ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಬಹು ದಿನಗಳ ಕನಸು ಇಂದು ನೆರವೇರಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಇಂದು ಮೊದಲ ವಿಮಾನ ಹಾರಾಟ ನಡೆಸಿದೆ.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಬಿಎಸ್​ವೈ ಹುಟ್ಟುಹಬ್ಬದಂದು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು. ಈ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗಿದೆ. ಆರಂಭದಲ್ಲಿ ಯಡಿಯೂರಪ್ಪ ಅವರ ಹೆಸರನ್ನು ಇಡಲು ಅಂದಿನ ಬಿಜೆಪಿ ಸರ್ಕಾರ ತೀರ್ಮಾನ ಮಾಡಿತ್ತು. ಆದರೆ, ಯಡಿಯೂರಪ್ಪ ಅವರು ತಾವೇ ಖುದ್ದಾಗಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು, ಕುವೆಂಪು ಹೆಸರನ್ನು ಇಡುವಂತೆ ಸೂಚಿಸಿದರು. ಅಂತಿಮವಾಗಿ ಕುವೆಂಪು ವಿಮಾನ ನಿಲ್ದಾಣ ಎಂದು ಹೆಸರಿಡಲಾಯಿತು.
ಶಿವಮೊಗ್ಗಕ್ಕೆ ಹೊರಟ ಮೊದಲ ಇಂಡಿಗೋ ವಿಮಾನದಲ್ಲಿ ಮಾಜಿ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಶಾಸಲ ಬಿ.ವೈ.ವಿಜಯೇಂದ್ರ, ಗೋಪಾಲಕೃಷ್ಣ ಬೇಳೂರು, ಭಾರತಿಶೆಟ್ಟಿ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಹಾಲಪ್ಪ ಪ್ರಯಾಣ ಮಾಡಿದ್ದು, ಮೊದಲ ಪ್ರಯಾಣಿಕರು ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ:ಸಿಲಿಂಡರ್ ಸಬ್ಸಿಡಿ ಲೋಕಸಭೆ ಚುನಾವಣೆ ಗಿಮಿಕ್ : ಕೇಂದ್ರ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಶಿವಮೊಗ್ಗಕ್ಕೆ ಹೊರಡುವ ಮುನ್ನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಎಸ್​ವೈ, ನಮ್ಮ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆಗಲು ರೈತರು ಕಾರಣ. ಸಣ್ಣ ಕಾರಣ ಇಲ್ಲದೆ ಜಮೀನು ಬಿಟ್ಟುಕೊಟ್ಟರು. ನನ್ನ ಜೊತೆ ಕೆಲ ರೈತರನ್ನೂ ವಿಮಾನದಲ್ಲಿ ಕರೆದುಕೊಂಡು ಹೋಗ್ತೀನಿ. ಕೈಗಾರಿಕೆ, ಬೇರೆ ಕಾರಣಕ್ಕೂ ಅನುಕೂಲ ಆಗಲಿದೆ. ಏರ್ಪೋರ್ಟ್​ ಆಗಲು ಕಾರಣರಾದ ಎಲ್ಲರಿಗೂ ಅಭಿನಂದನೆಗಳು. ಸಂಸದ ರಾಘವೇಂದ್ರಗೆ ಅಭಿನಂದನೆ ಸಲ್ಲಿಸ್ತೇನೆ. ಮುಂದೆ ಓಡಾಡಲು ಬಹಳ ಅನುಕೂಲ ಆಗಲಿದೆ ಎಂದರು.
ಮಾಜಿ ಸಚಿವ ಆರಗ ಜ್ಞಾನೇಂದ್ರ‌ ಮಾತನಾಡಿ, ಇಂದು ಶಿವಮೊಗ್ಗದಲ್ಲಿ ಮೊದಲ ವಿಮಾನ ಲ್ಯಾಂಡಿಂಗ್ ಆಗಲಿದ್ದು, ಇದೊಂದು ಐತಿಹಾಸಿಕ ಕ್ಷಣ. ಶಿವಮೊಗ್ಗ ಜನ ಖುಷಿ ಪಡುವ ದಿನ. ಇದೊಂದು ಅಭಿವೃದ್ಧಿ ದಿನ. ಇದರಿಂದ ಕೈಗಾರಿಕಾ ಸ್ಥಾಪನೆ ಅನುಕೂಲ ಆಗಲಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ಏರ್ಪೋರ್ಟ್​ನಿಂದ ಮಧ್ಯ ಕರ್ನಾಟಕಕ್ಕೆ ಅನುಕೂಲ ಆಗಲಿದೆ ಎಂದು ಹೇಳಿದರು.
ಶಾಸಕ ವಿಜಯೇಂದ್ರ ಮಾತನಾಡಿ, ಹೆಮ್ಮೆಯ ಮಲೆನಾಡಿನ ಶಿವಮೊಗ್ಗ ವಿಮಾನ ನಿಲ್ದಾಣ. ದೇಶದ ಪ್ರಧಾನಿ ಮೋದಿಯವರು ಯಡಿಯೂರಪ್ಪ ಜನ್ಮದಿನದಂದು ಲೋಕಾರ್ಪಣೆ ಮಾಡಿದರು. ಇಂದಿನಿಂದ ಅಧಿಕೃತವಾಗಿ ವಿಮಾನಯಾನ ಆರಂಭವಾಗಲಿದೆ. ತಂದೆ ಯಡಿಯೂರಪ್ಪ ಹಾಗೂ ರಾಘಣ್ಣ ಪ್ರಯಾಣ ಮಾಡ್ತಿದ್ದಾರೆ. ಶಿವಮೊಗ್ಗ ಜನರ ನಿರೀಕ್ಷೆ ಇತ್ತು. ಬಹಳ ಜನರಿಗೆ ಇದರಿಂದ ಅನುಕೂಲ ಆಗಲಿದೆ. ವಾಣಿಜ್ಯ, ಪ್ರವಾಸೋದ್ಯಮಕ್ಕೆ ಅನುಕೂಲ ಆಗಲಿದೆ ಎಂದು ತಿಳಿಸಿದರು.(ದಿಗ್ವಿಜಯ ನ್ಯೂಸ್​)
ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ವಾರ್ಡ್‌ಗೆ ಮಾಜಿ ಸಿಎಂ ಎಚ್​​.ಡಿ.ಕುಮಾರಸ್ವಾಮಿ ಶಿಫ್ಟ್​

ವಯಸ್ಸು 48 ಆದ್ರೂ ನೀವಿನ್ನೂ ಮದ್ವೆ ಆಗಿಲ್ಲ ಏಕೆ? ನಟಿ ನಗ್ಮಾ ಕೊಟ್ಟ ಉತ್ತರ ವೈರಲ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
