ತುಮಕೂರು: ಜಿಲ್ಲೆಯಲ್ಲಿ ಕರೊನಾ ವೈಸರ್​ ಸೋಂಕಿಗೆ ವೃದ್ಧ ಬಲಿಯಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಮೊದಲು ಹಾಗೂ ರಾಜ್ಯದಲ್ಲಿ ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 3ಕ್ಕೆ ಏರಿದೆ.
ಶಿರಾ ಮೂಲದ 65ರ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಿ.ಸಿ.ರಾಕೇಶ್​ ಕುಮಾರ್​ ಮಾಹಿತಿ ನೀಡಿದ್ದಾರೆ.
ಮಾರ್ಚ್​ 23ರಂದು ಇವರು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತ್ಯೇಕ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ ವೈರಸ್​ ಸೋಂಕು ಇರುವುದು ದೃಢಪಟ್ಟಿತ್ತು ಎಂದು ಅವರು ಹೇಳಿದರು.
ಮೃತ ದೆಹಲಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಮಾ.5ರಂದು ತೆರಳಿದ್ದರು. ದೆಹಲಿಯ ಜಾಮಿಯಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇವರ ಜತೆ 13 ಮಂದಿ ಪ್ರಯಾಣ ಬೆಳೆಸಿದ್ದರು ಎಂದು ಪತ್ತೆಯಾಗಿದೆ. ಮೃತಪಟ್ಟ ಕುಟುಂಬದ 20 ಮಂದಿ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
VIEDO| ಲಾಕ್​ಡೌನ್​ ಅವಧಿ ಮುಗಿದ ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನ ನಿಗದಿ: ಸಚಿವ ಸುರೇಶ್​ ಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − five =
Remember me
