ಬೆಂಗಳೂರು:ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಯತ್ನಿಸಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಟೀಕಿಸಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕಳೆದೊಂದು ವರ್ಷದಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಈಗ ದೆಹಲಿಯಲ್ಲಿ ವಿಪರೀತ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ; ಗ್ಯಾರಂಟಿಗಳನ್ನು ಸರಿಯಾಗಿ ತಲುಪಿಸುತ್ತಿಲ್ಲ, ಭ್ರಷ್ಟಾಚಾರ ಮೇರೆ ಮೀರಿದೆ ಎಂದು ದೂಷಿಸಿದರು.
ಮಂತ್ರಿಗಳು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರೆ. ಕೆಲವು ಸಚಿವರು ಡಿಸಿಎಂ ಆಗಲು ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಏನಾದರೂ ಮಾಡಲು ಮುಖ್ಯಮಂತ್ರಿಯಾಗಿ ಮಾಡಲು ಅವರ ಪರವಾಗಿ ಇರುವವರಿಂದ ಪ್ರಯತ್ನ ನಡೆದಿದೆ. ಇದೆಲ್ಲವನ್ನೂ ನೋಡಿದರೆ ಕರ್ನಾಟಕದಲ್ಲಿ ಅಭಿವೃದ್ಧಿಗೆ ಜಾಗ ಇಲ್ಲ ಎಂಬಂತಾಗಿದೆ ಎಂದು ಎನ್.ರವಿಕುಮಾರ್ ಆಕ್ಷೇಪಿಸಿದರು.
ರೈತರು, ಕಾರ್ಮಿಕರು, ವಿದ್ಯಾರ್ಥಿಗಳ ಗೋಳು ಗಮನಿಸುವವರು ಯಾರೂ ಇಲ್ಲ. ಖಜಾನೆ ಸಂಪೂರ್ಣ ಖಾಲಿಯಾಗಿದೆ. ಖಜಾನೆ ತುಂಬಿಸಲು ರಾಜ್ಯ ಸರಕಾರವು ಹಾಲಿನ ದರ ಏರಿಸಿದೆ; ಪೆಟ್ರೋಲ್- ಡೀಸೆಲ್ ದರ ಏರಿಸಿದೆ. ಮದ್ಯದ ದರ ಹೆಚ್ಚಿಸಿದೆ, ರಿಜಿಸ್ಟ್ರೇಶನ್ ಶುಲ್ಕವನ್ನೂ ಏರಿಸಿದೆ. ಹೀಗೆ ಬೆಲೆ ಏರಿಕೆಯ ಪರ್ವವನ್ನು ಸರಕಾರ ಕೈಗೊಂಡಿದೆ ಎಂದು ದೂರಿದರು.
ಹಾಲು ಉತ್ಪಾದಕರ 957 ಕೋಟಿ ರೂ. ಬಾಕಿ ಹಣವನ್ನು ಸರಕಾರ ಇನ್ನೂ ನೀಡಿಲ್ಲ. ರೈತರಿಗೆ 4 ಸಾವಿರ ಕೊಡಬೇಕಾದುದನ್ನು ನಿಲ್ಲಿಸಿದೆ. ವಿದ್ಯಾರ್ಥಿಗಳ ಸ್ಕಾಲರ್‍ಶಿಪ್ ಕೂಡ ಸ್ಥಗಿತವಾಗಿದೆ. 4 ಲಕ್ಷ ಕೂಲಿ ಕಾರ್ಮಿಕರ ಮಕ್ಕಳ ಸ್ಕಾಲರ್‍ಶಿಪ್ ಕೂಡ ನೀಡಿಲ್ಲ ಎಂದು ದೂರಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದದ್ದಲ್ ಅವರು ಹಗರಣದ ತನಿಖೆ ತೀವ್ರಗೊಳಿಸಲು ಹೇಳಿದ್ದಾರೆ. ಇದು ಒಂದು ರೀತಿ ಬೇಲಿಯೇ ಎದ್ದು ಹೊಲ ಮೇಯುವ ಸಂದರ್ಭದಂತಿದೆ. ದದ್ದಲ್ ಅವರು ಮೊದಲು ರಾಜೀನಾಮೆ ಕೊಡಬೇಕು ಎಂದು ರವಿಕುಮಾರ್ ಆಗ್ರಹಿಸಿದರು.
ಹಣ ಅಕ್ರಮ ವರ್ಗಾವಣೆ ಕುರಿತು ಸಭೆ ನಡೆಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, 700 ಖಾತೆಗೆ ಹಣ ಹಾಕಿದ ಸಂಬಂಧ, 187 ಕೋಟಿ ಹಗಲುದರೋಡೆ ಆದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಜು.3ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು.
ಗದಗದಲ್ಲಿ ಸರಗಳ್ಳತನ ಮಾಡುವ ಅಮ್ಜದ್ ಅಲಿ ಎಂಬ ಆರೋಪಿಯು ಸಹಚರರ ಜೊತೆ 4 ಜನ ಪೊಲೀಸರಿಗೆ ಹಲ್ಲೆ ಮಾಡಿದ್ದು, ಇದು ಕಾನೂನು- ಸುವ್ಯವಸ್ಥೆ ಕುಸಿತದ ಸ್ಪಷ್ಟ ಉದಾಹರಣೆ. ಅಮ್ಜದ್ ಅಲಿ ಕಾಪಾಡುವವರು ಯಾರು? ಪೊಲೀಸರು, ಎಸ್ಪಿ ಇದರೊಳಗೆ ಶಾಮೀಲಾಗಿದ್ದಾರಾ? ಇದರ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ತನಿಖೆ ನಡೆಸಬೇಕೆಂದು ಕೋರಿದರು.
ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯು ಜುಲೈ 4ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟಿಸಲಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರದ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ ಎಂದರು.
ಕೇಂದ್ರದಲ್ಲಿ ಎನ್‍ಡಿಎ ಮೂರನೇ ಬಾರಿ ಅಧಿಕಾರ ಪಡೆದ ಸಾಧನೆ ಸಂಬಂಧ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿಯವರನ್ನು ಇದೇವೇಳೆ ಅಭಿನಂದಿಸುತ್ತೇವೆ. ರಾಜ್ಯ ಸರಕಾರದ ವೈಫಲ್ಯವನ್ನು, ಭ್ರಷ್ಟಾಚಾರ, ದರ ಏರಿಕೆಯನ್ನು ಖಂಡಿಸುವ ಇನ್ನೊಂದು ನಿರ್ಣಯವನ್ನೂ ಅಂಗೀಕರಿಸುತ್ತೇವೆ. ಪಕ್ಷ ಸಂಘಟನೆ ಕುರಿತು ಚರ್ಚಿಸಲಿದ್ದೇವೆ ಎಂದು ಎನ್.ರವಿಕುಮಾರ್ ವಿವರಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × two =
Remember me
