ಬೆಂಗಳೂರು:ಹಾಲಿ ಸಚಿವರ ಖಾತೆ ಬದಲಾವಣೆ ಸುಳಿವು ಸಿಗುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ.
ಕೆ. ಸುಧಾಕರ್, ಜೆ.ಸಿ ಮಾಧುಸ್ವಾಮಿ ಹಾಗೂ ಗೋಪಾಲಯ್ಯ ಅಸಮಾಧಾನ ಹೊಂದಿದ್ದಾರೆಂದು ತಿಳಿದುಬಂದಿದೆ. ಸುಧಾಕರ್​ ಬಳಿಯಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಕಿತ್ತುಕೊಂಡು ಆರೋಗ್ಯ ಇಲಾಖೆ ಉಳಿಸಿದ್ದಾರೆ ಎಂಬ ಸುಳಿವು ದೊರೆತ ಹಿನ್ನೆಲೆಯಲ್ಲಿ ವೈದ್ಯಕೀಯ ಖಾತೆ ವಾಪಸ್ಸು ಪಡೆದರೆ ರಾಜೀನಾಮೆ ನೀಡುವ ಸಂದೇಶವನ್ನು ರವಾನಿಸಿರುವ ಮಾಹಿತಿ ಇದೆ. ಈ ಹಿಂದೆ ಸುಧಾಕರ್​ ಬಳಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಎರಡು ಖಾತೆಗಳಿದ್ದವು.
ಇನ್ನು ರೈತರ ಜತೆ ಇರಬಹುದಾದ ಖಾತೆ(ಸಣ್ಣ ನೀರಾವರಿ) ಬದಲಾವಣೆಗೆ ಜೆ.ಸಿ.ಮಾಧುಸ್ವಾಮಿ ಆಕ್ರೋಶಗೊಂಡು ತಮ್ಮ ರಾಜೀನಾಮೆ ಪತ್ರವನ್ನು ಆಪ್ತ ಸಹಾಯಕನಿಗೆ ನೀಡಿ ಜೆಸಿ ಪುರಕ್ಕೆ ವಾಪಸಾಗಿದ್ದಾರೆಂದು ತಿಳಿದುಬಂದಿದೆ. ಸಣ್ಣ ನೀರಾವರಿ ಬದಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಸಾಧ್ಯತೆ ಇರುವುದರಿಂದ ಅಸಮಾಧಾನ ಹೊಂದಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ಗೋಪಾಲಯ್ಯರಿಗೆ ಆಹಾರ ಖಾತೆಯ ಬದಲು ಸಕ್ಕರೆ ಮತ್ತು ತೋಟಗಾರಿಗೆ ಖಾತೆ ಬದಲಾವಣೆಯಿಂದ ಅಸಮಾಧಾನ ಹೊಂದಿದ್ದಾರೆಂದು ಹೇಳಲಾಗಿದೆ.
ಹೀಗಾಗಿ ಯಾವುದೇ ಕಾರಣಕ್ಕೂ ಖಾತೆಗಳ ಬದಲಾವಣೆ ಬದಲಾವಣೆ ಬೇಡಿ ಎಂದು ಸಿಎಂಗೆ ಪಟ್ಟು ಹಿಡಿದಿದ್ದು, ಮುಂದೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸದ ಸಿಎಂಅಸಮಾಧಾನ ವಿಚಾರ ಮಾಧ್ಯಮಗಳಲ್ಲಿ ಕೇಳಿಬರುತ್ತಿದ್ದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡದೆ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಸಿಎಂ ಬಿಎಸ್​ವೈ ತೆರಳಿದರು. ಅಲ್ಲದೆ, ಸಿಎಂ ಜೊತೆ ಮಾತುಕತೆ ನಡೆಸಿ ಎಂಟಿಬಿ ನಾಗರಾಜ್ ಸಹ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಬೇಸರದಿಂದಲೇ ಹೊರಟರು.
ತನ್ನ ಎತ್ತರ ಹೆಚ್ಚಿಸಿಕೊಳ್ಳಲು ಈತ ಖರ್ಚು ಮಾಡಿದ ಹಣದ ಮೊತ್ತ ಕೇಳಿದ್ರೆ ಶಾಕ್​ ಆಗ್ತೀರಾ..!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + five =
Remember me
