ಬೆಂಗಳೂರು:ಸತತ ಮೂರನೇ ಬಾರಿಗೆ ಸರ್ಕಾರ ರಚಿಸಿದ ಮೋದಿ ಕ್ಯಾಬಿನೆಟ್​ನಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ (ಜೂನ್​​ 15) ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಫರ್ಧಿಸಿ ಗೆಲುವು ಸಾಧಿಸಿದ್ದರಿಂದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಇದನ್ನು ಓದಿ:ಸಾಮಾಜಿಕ ಜಾಲತಾಣದಿಂದ ವಿಚಾರಣೆ ವಿಡಿಯೋವನ್ನು ತೆಗೆದುಹಾಕಿ; ಸಿಎಂ ಕೇಜ್ರಿವಾಲ್​ ಪತ್ನಿಗೆ ದೆಹಲಿ ಹೈಕೋರ್ಟ್​​ ಸೂಚನೆ
ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್​ ಕಚೇರಿಗೆ ತೆರಳಿ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್​ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಈ ಸಮಯದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪರಿಷತ್ ಸದಸ್ಯ ಬೋಜೇಗೌಡ, ಮಾಜಿ ಎಂಎಲ್‌ಸಿ ಚೌಡರೆಡ್ಡಿ ಉಪಸ್ಥಿತರಿದ್ದರು. ಎಚ್​.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವುದರಿಂದ ಶಾಸಕ ಸ್ಥಾನ ತೆರವಾಗಿದ್ದು ಬೊಂಬೆನಾಡು ಚನ್ನಪಟ್ಟಣ ಈಗ ಉಪಚುನಾವಣೆ ಎದುರಿಸಲಿದೆ.
ಇನ್ನು ಹಾವೇರಿ ಗದಗ ಲೋಕಸಭಾ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಬೊಮ್ಮಾಯಿ ಅವರು ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಸದ್ಯ ಬೊಮ್ಮಾಯಿ ಅವರ ರಾಜೀನಾಮೆಯಿಂದಾಗಿ ತೆರವಾಗಿರುವ ಶಾಸಕ ಸ್ಥಾನಕ್ಕೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ.
ಬಿಗ್​ಬಜೆಟ್​ ಕಣ್ಣಪ್ಪ ಟೀಸರ್​ ರಿಲೀಸ್​​; ಸಿನಿಮಾಟೋಗ್ರಫಿ ನೋಡಿ ಅಭಿಮಾನಿಗಳು ಥ್ರಿಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 14 =
Remember me
