ಕಲಬುರಗಿ:ಆರ್​ಎಸ್​ಎಸ್​ ನಿಷೇಧಿಸುವುದಾಗಿ ಹೇಳುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಇನ್ನು ಬಚ್ಚಾ ಅವನೇನು ಮಾಡಲು ಸಾದ್ಯ ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್​.ಈಶ್ವರಪ್ಪ ಹರಿಹಾಯ್ದಿದ್ದಾರೆ.
ಈ ಕುರಿತು ಮಾತನಾಡಿದ ಈಶ್ವರಪ್ಪ ಆರ್​ಎಸ್​ಎಸ್​ ನಿಷೇಧಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅದರ ಹೊರತಾಗಿಯೂ ಪ್ರಿಯಾಂಕ ಖರ್ಗೆ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಆರ್​ಎಸ್​ಎಸ್​ ದೇಶಭಕ್ತರ ಸಂಘಟನೆಯಾಗಿದ್ದು ದೇಶದ್ರೋಹಿಗಳಿಗೆ ಸಿಂಹಸ್ವಪ್ನವಾಗಿದೆ. ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ ಮತ್ತು ದೇಶಾದ್ಯಂತ ಕೋಟ್ಯಂತರ ಕಾರ್ಯಕರ್ತರನ್ನು ಹೊಂದಿದೆ. ಇದರ ಹೊರತಾಗಿಯೂ ನಿಷೇಧಿಸುವುದಾಗಿ ಹೇಳುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಇನ್ನು ಬಚ್ಚಾ ಅವನೇನು ಮಾಡಲು ಸಾದ್ಯ ಎಂದು ಕಿಡಿಕಾರಿದ್ದಾರೆ.
ಇನ್ನು ಗ್ಯಾರಂಟಿಗಳ ಅನುಷ್ಠಾನದ ಕುರಿತು ಪ್ರತಿಕ್ರಿಯಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ದಿನವೇ ಐದು ಭರವಸೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್​​ ನಾಯಕರು ಹೇಳಿದ್ದರು. ಇದೀಗ ಎರಡು ಕ್ಯಾಬಿನೆಟ್​ ಸಭೆಗಳು ನಡೆದಿದ್ದರೂ ಇದುವರೆಗೂ ಗ್ಯಾರಂಟಿಗಳಿಗೆ ಅನುಮೋದನೆ ಸಿಕ್ಕಿಲ್ಲ.
ಇದನ್ನೂ ಓದಿ:ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್​ ಶಾಸಕ ಟಿಎಂಸಿಗೆ ಸೇರ್ಪಡೆ
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಆದರೆ, ನಂತರ ಈ ವರ್ಷ ಪಾಸಾದವರಿಗೆ ಮಾತ್ರ ಎಂದು ಹೇಳುವ ಮೂಲಕ ದ್ರೋಹ ಬಗೆದಿದೆ. ಗ್ಯಾರಂಟಿಗಳನ್ನು ನೋಡಿ ಕಾಂಗ್ರೆಸ್​ಗೆ ಜನ ಮತ ಹಾಕಿದ್ದಾರೆ ಹೀಗಾಗಿ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿಗದ್ದಾರೆ.
ನಾವು ಸುಖಾಸುಮ್ಮನೆ ಎಲ್ಲರನ್ನೂ ಟೀಕಿಸುವುದಿಲ್ಲ ಒಂದು ತಿಂಗಳೂ ಕಾಯ್ದು ನೋಡುತ್ತೇವೆ ಆಗಲೂ ಜಾರಿಯಾಗಲಿಲ್ಲ ಎಂದರೆ ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದು ಕಲಬುರ್ಗಿಯಲ್ಲಿ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − four =
Remember me
