ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಿರುವ ಸರಕಾರವು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಅಧ್ಯಕ್ಷತೆಯಲ್ಲಿ 9 ಉದ್ಯಮ ವಲಯಗಳಿಗೆ ವಿಷನ್ ಗ್ರೂಪ್ ಗಳನ್ನು ರಚಿಸಿ, ಆದೇಶ ಹೊರಡಿಸಿದೆ.
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇವುಗಳಿಗೆ ಉಪಾಧ್ಯಕ್ಷರಾಗಿದ್ದು, ಎಲ್ಲ ವಿಷನ್ ಗ್ರೂಪ್ ಗಳಿಗೂ ಆಯಾ ವಲಯದ ಗಣ್ಯ ಉದ್ಯಮಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಸ್ಪಷ್ಟ ಗುರಿಗಳೊಂದಿಗೆ ವಿಷನ್ ಗ್ರೂಪ್ ಗಳನ್ನು ರಚಿಸಲಾಗುವುದು ಎಂದು ಹೇಳಿದ್ದ ಸರಕಾರವು ವೈಮಾಂತರಿಕ್ಷ ಮತ್ತು ರಕ್ಷಣೆ, ಮಶೀನ್ ಟೂಲ್ಸ್, ಎಲೆಕ್ಟ್ರಾನಿಕ್ಸ್ ಸಿಸ್ಟಂ ಡಿಸೈನ್ ಮತ್ತು ಮ್ಯಾನಫ್ಯಾಕ್ಚರಿಂಗ್, ಫಾರ್ಮಸುಟಿಕಲ್ಸ್, ಕೋರ್ ಮ್ಯಾನಫ್ಯಾಕ್ಚರಿಂಗ್, ಆಟೋಮೋಟೀವ್/ಎಲೆಕ್ಟ್ರಿಕ್ ವೆಹಿಕಲ್ಸ್, ಇಂಡಸ್ಟ್ರಿ 5.0, ಜವಳಿ ಮತ್ತು ಹಸಿರು ಇಂಧನ ವಲಯಗಳಿಗೆ ಈ ಉಪಕ್ರಮವನ್ನು ಕೈಗೊಂಡಿದೆ.
ಈ ವಿಷನ್ ಗ್ರೂಪ್ ಗಳು ಉದ್ಯಮಗಳ ಬೆಳವಣಿಗೆ ಸಾಧಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಗೆ ಅಗತ್ಯ ಮಾರ್ಗದರ್ಶನ ಮಾಡಲಿದ್ದು, ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳನ್ನು ಶೋಧಿಸಲಿವೆ. ವಿಷನ್ ಗ್ರೂಪ್ ಗಳಿಗೆ ನೇಮಕವಾಗಿರುವ ಸದಸ್ಯರ ವಿವರ ಹೀಗಿದೆ:
ವೈಮಾಂತರಿಕ್ಷ ಮತ್ತು ರಕ್ಷಣೆ
ಅಪ್ಪಾರಾವ್ ವೆಂಕಟ ಮಲ್ಲವರಪು (ಸೆಂಟಮ್ ಎಲೆಕ್ಟ್ರಾನಿಕ್ಸ್), ಉದಯಂತ್ ಮಲ್ಹೋತ್ರ (ಡೈನಾಮಿಕ್ ಟೆಕ್ನಾಲಜೀಸ್), ಎಚ್ ಜಿ ಚಂದ್ರಶೇಖರ್ (ಸಾಸ್ಮೋಸ್), ಅಶ್ವನಿ ಭಾರ್ಗವ (ಬೋಯಿಂಗ್), ಕೃತ್ತಿವಾಸ ಮುಖರ್ಜಿ (ಏರ್ ಬಸ್), ಸಮಿತ್ ರಾಯ್ (ರೇಥಿಯಾನ್), ಸಿ ಬಿ ಅನಂತಕೃಷ್ಣನ್ (ಎಚ್ಎಎಲ್).
ಇ.ಎಸ್.ಡಿ.ಎಂ
ಜಿತೇಂದ್ರ ಛಡ್ಡಾ (ಗ್ಲೋಬಲ್ ಫೌಂಡ್ರೀಸ್), ಸಂತೋಷ್ ಕುಮಾರ್ (ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್), ರಮೇಶ್ ಕುನ್ಹಿಕಣ್ಣನ್ (ಕೇನ್ಸ್ ಟೆಕ್ನಾಲಜಿ), ವಿನಯ್ ಶೆಣೈ (ಇನ್ಫೈನ್ ಆನ್)), ವೇಣು ನೂಗೂರಿ (ಹಿಟಾಚಿ ಎನರ್ಜಿ), ಎಸ್ ಕೆ ಮೂರ್ತಿ (ಇಂಟೆಲ್), ಚರಣ್ ಗುರುಮೂರ್ತಿ (ಟಾಟಾ ಸೆಮಿಕಂಡಕ್ಟರ್ಸ್)
ಆಟೋ/ಇ.ವಿ
ಗುರುಪ್ರಸಾದ್ ಮುದ್ಲಾಪುರ (ಬಾಶ್), ಅರುಣ್ ಮಿತ್ತಲ್ (ಎಕ್ಸೈಡ್), ಸುದೀಪ್ ದಳವಿ (ಟೊಯೋಟ), ಕಮಲ್ ಬಾಲಿ (ವೋಲ್ವೊ), ಸುಶಾಂತ್ ನಾಯಕ್ (ಟಾಟಾ ಮೋಟಾರ್ಸ್).
