ಬೆಂಗಳೂರು:ಬಹುರಾಷ್ಟ್ರೀಯ ಕಂಪನಿ ಲುಲು ಗ್ರೂಪ್, ರಫ್ತು ಆಧಾರಿತ ಸುಸಜ್ಜಿತ ಆಹಾರ ಸಂಸ್ಕರಣ ಘಟಕವನ್ನು ವಿಜಯಪುರದಲ್ಲಿ ಸ್ಥಾಪಿಸುತ್ತಿದ್ದು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಜತೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸಿದರು.
ಖನಿಜ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಲುಲು ಗ್ರೂಪ್‌ನ ರಫ್ತು ವಿಭಾಗದ ಸಿಇಒ ನಜ್ಬುದ್ಧೀನ್, ನಿರ್ದೇಶಕ ಅನಂತ ಸೇರಿದಂತೆ ಅವರ ತಂಡ ಭಾಗವಹಿಸಿತ್ತು.
ಲುಲು ಗ್ರೂಪ್‌ನ ತಂಡ ಸದ್ಯದಲ್ಲೇ ವಿಜಯಪುರಕ್ಕೆ ಭೇಟಿ ನೀಡಲಿದ್ದು, ಆಹಾರ ಸಂಸ್ಕರಣಾ ಘಟಕವನ್ನು ಎಲ್ಲಿ ಸ್ಥಾಪಿಸಿದರೆ ಸೂಕ್ತ ಎಂಬುದನ್ನು ಖುದ್ದು ಸ್ಥಳ ಪರಿಶೀಲಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ಸ್ವಿಟ್ಜರ್ಲೆಂರ್ಡ್‌ನ ದಾವೋಸ್‌ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ವಿಜಯಪುರದಲ್ಲಿ 300 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಲುಲು ಗ್ರೂಪ್ ಆಸಕ್ತಿ ತೋರಿ, ಒಪ್ಪಂದಕ್ಕೂ ಸಹಿ ಹಾಕಿತ್ತು. ಅದರ ಮುಂದುವರಿದ ಭಾಗವಾಗಿ ಇವತ್ತಿನ ಈ ಸಭೆ ನಡೆದಿದ್ದು, ಸರ್ಕಾರದ ಕಡೆಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ದೇಶಿ ಮತ್ತು ರಫ್ತು ಮಾರುಕಟ್ಟೆಗಳಿಗೆ ಪೂರೈಸಲು ಸ್ಥಳೀಯ ಆಹಾರ ಉತ್ಪನ್ನಗಳನ್ನು ಖರೀದಿಸಿ ಅವುಗಳ ಶ್ರೇಣೀಕರಣ, ವಿಂಗಡಣೆ ಮತ್ತು ಪ್ಯಾಕೇಜಿಂಗ್ ಉದ್ದೇಶಕ್ಕೂ ಈ ಘಟಕ ನೆರವಾಗಲಿದೆ ಎಂದು ವಿವರಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
