ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ವಿರುದ್ಧ ನಡೆಯುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಗಣನೀಯವಾಗಿ ನಿಯಂತ್ರಿಸಲು ಹಾಗೂ ಹಣಕಾಸು ವಂಚನೆ ಮತ್ತು ಸೈಬರ್ ಚಟುವಟಿಕೆಗಳಿಗೆ ಭದ್ರತೆ ಒದಗಿಸಲು ಕರ್ನಾಟಕ ಸೈಬರ್ ಭದ್ರತಾ ನೀತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಹಾಗೂ ಈ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತು ಯುವಜನರಲ್ಲಿ ಅರಿವು ಮೂಡಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದರು.
ಇದನ್ನೂ ಓದಿ:ಆಗಸ್ಟ್ 21ಕ್ಕೆ ಭಾರತ್ ಬಂದ್‌ಗೆ ಕರೆ: ಯಾವೆಲ್ಲಾ ಸೇವೆ ಇರುತ್ತೆ? ಏನಿರೋದಿಲ್ಲ? ಇಲ್ಲಿದೆ ಡಿಟೇಲ್ಸ್‌
ವಿಧಾನಸೌಧದಲ್ಲಿ ಇಂದು ಸೈಬರ್ ಅಪಾರಾಧ ನಿಯಂತ್ರಣ ಮತ್ತು ಸೈಬರ್ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
18 ವರ್ಷದ ಒಳಗಿನ ಮಕ್ಕಳ ರಕ್ಷಣೆ, ತಂತ್ರಜ್ಞಾನ ಮತ್ತು ಜಾಲತಾಣಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಪರಿಣಾಮಗಳು, ಅಹಿತಕರ ಚಟುವಟಿಕೆಗಳಲ್ಲಿ ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಮಕ್ಕಳು ತಮಗೆ ಅರಿಯದೆ ಭಾಗಿಯಾಗುತ್ತಿರುವುದನ್ನು ನಿಯಂತ್ರಿಸುವುದು ಅತ್ಯಗತ್ಯವಾಗಿದೆ. ಎನ್.ಸಿ.ಆರ್.ಬಿ ಮತ್ತು ಎಸ್.ಸಿ.ಆರ್.ಬಿ ವರದಿಗಳಲ್ಲಿ ಮಕ್ಕಳ ವಿರುದ್ದ ನಡೆಯುತ್ತಿರುವ ಸೈಬರ್ ಅಪಾರಾಧಗಳ ಪ್ರಮಾಣವನ್ನು ಅವಲೋಕಿಸಿ ನಿಯಂತ್ರಿಸುವ ಕಾರ್ಯಗಳು ನಿರಂತರವಾಗಿ ಹಾಗೂ ಪರಿಣಮಕಾರಿಯಾಗಿ ಮುಂದುವರೆಯಬೇಕು ಎಂದರು.
ಕರ್ನಾಟಕ ಸೈಬರ್ ಭದ್ರತಾ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಿರುವ ನೆರವು ಹಾಗೂ ಮಾನವ ಸಂಪನ್ಮೂಲ ಒದಗಿಸಲು ಸರ್ಕಾರ ಸಿದ್ಧವಿದೆ. ಗೂಗಲ್, ಮೆಟಾ, ಫೇಸ್‍ಬುಕ್, ಮೈಕ್ರೋಸಾಫ್ಟ್, ಯುಟ್ಯೂಬ್ ಮತ್ತಿತರ ಕಂಪನಿಗಳ ಜೊತೆ ಸಮನ್ವಯ ಸಾಧಿಸಿ ಮಕ್ಕಳಿಗೆ ಸಂಬಂಧಿಸಿದ ಸಿ.ಎಸ್.ಎ.ಎಂ ಸಾಮಾಗ್ರಿಗಳನ್ನು ಗುರುತಿಸಿ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗುವುದು. ಸೈಬರ್ ವಂಚನೆಗೆ ಒಳಗಾದ ಮಕ್ಕಳಿಗೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸಹಯೋಗದಲ್ಲಿ ಪುನರ್‍ವಸತಿಗೆ ಕ್ರಮ ವಹಿಸಬೇಕು. ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಪಾಲಕರು ನಿರ್ಲಕ್ಷ್ಯ ತೋರಬಾರದು. ಸೈಬರ್ ಅಪರಾಧ ಪತ್ತೆ ಘಟಕಗಳು ಹಾಗೂ ಬ್ಯಾಂಕಿಂಗ್ ವಲಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಹಣಕಾಸು ವಂಚನೆಗಳನ್ನು ತ್ವರಿತವಾಗಿ ಪತ್ತೆ ಮಾಡಿ ತಪ್ಪಿತಸ್ಥರನ್ನು ಶಿಕ್ಷಿಸುವ ಕಾರ್ಯಗಳಾಬೇಕು. ಶಾಲಾ ಹಂತದಲ್ಲಿ ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಡಿಜಿಟಲ್ ಭದ್ರತೆ ಕುರಿತು ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳು ಸೂಚಿಸಿದರು.
ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯು ರಾಷ್ಟ್ರೀಯ ಸೇವಾ ಯೋಜನೆ, ಸಿ.ಐ.ಡಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ “ಸೈಬರ್ ಕ್ರೈಮ್ ಸೇಫ್ ಕ್ಯಾಂಪಸ್” ಹೆಸರಿನಡಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಶಾಲಾ ಹಂತಕ್ಕೂ ಈ ಮಾದರಿಯ ಕಾರ್ಯಕ್ರಮಗಳನ್ನು ವಿಸ್ತರಿಸುವ ಅಗತ್ಯವಿದೆ ಎಂದರು.
ಸೈಬರ್ ಅಪರಾಧ ನಡೆದ ಮರು ಗಳಿಗೆಯಲ್ಲಿಯೇ ಅದನ್ನು ಪತ್ತೆ ಮಾಡುವ ಕಾರ್ಯ ಚುರುಕುಗೊಳ್ಳಬೇಕು ಇದಕ್ಕಾಗಿ ಪ್ರಯೋಗಾಲಯಗಳ ಸಾಮಥ್ರ್ಯ ಹೆಚ್ಚಿಸಲು ಕ್ರಮ ವಹಿಸುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಗೃಹ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್. ರವಿ, ಅಪರಾಧ ವಿಭಾಗದ ಎ.ಡಿ.ಜಿ.ಪಿ ಹರಿಶೇಖರನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಸಿ.ಐ.ಡಿ ಡಿ.ಜಿ.ಪಿ ಅಬ್ದುಲ್ಲಾ ಸಲೀಂ, ಸೈಬರ್ ಆಂತರಿಕಾ ಭದ್ರತಾ ವಿಭಾಗದ ಡಿ.ಜಿ.ಪಿ ಪ್ರಣಬ್ ಮೊಹಾಂತಿ, ನಾರ್ಕೋಟಿಕ್ಸ್ ವಿಭಾಗದ ಪೊಲೀಸ್ ಅಧೀಕ್ಷಕಿ ಸವಿತಾ, ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Uttar Pradesh | ನರ್ಸ್ ಮೇಲೆ ಅತ್ಯಾಚಾರ: ವೈದ್ಯ ಸೇರಿ ಮೂವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