ಮಶೀನ್ ಟೂಲ್ಸ್
ಸಂಜಯ್ ಕೌಲ್ (ಟಿಮ್ ಕೆನ್), ಬಿ ಹರೀಶ್ (ಎಸಿಇ), ಲಕ್ಷ್ಮೀಕಾಂತನ್ ಕೃಷ್ಣನ್ (ಟೇಗು ಟೆಕ್), ಎ ವೆಂಕಟಕೃಷ್ಣನ್ (ಯೂಕೆನ್), ತರಂಗ್ ವಿ ಪಾರೀಕ್ (ವೈಜಿ-1).
ಫಾರ್ಮಾಸುಟಿಕಲ್ಸ್
ಜಿ ವಿ ಪ್ರಸಾದ್ (ರೆಡ್ಡಿ ಲ್ಯಾಬ್ಸ್), ಸಿದ್ಧಾರ್ಥ ಮಿತ್ತಲ್ (ಬಯೋಕಾನ್), ಸಮೀರ್ ಕೇತ್ರಪಾಲ್ (ಜ್ಯುಬಿಲಿಯೆಂಟ್ ಲೈಫ್ ಸೈನ್ಸಸ್), ವಿಷ್ಣುಕಾಂತ ಭೂತದ (ಶಿಲ್ಪಾ), ಉಮಾಂಗ್ ವೋಹ್ರ (ಸಿಪ್ಲಾ), ದಿಲೀಪ್ ಸುರಾನ (ಮೈಕ್ರೋಲ್ಯಾಬ್ಸ್).
ಕೋರ್ ಮ್ಯಾನಫ್ಯಾಕ್ಚರಿಂಗ್
ವಿನೋದ್ ನೋವಲ್ (ಜಿಂದಾಲ್), ಕೆ ಸಿ ಜಾನ್ವಾರ್ (ಅಲ್ಟ್ರಾ ಟೆಕ್), ರಾಹುಲ್ ಕುಮಾರ್ (ಬಲ್ದೋಟ), ಬಹಿರಜಿ ಘೋರ್ಫಡೆ (ಸ್ಮಿಯೋರ್), ಆರ್ ಬಿ ಎಂ ತ್ರಿಪಾಠಿ (ಜೆ ಕೆ ಸಿಮೆಂಟ್).
ಇಂಡಸ್ಟ್ರಿ 5.0
ಅಕ್ಷಯ್ ಸಿಂಘಾಲ್ (ಲಾಗ್ 9), ಮಲ್ಲಿಕಾರ್ಜುನ್ ಸಂತಾನಕೃಷ್ಣನ್ (ಜಿ ಎಸ್ ಗ್ಲೋಬಲ್ ವೆಂಚರ್ಸ್), ರೋಹನ್ ಗಣಪತಿ (ಬೆಲಾಟ್ರಿಕ್ಸ್), ಅವೈಸ್ ಅಹಮದ್ (ಪಿಕ್ಸೆಲ್), ಸೌವಿಕ್ ಸೇನಗುಪ್ತ (ಇನ್ಫ್ರಾ ಮಾರ್ಕೆಟ್), ಗದಾಧರ ರೆಡ್ಡಿ (ನೋಪೋ ನ್ಯಾನೋ ಟೆಕ್ನಾಲಜೀಸ್).
ಜವಳಿ
ಪಂಕಜ್ ನಾರೂಲ (ಶಾಹಿ ಎಕ್ಸ್ಪೋರ್ಟ್ಸ್), ಗೌತಮ್ ಚಕ್ರವರ್ತಿ (ಗೋಕಲದಾಸ್), ವಿಶಾಖ್ ಕುಮಾರ್ (ಆದಿತ್ಯ ಬಿರ್ಲಾ ಮಧುರಾ ಎಫ್ & ಎಲ್), ವಿ ಎಸ್ ಗಣೇಶ್ (ಪೇಜ್ ಇಂಡಸ್ಟ್ರೀಸ್), ಪುನೀತ್ ಲಾಲಭಾಯ್ (ಅರವಿಂದ್ ಮಿಲ್ಸ್),
ಹಸಿರು ಇಂಧನ
ಕಿಶೋರ್ ನಾಯರ್ (ಅವಾಡ ಎನರ್ಜಿ), ವಿವೇಕ್ ಸಿಂಗ್ಲಾ (ರೆನ್ಯೂ ಪವರ್), ಕೃಷ್ಣ ರೇವಂಕರ್ (ಎಂವೀ ಸೋಲಾರ್ ಸಿಸ್ಟಮ್ಸ್), ಶರದ್ ಪುಂಗಾಲಿಯ (ಆ್ಯಮ್ ಪ್ಲಸ್ ಸೋಲಾರ್), ಆಶಿಶ್ ಖನ್ನಾ (ಟಾಟಾ ಪವರ್ ಸೋಲಾರ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
