ಕೊಡಗು:ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೋಡು ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಸುಮಾರು 18 ವರ್ಷದ ಹೆಣ್ಣಾನೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.

ಹಾವೇರಿ:ಮಹಿಳೆ ಮೇಲೆ ದಾಳಿ ಮಾಡಿದ ನಂತರ ಬಾಯಿ ನೋವಿನಿಂದ ಬಳಲುತ್ತಿದ್ದ ಚಿರತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಸಿದ್ದಮ್ಮ ಬಣಗಾರ ಎಂಬ ಮಹಿಳೆಯ ಚಿತೆ ದಾಳಿ ಮಾಡಿತ್ತು. ಬಳಿಕ ಗ್ರಾಮದ ಬಳಿಯಿರುವ ಅಡಕೆ ತೋಟದಲ್ಲಿ ಚಿರತೆ ಮೃತ ದೇಹ ಪತ್ತೆಯಾಗಿದೆ.
ಇದನ್ನೂ ಓದಿ:ಕಲಬುರಗಿ | ಸಾವಿಗೆ ಶರಣಾದ ಹೆಡ್​ ಕಾನ್ಸ್​​​​ಸ್ಟೇಬಲ್
ಇಂದು ಬೆಳಗ್ಗೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಮಹಿಳೆ ಮೇಲೆ‌ ದಾಳಿ ಮಾಡಿದೆ. ಗ್ರಾಮಸ್ಥರು ಚಿರತೆಯನ್ನು ಓಡಿಸುತ್ತಿದ್ದಂತೆ ಅಡಕೆ ತೋಟದಲ್ಲಿ ಕಣ್ಮರೆಯಾಗಿದೆ. ಸುಮಾರು ಒಂದು ಗಂಟೆಯ ಬಳಿಕ ಚಿರತೆಯ ಮೃತ ದೇಹ ಪತ್ತೆಯಾಗಿದೆ. ಬಾಯಿ ನೋವಿನಿಂದ ಬಳಲುತ್ತಿದ್ದ ಚಿರತೆ ಆಹಾರವಿಲ್ಲದೆ ನಿತ್ರಾಣಗೊಂಡು ಮೃತಪಟ್ಟಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
