ಬೆಂಗಳೂರು:ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದನೆಂಬ ಸಿಟ್ಟಿಗೆ ವ್ಯಕ್ತಿಯೊಬ್ಬ ತನ್ನೊಂದಿಗೆ ಕೆಲಸ ಮಾಡುತ್ತಿದ್ದವನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜೆಪಿ ನಗರದಲ್ಲಿರುವ 55 ವಾಲ್ಸ್ಟ್ರೀಟ್ ಪಬ್​ನಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಾಗರ್​(22) ಕೊಲೆಯಾದ ಯುವಕ. ಅದೇ ಪಬ್​ನಲ್ಲಿ ತ್ರಿಪುರ ಮೂಲದ ಮೌಸಿಕ್ ಹೆಸರಿನ ಯುವಕ ಕೆಲಸ ಮಾಡುತ್ತಿದ್ದ. ಇವರಿಬ್ಬರು ಸಹಾಯಕ ಬಾಣಸಿಗರಾಗಿ ಕೆಲಸ ಮಾಡುತ್ತಿದ್ದರು. ಶನಿವಾರದಂದು ಈ ಇಬ್ಬರ ನಡುವೆ ಜಗಳವಾಗಿದೆ. ನೀನು ಸರಿಯಾಗಿ ಕೆಲಸ ಮಾಡುವುದಿಲ್ಲವೆಂದು ಸಾಗರ್​, ಮೌಸಿಕ್​ ಬಗ್ಗೆ ಆರೋಪ ವ್ಯಕ್ತಪಡಿಸಿದ್ದಾನೆ. ಸಿಟ್ಟಿನಿಂದ ಒಂದೇಟನ್ನೂ ಹೊಡೆದಿದ್ದ.
ಹೊಡೆತ ತಿಂದ ಸಿಟ್ಟಿನಿಂದಾಗಿ ಮೌಸಿಕ್​ ಮಾಡಬಾರದ ಕೆಲಸ ಮಾಡಿಬಿಟ್ಟಿದ್ದಾನೆ. ರಾತ್ರಿ 9.30ರ ಸಮಯಕ್ಕೆ ಕಿಚನ್​ನಲ್ಲಿದ್ದ ಚಾಕು ತಂದು ಸಾಗರ್​ಗೆ ಚುಚ್ಚಿದ್ದಾನೆ. ಎದೆ ಹಾಗೂ ಹೊಟ್ಟೆ ಭಾಗಕ್ಕೆ ಇರಿದಿದ್ದಾನೆ. ಸಾಗರ್​ಗೆ ತೀವ್ರ ರಕ್ತಸ್ರಾವವಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆತ ಮಾರ್ಗ ಮಧ್ಯೆಯೇ ಸಾವನ್ನಪ್ಪಿರುವುದಾಗಿ ತಿಳಿಸಲಾಗಿದೆ. ಈ ಬಗ್ಗೆ ಜೆಪಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಮೆಯಲ್ಲೂ ಇದೆ ಏಕಪತ್ನಿವ್ರತಸ್ಥ ಸಂಪ್ರದಾಯ! ಆಮೆಯ ಬಗ್ಗೆ ನಿಮಗೆ ಗೊತ್ತಿರದ ವಿಚಾರಗಳಿವು…

ಮದ್ಯದ ಅಮಲಿನಲ್ಲಿ ದೇವಸ್ಥಾನದ ಸಾಧುವಿನ ಮೇಲೆ ಹಲ್ಲೆ; ಕೊಡಲಿಯಿಂದ ಹೊಡೆದು ಕೊಂದ ಪಾಪಿ!

ಬಿಗ್​ ಬಾಸ್​ ಮನೆಯಲ್ಲಿ ಎರಡೆರೆಡು ಲವ್​ ಸ್ಟೋರಿ! ಶುಭಾ ಮದುವೆ ನಂತರ ಇವರ ಮದುವೆ ಫಿಕ್ಸ್​ ಅಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
