ಬೆಂಗಳೂರು:ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಎನ್‌ಇಕೆಎಸ್‌ಆರ್‌ಟಿಸಿ)ಹೆಸರನ್ನು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ರಾಜ್ಯ ಸರ್ಕಾರ ಬುಧವಾರ ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನಿಗಮಗಳ ಅಧಿನಿಯಮ 1950ರ ಪ್ರಕಾರ ಮರು ನಾಮಕರಣ ಮಾಡಿದ್ದು, ಇನ್ನುಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಜಾರಿಗೆ ಬರಲಿದೆ. ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ಬಳಿಕ ಈಶಾನ್ಯ ಸಾರಿಗೆ ಈ ರೀತಿ ಮರು ನಾಮಕರಣ ಮಾಡಬೇಕೆಂದು ಸ್ಥಳೀಯರಿಂದ ಹಲವು ದಿನಗಳಿಂದ ಒತ್ತಡ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಹೆಸರನ್ನು ಮರು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಇಕೆಎಸ್‌ಆರ್‌ಟಿಸಿ)ವನ್ನು 2000ರ ಆಗಸ್ಟ್ 15ರಂದು ಸ್ಥಾಪಿಸಲಾಗಿತ್ತು. ಈ ಸಂಸ್ಥೆಯ ವಿಭಾಗದಲ್ಲಿ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಹೊಸಪೇಟೆ ಜಿಲ್ಲೆಗಳಿಗೆ ಒಳಪಡಲಿದೆ.
ಈ ನಿಗಮದಲ್ಲಿ ಪ್ರಸ್ತುತ 4,700 ವಾಹನಗಳು, 19,298 ಉದ್ಯೋಗಿಗಳು ಸೇವೆ ಸಲ್ಲಿಸುತ್ತಿದ್ದಾರೆ. ದಿನಕ್ಕೆ 4,254 ಟ್ರಿಪ್‌ಗಳ ಬಸ್‌ಗಳು ಸಂಚಾರ ನಡೆಸುತ್ತಿದ್ದು ಪ್ರತಿ ದಿನ 14.50 ಪ್ರಯಾಣಿಕರು ಈ ನಿಗಮದ ಸೇವೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ. ಮಹಾರಾಷ್ಟ್ರಕ್ಕೆ, ತೆಲಂಗಾಣಕ್ಕೆ, ಆಂಧ್ರಪ್ರದೇಶ, ತಮಿಳುನಾಡಿಗೆ 2 ಹಾಗೂ ಗೋವಾ ರಾಜ್ಯಕ್ಕೆ ಪ್ರತಿದಿನ ಕಾರ್ಯಚರಣೆ ನಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಂಸ್ಥೆಗಳ ವಿಭಜನೆ ಇತಿಹಾಸ: ಪ್ರಾರಂಭದಲ್ಲಿ ಕೆಎಸ್‌ಆರ್‌ಟಿಸಿ ಮಾತ್ರ ಇತ್ತು. ಇದನ್ನು ರಾಜ್ಯ ಸರ್ಕಾರ 1997ರ ಆಗಸ್ಟ್ 15ರಂದು ವಿಂಗಡಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಿತು. ಬಳಿಕ 2000ದ ಆಗಸ್ಟ್ 18ರಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಕಲಬುರಗಿಯಲ್ಲಿ ಸ್ಥಾಪಿಸಿ ಆರ್ಥಿಕವಾಗಿ ಸ್ವತಂತ್ರಗೊಳಿಸಲಾಗಿತ್ತು.
ಪ್ರಧಾನಿ ಮೋದಿ ನೂತನ ಸಚಿವ ಸಂಪುಟದಲ್ಲಿ 27 ಒಬಿಸಿ ಮಂತ್ರಿಗಳು

ನಟ ಶಾಹಿದ್​ ಕಪೂರ್ 6ನೇ ವಿವಾಹ ವಾರ್ಷಿಕೋತ್ಸವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 4 =
Remember me
