ಮಂಡ್ಯ:ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಕೆಲ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಷುಗರ್ ಕಾರ್ಖಾನೆಯನ್ನು ಒ ಆ್ಯಂಡ್​ ಎಂಗೆ (ಖಾಸಗಿಗೆ ಕಾರ್ಯಾಚರಣೆ ಮತ್ತು ನಿರ್ವಹಣೆ) ನೀಡುವುದು ಉತ್ತಮ ಎಂದು ರಾಜವಂಶಸ್ಥ ಯದುವೀರ್​ ಇತ್ತೀಚೆಗೆ ಫೇಸ್​ಬುಕ್​ನಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ವಿರುದ್ಧ ಕಿಡಿಕಾರಿರುವ ಕೆಲ ಸಂಘಟನೆಗಳ ಮುಖಂಡರು, ಮಹಾರಾಜರು ಜನರಿಗೆ ಸಾರ್ವಜನಿಕ ಆಸ್ತಿಯಾಗಿ ಕೊಟ್ಟು ಹೋಗಿದ್ದಾರೆ. ಅವರ ಮೊಮ್ಮಗ(ಯದುವೀರ್ ಒಡೆಯರ್) ಮೈಷುಗರ್ ಇತಿಹಾಸವನ್ನು ತಿಳಿದುಕೊಳ್ಳಬೇಕು. ನಿರಾಣಿ ಭೇಟಿ ಬಳಿಕ ಯದುವೀರ್ ನಿರ್ಧಾರ ಬದಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿರಿಐಜಿಪಿ, ಎಸ್‌ಪಿ ಕಚೇರಿಗೂ ವಕ್ಕರಿಸಿದ ಕರೊನಾ ?
ಮೈಷುಗರ್ ಕಾರ್ಖಾನೆಯ ಆಡಳಿತ ಮಂಡಳಿಯನ್ನು ಖಾಸಗಿಯವರಿಗೆ ವಹಿಸಲು ರಾಜವಂಶಸ್ಥ ಯದುವೀರ್ ಒಡೆಯರ್ ಬೆಂಬಲ ನೀಡುವುದು ಸರಿಯಲ್ಲ. ಸಾರ್ವಜನಿಕ ಆಸ್ತಿ ಉಳಿಯಬೇಕು ಎನ್ನುವ ಯಾರೊಬ್ಬರೂ ಒ-ಎಂ ಬಯಸುವುದಿಲ್ಲ. ಸ್ವಾರ್ಥ- ರಾಜಕಾರಣ ಮನಸ್ಥಿತಿಯುಳ್ಳವರು ಮಾತ್ರವೇ ಒ-ಎಂ ಬೇಕು ಎನ್ನುತ್ತಿದ್ದಾರೆ ಎಂದು ಸಿಐಟಿಯು ಕಾರ್ಯದರ್ಶಿ ಸಿ.ಕುಮಾರಿ ಗಂಭೀರ ಆರೋಪ ಮಾಡಿದ್ದಾರೆ.
ಸಂಸದೆ ಸುಮಲತಾ ಅವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಸಂಸದರ ನಿಧಿ ಬಳಸಿಯೇ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಬಹುದಿತ್ತು. ಸರ್ಕಾರದ ಸ್ವಾಮ್ಯದಲ್ಲೇ ಕಾರ್ಖಾನೆ ಉಳಿಯಬೇಕು ಎನ್ನುವುದು ನಮ್ಮ ಒಕ್ಕೊರಲ ಆಗ್ರಹ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿರಿಜೈಲಿಂದ ಬಿಡುಗಡೆಯಾದ ರೌಡಿ ಕೊರಂಗು ಕೃಷ್ಣನನ್ನು ಕರೆದೊಯ್ಯಲು ಬಂದದ್ದು 70 ಕಾರುಗಳು!
ಜೈಲಿಂದ ಬಿಡುಗಡೆಯಾದ ರೌಡಿ ಕೊರಂಗು ಕೃಷ್ಣನನ್ನು ಕರೆದೊಯ್ಯಲು ಬಂದದ್ದು 70 ಕಾರುಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − six =
Remember me
