ಬೆಂಗಳೂರು:ಆಂಧ್ರಪ್ರದೇಶದಿಂದ ಖೋಟಾ ನೋಟು ತಂದು ಚಲಾವಣೆಗೆ ಪ್ರಯತ್ನಿಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 40 ಲಕ್ಷ ರೂ. ನಕಲಿ ನೋಟು ಜಪ್ತಿ ಮಾಡಿದ್ದಾರೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಿ.ಚರಣ್ ಸಿಂಗ್ (47) ಮತ್ತು ರಜಪುತ್ರ ರಜನಿ (38) ಬಂಧಿತರು. 500 ರೂ. ಮುಖ ಬೆಲೆಯ 40 ಲಕ್ಷ ರೂ. ಮೌಲ್ಯದ ಖೋಟಾ ನೋಟು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಂಧ್ರ ಮೂಲದ ಚರಣ್ ಮತ್ತು ರಜಿನಿ, ಆನಂತಪುರದಲ್ಲಿ ಪರಿಚಯಸ್ಥರಿಂದ ನಕಲಿ ನೋಟುನ್ನು ಕಡಿಮೆ ಬೆಲೆಗೆ ತಂದು ಬೆಂಗಳೂರಿನಲ್ಲಿ ಚಲಾವಣೆಗೆ ಪ್ರಯತ್ನಿಸುತ್ತಿದ್ದರು. ಜ.19ರ ಮಧ್ಯಾಹ್ನ 1.30ರಲ್ಲಿ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯ ಪೂರ್ಣ ಪ್ರಜ್ಞಾ ಲೇಔಟ್‌ನ ಸಾಧನಾ ಕಾಲೇಜು ಹತ್ತಿರ ಬೊಲೆರೊ ಜೀಪ್‌ನಲ್ಲಿ ಚರಣ್ ಮತ್ತು ರಜಿನಿ ನಕಲಿ ನೋಟು ತಂದಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಇದರ ಮೇರೆಗೆ ಮಫ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡು ಬೊಲೆರೋ ಜೀಪ್ ಬಳಿಗೆ ಹೋದಾಗ ಚರಣ್ ಹೊರಗೆ ನಿಂತು ಗಿರಾಕಿಗಳಿಗೆ ಕಾಯುತ್ತಿರುವುದು ಕಂಡು ಬಂದಿದೆ.
ತಕ್ಷಣ ಸ್ಥಳಕ್ಕೆ ಹೋಗಿ ಚರಣ್‌ನನ್ನು ವಶಕ್ಕೆ ಪಡೆದು ಕಾರು ಪರಿಶೀಲನೆ ನಡೆಸಿದಾಗ ರಜಿನಿ ಮತ್ತು 500 ರೂ. ಮುಖ ಬೆಲೆಯ 8 ಬಂಟಲ್ ನೋಟುಗಳು ಪತ್ತೆಯಾಗಿವೆ. ಆರೋಪಿಗಳು, ಕಾರು ಮತ್ತು ನೋಟು ಠಾಣೆಗೆ ತಂದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾರೆ. ಇವರಿಗೆ ನಕಲಿ ನೋಟು ಕೊಟ್ಟವರು ಮತ್ತು ಇವರಿಂದ ಪಡೆಯಲು ಬಂದಿದ್ದವರ ಪತ್ತೆಗೂ ಬಲೆಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇತಾಜಿ ಸಾವಿನ ರಹಸ್ಯ ಬಹಿರಂಗವಾಗಲಿ…

ರಾತ್ರಿ ಖೆಡ್ಡಾ ತೋಡಿ ಹಗಲಿನಲ್ಲಿ ತಾನೇ ಬಿತ್ತು ಕಾಂಗ್ರೆಸ್ಸು!

ವೋಟಿಗಾಗಿ ಗಿಫ್ಟ್ ಭಾಗ್ಯ!; ನೀತಿಸಂಹಿತೆ ಜಾರಿಗೆ ಮುನ್ನ ಮತದಾರರಿಗೆ ಕೊಡುಗೆಗಳ ಮಹಾಪೂರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
