕುಡಚಿ, ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಆತನ ಮನೆ ಎದುರೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಮ್ಮದ್​ ಕುಡಚಿ ಮನೆಯ ಮುಂದೆ ಕುಳಿತಿದ್ದರು ಈ ವೇಳೆ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಬರ್ಬರವಾಗಿ ಹತ್ಯೆಗೈದಿದೆ.
ಕುಡಚಿ ನಿವಾಸದ ಅನತಿ ದೂರದಲ್ಲೇ ಮತ್ತೊಂದು ಶವ ಪತ್ತೆಯಾಗಿದೆ. ರಕ್ತಸಿಕ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆತನ ಹೆಸರು ಇನ್ನೂ ತಿಳಿದುಬಂದಿಲ್ಲ.ಆತನೂಸಹ ಕುಡಚಿ ಮನೆಯಿಂದಲೇ ಓಡಿ ಹೋಗಿ ಬೇರೆ ಜಾಗದಲ್ಲಿ ಪ್ರಾಣ ಬಿಟ್ಟಿದ್ದಾರೆ. ದಾರಿಯುದ್ದಕ್ಕೂ ರಕ್ತ ಚೆಲ್ಲಿದೆ.
ಇದನ್ನೂ ಓದಿ: ಬೆಳಗಾಗುವಷ್ಟರಲ್ಲಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ; 17 ರೂ. ಇದ್ದ ಬ್ಯಾಂಕ್ ಖಾತೆಯಲ್ಲೀಗ 100 ಕೋಟಿ ರೂ.!
ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣಗುಪ್ತ ಭೇಟಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ರಮಣಗುಪ್ತ ಪ್ರತಿಕ್ರಿಯೆ ನೀಡಿದ್ದು, ಕಮಲಾಪುರ ಬಡಾವಣೆಯಲ್ಲಿ ಡಬಲ್ ಮರ್ಡರ್ ಆಗಿದೆ. ನಾನು‌ ಸೇರಿ ಹಿರಿಯ ಅಧಿಕಾರಿಗಳು ವೈಜ್ಞಾನಿಕ ತಳಹದಿಯಲ್ಲಿ ತನಿಖೆ ಮಾಡುತ್ತಿದ್ದೇವೆ. ಎಲ್ಲ ಆಯಾಮದಲ್ಲೂ ತನಿಖೆ ಆಗುತ್ತಿದೆ. ಪ್ರಕರಣ ಸಂಬಂಧ ಮೂರು ಮಾರಕಾಸ್ತ್ರಗಳು ಸಿಕ್ಕಿವೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡಲಾಗುವುದು. ಇದಕ್ಕಾಗಿ ತನಿಖಾ ತಂಡವು ರಚನೆಯಾಗಿದೆ ಎಂದು ತಿಳಿಸಿದರು.(ದಿಗ್ವಿಜಯ ನ್ಯೂಸ್​)
ಮನೆ ಕೆಲಸದಾಕೆಯ ಅಸಭ್ಯ ವರ್ತನೆ; ಮೂತ್ರದಲ್ಲೇ ನೆಲ ಒರೆಸಿದಳು!

7ನೇ ವೇತನ ಆಯೋಗ ವರದಿ ಜಾರಿಯಲ್ಲಿ ತಾರತಮ್ಯ; ಸರ್ಕಾರದ ನಡೆ ವಿರುದ್ಧ ಮಹಾನಗರ ಪಾಲಿಕೆ ನೌಕರರ ಆಕ್ರೋಶ

ಶನಿವಾರ ಬೆಳಗ್ಗೆ ನೂತನ 24 ಸಚಿವರ ಪದಗ್ರಹಣ; ಸಂಭವನೀಯ ಸಚಿವರ ಪಟ್ಟಿ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 15 =
Remember me
