ಮಂಗಳೂರು:ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಇಲ್ಲದೆ ಕೂಗಿದರೆ ಆಜಾನ್ ಕೇಳುವುದಿಲ್ಲವೇ? ಅಲ್ಲಾನೇನು ಕಿವುಡನೇ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದದ ಕಿಡಿ ಹೊತ್ತಿಸಿದ್ದರು. ಈ ಸಂಬಂಧ ಪತ್ರಕರ್ತರು ಈಶ್ವರಪ್ಪ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ತಮ್ಮ ಹೇಳಿಕೆಗೆ ಸಮರ್ಥನೆ ಮಾಡಿದ್ದಾರೆ.
ನಿಮಗೆ ಅಭಿವೃದ್ಧಿ ವಿಚಾರ ಬೇಕಾಗಿಲ್ಲ. ಜನರನ್ನು ಪ್ರಚೋದನೆ ಮಾಡುತ್ತಾ, ಸಮಾಜದಲ್ಲಿ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತೀರಿ ಎಂದು ಪತ್ರಕರ್ತರಿಂದ ಪ್ರಶ್ನೆ ಎದುರಾಗುತ್ತಿದ್ದಂತೆ, ಸುಪ್ರೀಂಕೋರ್ಟ್ ಆದೇಶವಿದ್ದು, ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇತ್ಯರ್ಥವಾಗಲಿದೆ ಎಂದರು.
ಪರೀಕ್ಷೆ ಸಮಯದಲ್ಲಿ ಆಜಾನ್ ಕೂಗುವುದರಿಂದ ಮಕ್ಕಳಿಗೆ ತೊಂದರೆಯಾಗುವುದಿಲ್ಲವೇ? ದಿನಾ ಬೆಳಗ್ಗೆ, ರಾತ್ರಿ ಎನ್ನದೆ ಆಜಾನ್ ಕೂಗುತ್ತಾರೆ, ಇದೆಲ್ಲ ನಿಲ್ಲಬೇಕು. ನನಗೆ ಭಾಷಣ ಮಾಡುತ್ತಿದ್ದಾಗ ಆಜಾನ್ ಕೇಳಿ ತಲೆನೋವು ಬಂತು, ಹೀಗಾಗಿ ನಾನು ಕೆಲ ಮಾತುಗಳನ್ನು ಹೇಳಿದೆ ಎಂದು ವಿವಾದದ ಸ್ವರೂಪ ಪಡೆದುಕೊಂಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದರು.
ಮುಸ್ಲಿಮರ ಓಟು ಬೇಡ ಎನ್ನುವುದಿಲ್ಲ, ರಾಷ್ಟ್ರೀಯವಾದಿ ಮುಸ್ಲಿಮರು ಮತ ಹಾಕುತ್ತಾರೆ. ನನ್ನ ಕ್ಷೇತ್ರದಲ್ಲಿ ಮುಸ್ಲಿಮರ ವಾರ್ಡಿನಲ್ಲಿ ನನಗೆ ಮತ ಬೀಳುವುದಿಲ್ಲ. ಆದರೆ ಅವರಿಗೆ ಸವಲತ್ತು ಕೊಡಿಸುತ್ತೇನೆ. ಶಾಸಕನಾಗಿ ಎಲ್ಲರ ಪ್ರತಿನಿಧಿ ಆಗಿರುತ್ತೇನೆ. ಮುಸ್ಲಿಮರು ಮೋದಿ ಕೆಲಸ ನೋಡಿ ಮತ ಹಾಕುತ್ತಾರೆ ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ:ಉರಿಗೌಡ – ದೊಡ್ಡ ನಂಜೇಗೌಡರ ಹೆಸರಿನ ತಾತ್ಕಾಲಿಕ ದ್ವಾರ ತೆರವುಗೊಳಿಸಿದ್ರೆ ಏನಾಯ್ತು? ನಾವು ಶಾಶ್ವತ ದ್ವಾರ ನಿರ್ಮಾಣ ಮಾಡ್ತೇವೆ; ಸಿ.ಟಿ.ರವಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 6 =
Remember me
