ಬೆಂಗಳೂರು:ಮೂರು ಆನೆ ದಂತಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಬಾಗಲಗುಂಟೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಮಾಗಡಿ ತಾಲೂಕಿನ ಕುದೂರು ಮೂಲದ ಲೋಕೇಶ್​ (44) ಮತ್ತು ಮಂಜುನಾಥ್​ ಪೂಜಾರಿ (28) ಬಂಧಿತರು. ಲೋಕೇಶ್​ ಆಟೋ ಚಾಲಕನಾಗಿದ್ದಾನೆ. ಮಂಜುನಾಥ್​ ಪೂಜಾರಿ ಮಾದಿಗೊಂಡನಹಳ್ಳಿಯ ಡಾಬಾದಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲ ದಿನಗಳ ಹಿಂದೆ ರಾಮನಗರದ ಕೃಷ್ಣ ಎಂಬಾತ ಲೋಕೇಶ್​ಗೆ ಪರಿಚಯವಾಗಿದ್ದ. ಆತ ತನ್ನ ಬಳಿಯಿದ್ದ ಆನೆದಂತಗಳನ್ನು 5 ಲಕ್ಷ ರೂ.ಗೆ ಮಾರಾಟ ಮಾಡಿಸುವಂತೆ ಲೋಕೇಶ್​ಗೆ ಹೇಳಿದ್ದ. ಹೀಗಾಗಿ, ಮಂಜುನಾಥ್​ ಪೂಜಾರಿಯನ್ನು ಸಂಪರ್ಕಿಸಿ ಆನೆದಂತ ಮಾರಾಟದ ವಿಚಾರವನ್ನು ತಿಳಿಸಿದ್ದ.
ಆನೆದಂತಕ್ಕೆ ಬೆಂಗಳೂರಿನಲ್ಲಿ ಹೆಚ್ಚಿನ ಬೇಡಿಕೆ ಇದೆ. ಅಲ್ಲಿ ಮಾರಾಟ ಮಾಡಿದರೆ ಹೆಚ್ಚಿನ ಹಣ ಸಿಗುತ್ತದೆ ಎಂದು ಲೋಕೇಶ್​ಗೆ ಮಂಜುನಾಥ್​ ಹೇಳಿದ್ದ. ಅದರಂತೆ ಅವರಿಬ್ಬರೂ ಶುಕ್ರವಾರ ಬೆಳಗ್ಗೆ 10 ಗಂಟೆಯಲ್ಲಿ ಎಂ.ಇ.ಐ. ಲೇಔಟ್​ ಮೈದಾನದ ಬಳಿ ಮಾರಾಟಕ್ಕೆ ಬಂದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 3 ಆನೆದಂತಗಳನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಪ್ರಮುಖ ಆರೋಪಿ ಕೃಷ್ಣ ಎಂಬಾತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ದೆವ್ವ ಬಿಡಿಸೋದಾಗಿ ಯುವತಿಯನ್ನು ಪೊದೆಯೊಳಕ್ಕೆ ಕರೆದೊಯ್ದ ಮಂತ್ರವಾದಿ-ಮಗ, ಇವರ ದುಷ್ಕೃತ್ಯ ನೋಡಿದ್ರೆ ಬೆಚ್ಚಿಬೀಳ್ತೀರಿ!

ನಾನು ಮಾಜಿ ಡಿಸಿಎಂ ಅಣ್ಣನ ಮಗಳು… ಮದುವೆ ಆಗದಿದ್ರೆ ರೇಪ್​ ಕೇಸ್​ ಹಾಕ್ತೀನಿ: ಬೆಚ್ಚಿಬೀಳಿಸುತ್ತೆ ಆಕೆಯ ಹಿಸ್ಟರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
