ಬೆಂಗಳೂರು:ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ ರಾಜ್ಯ ಸರ್ಕಾರವು ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ ಎಂದು ಮಾಜಿ ಸಚಿವ ಸುನೀಲ್​ ಕುಮಾರ್ ಹೇಳಿದ್ದಾರೆ.ಇದನ್ನೂ ಓದಿ:KSRTC ಬಸ್​ ಸಿಬ್ಬಂದಿಯ ಸಾಹಸಕ್ಕೆ ಕಳ್ಳ ಸೆರೆ! ಪ್ರಯಾಣಿಕನ 5 ಲಕ್ಷ ರೂ. ಸೇಫ್​…​ಗ್ಯಾರಂಟಿ ಯೋಜನೆಗಳ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಚಿವರು ಈ ಕುರಿತು ಟ್ವೀಟ್​ ಮಾಡಿದ್ದು. ಉಚಿತ ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ ಈಗ ಕತ್ತಲೆ ಖಚಿತವೆಂದು ಅರ್ಥವಾಗಿದೆ. ಸಾಲ ನಿಶ್ಚಿತ, ಬೆಲೆ ಏರಿಕೆಯೂ ಖಂಡಿತ ಎಂಬುದು ತಿಂಗಳು ಕಳೆಯುವಷ್ಟರಲ್ಲೇ ಸಾರ್ವಜನಿಕರಿಗೆ ಅರಿವಾಗಿದೆ.
ಈ ಹಿಂದೆ ರೈತರ ಐಪಿ ಸೆಟ್​​ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್​ನ್ನು ಕಡಿತಗೊಳಿಸಲಾಗಿದೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಮಾಡಿ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಹುಡುಗಿ ಸಿಗದೆ ಜಿಗುಪ್ಸೆ ಬಂದಿದೆ! ‘ಕನ್ಯಾ ಭಾಗ್ಯ’ ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ 28ರ ಯುವಕ
ಸಿದ್ದರಾಮಯ್ಯನವರೇ ವ್ಯವಸ್ಥೆಯನ್ನು ಎತ್ತ ಕೊಂಡೊಯ್ಯುತ್ತಿದ್ದೀರಿ? ನಿಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಜಾಹೀರಾತು ಕೊಟ್ಟ ಮಾತ್ರಕ್ಕೆ ಕತ್ತಲೆ ಕಳೆಯಲು ಸಾಧ್ಯವೇ? ನೀವು ಘೋಷಣೆ ಇಲ್ಲದೇ‌ ಮಾಡುತ್ತಿರುವ ಲೋಡ್ ಶೆಡ್ಡಿಂಗ್​ನಿಂದಾಗಿ ಕೃಷಿ ಮತ್ತು ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಕುಂಠಿತಗೊಳ್ಳುವುದರಲ್ಲಿ ಅನುಮಾನ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − four =
Remember me
