ಕೊಳ್ಳೇಗಾಲ:ಮೈಯೆಲ್ಲ ನರೆತು ಬಾಡಿದ ಮುಖ… 9 ಮಕ್ಕಳಿದ್ದರೂ ಆಶ್ರಯವಿಲ್ಲದೆ ಬೀದಿ ಪಾಲಾದ ವೃದ್ಧೆ… ಮನೆಯಿದ್ದರೂ ಮರದ ಕೆಳಗೆ ವಾಸ…!
ಇದು ಮಕ್ಕಳಿಂದ ತಿರಸ್ಕೃತಳಾಗಿ ಬೀದಿಗೆ ಬಿದ್ದಿರುವ ವೃದ್ಧೆಯ ಕರುಣಾಜನಕ ಕಥೆ. ಪಟ್ಟಣದ ಭೀಮನಗರ ಬಡಾವಣೆಯ ಪಾಲ್ ಚಾವಡಿ ಬೀದಿ ನಿವಾಸಿ ಬಂಡರಸಮ್ಮ (80), ಹಲವು ದಿನಗಳಿಂದ ನಿರಾಶ್ರಿತರಾಗಿ 22ನೇ ವಾರ್ಡ್​ನ ಆಶ್ರಯ ಬಡಾವಣೆಯ ಬೀದಿಯಲ್ಲಿ ದಿನ ದೂಡುತ್ತಿದ್ದಾರೆ. ಪತಿ ನಾಗಯ್ಯ, ಪುತ್ರರಾದ ಸಿದ್ದರಾಜು, ಸುಂದರ್, ಸುರೇಶ್, ಪ್ರಕಾಶ್, ಶ್ರೀಕಂಠ, ಶಂಕರ್, ಪುತ್ರಿಯರಾದ ನಾಗವೇಣಿ, ಜಯಂತಿ ಹಾಗೂ ಶುಭಗಂಗಾ ಅವರೊಟ್ಟಿಗೆ ಭೀಮನಗರದ ಪಾಲ್ ಚಾವಡಿ ಬೀದಿಯಲ್ಲಿ 50 ವರ್ಷ ಜೀವನ ಸಾಗಿಸಿದ್ದು, 2005ರಲ್ಲಿ ಪತಿಯನ್ನು ಕಳೆದುಕೊಂಡರು. ಬಳಿಕ ಪುತ್ರರು ಮನೆಯಿಂದ ಹೊರ ಹಾಕಿದ್ದಾರೆ. ಇತ್ತ ಆಶ್ರಯ ಬಡಾವಣೆಯ 2ನೇ ಕ್ರಾಸ್​ನಲ್ಲಿದ್ದ ತನ್ನ ಪತಿಯ ಇನ್ನೊಂದು ಮನೆಯಲ್ಲಿ ಆಶ್ರಯ ಪಡೆಯಲು ಮುಂದಾದ ತಾಯಿಗೆ ಆಕೆಯ ಪುತ್ರಿ ನಾಗವೇಣಿ ಅವಕಾಶ ನೀಡಿಲ್ಲ. ಇದೀಗ ಬೀದಿಯಲ್ಲಿ ನಿಲ್ಲಿಸಿರುವ ನಿರುಪಯುಕ್ತ ಜೀಪ್​ನಲ್ಲಿ ಹಗಲು-ರಾತ್ರಿ ಕಾಲ ದೂಡುತ್ತಿದ್ದಾರೆ. ಇವರ ಪರಿಸ್ಥಿತಿ ಕಂಡು ಕೆಲ ನಿವಾಸಿಗಳು ಊಟೋಪಚಾರ ನೀಡಿದ್ದಾರೆ. ಇಷ್ಟಾದರೂ ಈಕೆಯ ಮಕ್ಕಳ ಮನಸ್ಸು ಮಾತ್ರ ಕರಗಿಲ್ಲ. ನಗರಸಭೆಯ ಪರಿಸರ ವಿಭಾಗದ ಎಇಇ ಅಶ್ವಿನಿ ಹಾಗೂ ಆರೋಗ್ಯ ಸಹಾಯಕಿ ಭೂಮಿಕಾ ಅವರ ಸಮ್ಮುಖದಲ್ಲಿ. ಪುತ್ರಿ ನಾಗವೇಣಿ ಮನವೊಲಿಸಲು ಯತ್ನಿಸಿದರಾದರೂ ಅದಕ್ಕೂ ಅವರು ಒಪ್ಪಲಿಲ್ಲ.
ಕುಷ್ಟಗಿ (ಕೊಪ್ಪಳ):ಪಟ್ಟಣದ ಹೊರವಲಯದಲ್ಲಿ ಬಿಸಿಲಿನಿಂದ ಮೃತಪಟ್ಟಿದ್ದ ವೃದ್ಧೆಯ ಶವವನ್ನು ನಾಯಿಗಳು ಬುಧವಾರ ಎಳೆದಾಡಿ ತಿಂದಿವೆ. ಇಲ್ಲಿನ ಸಾಯಿ ನಗರದ ನಿವಾಸಿ ಹನುಮವ್ವ ಈರಪ್ಪ ತೆಗ್ಗಿಹಾಳ (80) ಉರುವಲು ತರಲು ಹೋದಾಗ ಬಿಸಿಲಿನ ಪ್ರಖರತೆಗೆ ಕುಸಿದು ಮೃತಪಟ್ಟಿದ್ದಾರೆ. ಮೃತದೇಹವನ್ನು ಬೀದಿ ನಾಯಿಗಳು ಎಳೆದಾಡಿ ತಿಂದಿವೆ. ಜೋಗತಿಯಾಗಿದ್ದ ಹನುಮವ್ವ ಕುಟುಂಬದವರಿಂದ ದೂರವಿದ್ದರು.
ಡಿಸೆಂಬರ್‌ವರೆಗೂ ಇರುತ್ತೆ ಈ ಕರೊನಾ ಕಾಟ: ಎಚ್ಚರಿಕೆ ನೀಡಿದ ಡಾ. ಮಂಜುನಾಥ್
ಮಂತ್ರಾಲಯ ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಇನ್ನಿಲ್ಲ; ಎಸ್‌.ಎನ್. ಸುಯಮೀಂದ್ರಾಚಾರ್‌ ಕೋವಿಡ್‌ಗೆ ಬಲಿ



ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 17 =
Remember me
