ನವದೆಹಲಿ:ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೂ ಜನರ ತೆರಿಗೆ ಹಣದಿಂದಲೇ ಆಗಬೇಕಿದ್ದು, ತೆರಿಗೆ ಜಾಲವನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ವಿಸ್ತರಿಸುವುದನ್ನು ಗುರಿಯಾಗಿಸಿಕೊಂಡು ಯೋಜನೆ ರೂಪಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಚುನಾವಣೆಯ ನಂತರ 2024ನೇ ಸಾಲಿನ ಬಜೆಟ್ ಭಾಷಣದ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಧ್ಯಮ ವರ್ಗದವರಿಗೆ ಪರಿಹಾರ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಬಜೆಟ್‌ನಲ್ಲಿ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಸೃಷ್ಟಿ ಯೋಜನೆಗಳಿಗೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.
ಎಲ್ಲಾ ಸ್ಟಾರ್ಟಪ್ ಹೂಡಿಕೆದಾರರಿಗೆ ’ಏಂಜೆಲ್ ಟ್ಯಾಕ್ಸ್’ ರದ್ದುಗೊಳಿಸುವುದು, ಮೊಬೈಲ್ ಫೋನ್‌ಗಳು ಮತ್ತು ಚಿನ್ನದ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸುವುದು ಹಾಗೂ ಬಂಡವಾಳದ ಮೇಲಿನ ಲಾಭದ ತೆರಿಗೆಯನ್ನು ಸರಳಗೊಳಿಸುವುದು ಸೇರಿದಂತೆ ತೆರಿಗೆ ಸುಧಾರಣೆಗಳನ್ನು ಹೊಸದಾಗಿ ಪರಿಚಯಿಸಲಾಗಿದೆ. ಇದರ ಹೊರತಾಗಿಯೂ ಸೆಕ್ಯುರಿಟೀಸ್ ವಹಿವಾಟು ತೆರಿಗೆ (ಎಸ್‌ಟಿಟಿ) ಯನ್ನು ಹೆಚ್ಚಳ ಮಾಡುವ ಭವಿಷ್ಯದ ಆಯ್ಕೆಗಳ ಲೆಕ್ಕಾಚಾರದ ಮೇಲೆ ಷೇರು ಮಾರುಕಟ್ಟೆಗಳಲ್ಲಿ ಕುಸಿತ ಕಂಡು ಬಂದಿದೆ ಎಂದು ಬಜೆಟ್ ಬೆಳವಣಿಗೆಗಳನ್ನು ವಿಶ್ಲೇಷಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + four =
Remember me
