ಕೋಲಾರ:ಜೆಡಿಎಸ್ ಪಕ್ಷಕ್ಕೆ ರೈತ ದ್ರೋಹಿ ಎನ್ನುವ ಪಟ್ಟ ಕಟ್ಟಲು ಕೆಲವರು ಹೊರಟಿದ್ದಾರೆ. ರೈತರ ಹೆಸರಲ್ಲಿ ಡೋಂಗಿ ರೈತರಾಗಿದ್ದಾರೆ ಎಂದು ಕಿಡಿಕಾರಿದ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ನಿಮ್ಮ ಹುಳುಕನ್ನು ಮುಚ್ಚಿಕೊಳ್ಳಿ, ನಿಮ್ಮಿಂದ ನಾನು ಹೇಳಿಸಿಕೊಳ್ಳಬೇಕಾಗಿಲ್ಲ. ಜೆಡಿಎಸ್ ಪಕ್ಷ ರೈತರಿಗಾಗಿಯೇ ಇದೆ, ಮುಂದೆಯೂ ರೈತರ ಪರ ಇರಲಿದೆ ಎಂದರು.
ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ವಿಧಾನಪರಿಷತ್​ನಲ್ಲಿ ಜೆಡಿಎಸ್​ ಬೆಂಬಲ ನೀಡಿದ್ದರ ಬಗ್ಗೆ ರೈತ ಮುಖಂಡರು ಸೇರಿದಂತೆ ಕಾಂಗ್ರೆಸ್​ ಜೆಡಿಎಸ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಗ್ರಾಪಂ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಈ ಕುರಿತು ಮಾತನಾಡಿದ ಎಚ್​ಡಿಕೆ, ನಾನು ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದೆ. ರೈತಪರ ಸಾಕಷ್ಟು ಯೋಜನೆಗಳನ್ನ ತಂದೆ. ಆ ವೇಳೆ ಯಾರೊಬ್ಬರೂ ಕೃತಜ್ಞತೆ ಹೇಳಿಲ್ಲ‌ ಎನ್ನುವ ಮೂಲಕ ರೈತ ಹೋರಾಟಗಾರರಿಗೆ ಟಾಂಗ್ ಕೊಟ್ಟರು.
ಭೂ ಸುಧಾರಣೆ ಮಸೂದೆ ತಂದಾಗ ನಾನು ಮತ್ತು ದೇವೇಗೌಡರು ಬಿಲ್ ವಿರೋಧಿಸಿದ್ದು ನಿಜ. ಕಳೆದ ಅಧಿವೇಶನದಲ್ಲಿ ಕೆಲ ಬದಲಾವಣೆ ತರಲು ಸಲಹೆ ನೀಡಿದ್ದೆ. ಬಿಲ್​ನಲ್ಲಿ ನಾನು ನೀಡಿದ ಸಲಹೆಯಂತೆ ಬದಲಾವಣೆ ತಂದಿದ್ದಾರೆ. ರೈತ ಮುಖಂಡರಿಂದ ನಾನು ಏನನ್ನು ಹೇಳಿಸಿಕೊಳ್ಳಬೇಕಿಲ್ಲ. ನಾನು ಮತ್ತು ಜೆಡಿಎಸ್​ ಪಕ್ಷ ರೈತರ ಪರವಾಗಿಯೇ ಇದೆ. ಎಲ್ಲಿಗೆ ಬೇಕಾದರೂ ಬಹಿರಂಗ ಚರ್ಚೆಗೆ ಬರಲು‌ ನಾನು ಸಿದ್ಧ ಎಂದ ಎಚ್​ಡಿಕೆ, 1994ರಲ್ಲಿ ಪ್ರೊ.ನಂಜುಂಡಸ್ವಾಮಿ ಶಾಸಕರಾಗಿದ್ದರು. 1961ರ ಕಂದಾಯ ಕಾನೂನು 79(A),79(B) ತೆಗೆಯಬೇಕು ಎಂದು ವಿಧಾನಸೌಧದಲ್ಲಿ ಭಾಷಣ ಮಾಡಿದ್ದರು. ಪ್ರೊ.ನಂಜುಂಡಸ್ವಾಮಿ ಅವರು ಬಾರ್​ಕೋಲ್ ಜನಕ ಎಂದರು.
ರೈತರ‌ ಸಮಸ್ಯೆ ಆಲಿಸಲೆಂದು ಪ್ರತಿ ತಿಂಗಳು ಸಭೆ ಮಾಡಿದೆ. ಅದಕ್ಕೆ ವಿಧಾನಸೌಧದಲ್ಲಿ ದಾಖಲೆಗಳಿವೆ, ಕಾಂಗ್ರೆಸ್ ಬೆಂಬಲವಿಲ್ಲದೆ ಅನೇಕ ಕೆಲಸ ಮಾಡಿರುವೆ. ಕೋಡಿಹಳ್ಳಿ ಚಂದ್ರಶೇಖರ್​ರ ಹಿನ್ನೆಲೆ ಏನು‌? ಅವರ ಹೋರಾಟ, ಅವರು ಬಂದ ದಾರಿ.. ಎಲ್ಲವೂ ಗೊತ್ತಿದೆ. ಅವರಿಂದ ಬುದ್ಧಿ ಕಲಿಯುವ ಅವಶ್ಯಕತೆ ನನಗಿಲ್ಲ. ನಾನು ರೈತ ಕುಟುಂಬದಿಂದ ಬಂದವ ಎಂದು ಕಿಡಿಕಾರಿದರು.
ಹದಿನಾಲ್ಕು ತಿಂಗಳ ಕಾಂಗ್ರೆಸ್ ‌ಜೊತೆಗಿನ ಸರ್ಕಾರ ಮಾಡಿದ್ದು ಕೇವಲ ರೈತರ ಸಾಲ ಮನ್ನಾ ಮಾಡಲು ಎಂದು ಎಚ್​ಡಿಕೆ, ಜೆಡಿಎಸ್​ ಪಕ್ಷದ ಬಗ್ಗೆ ಮಾತನಾಡುವಾಗ ರೈತ ಮುಖಂಡರು ಎಚ್ಚರಿಕೆಯಿಂದ ಮಾತಾಡಲಿ ಎಂದರು.
ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​

ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 17 =
Remember me
