ಬೆಳಗಾವಿ:ಸರ್ಕಾರಿ ನೌಕರರೇ ಹುಷಾರ್​! ಕುಂಟು ನೆಪ ಹೇಳಿ ಚುನಾವಣಾ ಕರ್ತವ್ಯದಿಂದ ನುಣಿಚಿಕೊಂಡರೆ ಪೊಲೀಸರು ಸುಮ್ಮನೆ ಬಿಡುವುದಿಲ್ಲ. ಮನೆಗೆ ಬಂದು ಅರೆಸ್ಟ್​ ಮಾಡಿ, ಕರೆದೊಯ್ಯುತ್ತಾರೆ!
ಇದನ್ನೂ ಓದಿ:ಕಳೆದ 6 ವರ್ಷಗಳಲ್ಲಿ 10,933 ಎನ್​ಕೌಂಟರ್​! ಕ್ರಿಮಿನಲ್​ಗಳ ವಿರುದ್ಧ ಯೋಗಿ ಸರ್ಕಾರ ಕ್ರಮ
ಪಾರದರ್ಶಕ ಹಾಗೂ ಶಾಂತಿಯುತ ಚುನಾವಣೆ ನಡೆಸುವುದಕ್ಕೆ ಅಗತ್ಯ ಸಿಬ್ಬಂದಿಯೊಂದಿಗೆ ಸನ್ನದ್ಧವಾಗಿರುವ ಚುನಾವಣಾ ಆಯೋಗ ಇಂಥದ್ದೊಂದು ಖಡಕ್​ ಸಂದೇಶ ರವಾನಿಸಿದೆ. ಸುಳ್ಳು ಹೇಳಿ ಚುನಾವಣೆ ಕರ್ತವ್ಯ ತಪ್ಪಿಸಿಕೊಳ್ಳುವಂತಿಲ್ಲ. ಚುನಾವಣೆಗೆ ಡ್ಯೂಟಿ ಹಾಕಿದರೂ ಹಾಜರಾಗದಿದ್ದರೆ ಅಂತಹವರ ಮೇಲೆ ಎಫ್​ಐಆರ್​ ದಾಖಲಿಸಿ, ಅರೆಸ್ಟ್​ ಮಾಡಿ ಕರ್ತವ್ಯಕ್ಕೆ ಹಾಜರುಪಡಿಸುವ ನಿಯಮವಿದೆ. ಈ ಕಟ್ಟುನಿಟ್ಟಿನ ಕ್ರಮದ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಯೋಗ ಈಗಾಗಲೆ ಸೂಚಿಸಿದೆ.
ಹೆರಿಗೆ ಹಂತದಲ್ಲಿರುವ ಗರ್ಭಿಣಿಯರು, 3 ಅಥವಾ 4 ತಿಂಗಳು ಅವಧಿಯ ನಿವೃತ್ತಿ ಅಂಚಿನಲ್ಲಿರುವವರು ಹಾಗೂ ಗಂಭೀರವಾದ ಆರೋಗ್ಯ ಸಮಸ್ಯೆಗಳಿದ್ದವರಿಗೆ ಮಾತ್ರ ಚುನಾವಣಾ ಕರ್ತವ್ಯದಿಂದ ರಿಯಾಯತಿ ಇದೆ. ಇನ್ನುಳಿದವರಿಗೆ ರಿಯಾಯತಿ ಅನ್ವಯಿಸುವುದಿಲ್ಲ. ಮೇಲಧಿಕಾರಿ ಹಾಗೂ ಪ್ರಭಾವಿಗಳ ಮೂಲಕ ಹೇಳಿಸಿ, ಚುನಾವಣೆ ಕರ್ತವ್ಯದಿಂದ ದೂರ ಉಳಿಯುವುದಕ್ಕೆ ಪ್ರಯತ್ನಿಸಿದರೆ ಅಂತಹವರ ಮೇಲೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಚುನಾವಣಾಧಿಕಾರಿಗಳು ಖಡಕ್​ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​-ಬಿಜೆಪಿ ಉತ್ತರ-ದಕ್ಷಿಣ ಗುರಿ; ಹೆಚ್ಚು ಸ್ಥಾನಕ್ಕೆ ಎರಡೂ ಪಕ್ಷಗಳಿಂದ ಸ್ಪಷ್ಟ ಲೆಕ್ಕಾಚಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 6 =
Remember me
