ಬೆಂಗಳೂರು: ಉಡುಪಿ ಕಾಲೇಜಿನ ಹಾಸ್ಟೆಲ್​ ಟಾಯ್ಲೆಟ್​ನಲ್ಲಿ ಮೊಬೈಲ್​ಫೋನ್​ ಇಟ್ಟು ವಿಡಿಯೋ ಮಾಡಿದ್ದ ಪ್ರಕರಣ ಇನ್ನೂ ಗಂಭೀರವಾಗಿದ್ದು, ನಿತ್ಯವೂ ಏನಾದರೊಂದು ಬೆಳವಣಿಗೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್​ಬೂ ಇದೀಗ ಇನ್ನೊಂದು ಹೇಳಿಕೆ ನೀಡಿರುವುದು ಗಮನ ಸೆಳೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ನಟಿ ಖುಷ್​ಬೂ ಉಡುಪಿಗೆ ಭೇಟಿ ನೀಡಿದ್ದು, ಎಸ್​ಪಿ-ಡಿಸಿ ಹಾಗೂ ಕಾಲೇಜಿನ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಿದ್ದರು. ಆ ಬಳಿಕ ಅವರು ನೀಡಿದ್ದ ಹೇಳಿಕೆಗಳಿಗೆ ವ್ಯಾಪಕ ಟೀಕೆ, ಆಕ್ಷೇಪಗಳು ವ್ಯಕ್ತವಾಗಿದ್ದವು.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಖುಷ್​ಬೂ ಗುಪ್ತವಾಗಿ ರೆಕಾರ್ಡ್ ಮಾಡಲಾಗಿದೆ ಎಂಬ ವದಂತಿಗಳಿವೆ ಎಂಬಿತ್ಯಾದಿ ಆಗಿ ಮಾತನಾಡಿದ್ದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವ್ಯಕ್ತಿಯೊಬ್ಬರು, ಖುಷ್​ಬೂ ಹೇಳಿಕೆ ಇರುವ ಮಾಧ್ಯಮದ ವಿಡಿಯೋ ಕೋಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಇದಕ್ಕೆ ನಟಿ ಖುಷ್​ಬೂ ಪ್ರತಿಕ್ರಿಯೆ ನೀಡಿ ತಮ್ಮ ಅನಿಸಿಕೆಯನ್ನು ಟ್ವೀಟ್ ಮಾಡಿದ್ದಾರೆ. ಸಮಸ್ಯೆ ಏನು ಎಂಬ ಬಗ್ಗೆ ಯಾಕೆ ಎಲ್ಲರೂ ಕಣ್ಮುಚ್ಚಿ ಕುಳಿತಿದ್ದಾರೆ ಇದು ಮೊಬೈಲ್​ಫೋನ್​ನಲ್ಲಿ ತೆಗೆದ ವೀಡಿಯೊದ ಬಗ್ಗೆ. ಆವರಣದಲ್ಲಿ ಪತ್ತೆಯಾದ ಗುಪ್ತ ಕ್ಯಾಮೆರಾ ಮತ್ತು ನಕಲಿ ವೀಡಿಯೊಗಳ ವದಂತಿಗಳು ತನಿಖೆಗೆ ಅಡ್ಡಿಯಾಗಿವೆ ಎಂದಿರುವ ಖುಷ್​ಬೂ ಎಲ್ಲರೂ ಬೇಲಿ ಹಾರುವುದನ್ನು ನೋಡುವುದಕ್ಕೆ ತುಂಬಾ ಬೇಸರವಾಗುತ್ತಿದೆ ಎಂದಿದ್ದಾರೆ. ತನಿಖೆಗಳು ನಡೆಯುತ್ತಿವೆ ಎಂದು ನಾನು ಸ್ಪಷ್ಟವಾಗಿ ಹೇಳಿದ್ದೇನೆ ಮತ್ತು ಇದರಲ್ಲಿ ನಿಮಗೆ ಎಲ್ಲಿ ತೀರ್ಮಾನ ಕಾಣಿಸುತ್ತಿದೆ ಎಂದು ಕೇಳಿದ್ದಾರೆ.
Why is everyone turning a blind eye to what the issue is about? It was about video taken on a mobile. Rumours of hidden camera found on the premises and fake videos adhere hinderance in investigations. And very pathetic to see everyone jumping the fence. I have clearly said…https://t.co/GWsfwi8qHa
— KhushbuSundar (@khushsundar)July 28, 2023

‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಯಾರೂ ಸಾವಿಗೀಡಾಗದಿರಲಿ ಎಂದು ಜನರನ್ನು ಸೇರಿಸಿ ಮೃತ್ಯುಂಜಯ ಜಪ ಮಾಡಿಸಿದ ವ್ಯಕ್ತಿ ಮೇಲೆ ಕೇಸ್​ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eleven =
Remember me
