ತುಮಕೂರು:ಬುಡಕಟ್ಟು ಜನಾಂಗದವರ ಗಂಜಿಗೂ ಕುತ್ತು ತಂದಿರುವ ಆರೋಪ ಎದುರಿಸುತ್ತಿರುವ ತಹಸೀಲ್ದಾರ್ ವಿರುದ್ಧ ಇದೀಗ ಎಫ್​ಐಆರ್ ದಾಖಲಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್​ ತೇಜಸ್ವಿನಿ ವಿರುದ್ಧ ಚಿಕ್ಕನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಕೇದಿಗೆಹಳ್ಳಿ ಗ್ರಾಮದ ಗುಂಡು ತೋಪಿನಲ್ಲಿ ಅಲೆಮಾರಿ ಸಮುದಾಯದವರು ವಾಸವಿದ್ದ ಕಾಲನಿ ವ್ಯಾಪಕ ಮಳೆಯಿಂದ ಸಂಪೂರ್ಣ ಜಲಮಯವಾಗಿತ್ತು. ಈ ವೇಳೆ ಸರ್ಕಾರದ ವತಿಯಿಂದ ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಗಂಜಿ ಕೇಂದ್ರ ತೆರೆದು ಅಲೆಮಾರಿ ಕುಟುಂಬಗಳನ್ನು ಅಲ್ಲಿ ಇರಿಸಲಾಗಿತ್ತು.
ನಂತರ ವಾತಾವರಣ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಗಂಜಿ ಕೇಂದ್ರವನ್ನು ಬಿಟ್ಟು ಬೇರೆಡೆ ಹೋಗಲು ತಹಸೀಲ್ದಾರ್ ತೇಜಸ್ವಿನಿ ಸೂಚಿಸಿದ್ದರು. ಇದಕ್ಕೆ ನಿರಾಕರಿಸಿದ ಅಲೆಮಾರಿ ಸಮುದಾಯದವರು, ತಮಗೆ ಮೂಲಭೂತ ಸೌಕರ್ಯ ಒದಗಿಸಿ ಎಂದು ಒತ್ತಾಯಿಸಿದ್ದರು.
ಆದರೆ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದ ತಹಸೀಲ್ದಾರ್, ಕಚೇರಿ ಸಿಬ್ಬಂದಿ ಜತೆ ಬಂದು, ಕೂಡಲೇ ಗಂಜಿ ಕೇಂದ್ರ ಖಾಲಿ ಮಾಡುವಂತೆ ಅಲೆಮಾರಿ ಸಮುದಾಯಗಳ ವಿರುದ್ಧ ದೌರ್ಜನ್ಯ ಎಸಗಿದ್ದಾರೆಂದು ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಕಳೆದ ಡಿಸೆಂಬರ್​ನಲ್ಲಿ ನಡೆದಿದ್ದ ಪ್ರಕರಣಕ್ಕೆ ಇಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.
ಅಲ್ಲದೆ ದಲಿತ ಮಹಿಳೆಯ ತಂದೆಯ ಆಧಾರ ಕಾರ್ಡ್ ಬ್ಲ್ಯಾಕ್​ಲಿಸ್ಟ್​ಗೆ ಸೇರಿಸಿ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ತಡೆಹಿಡಿಯುವುದಾಗಿಯೂ ತಹಸೀಲ್ದಾರ್ ಬೆದರಿಕೆ ಒಡ್ಡಿದ್ದರು ಎಂಬುದನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳ ಆತ್ಮಹತ್ಯೆಗೆ ಮರುಗಿದ ನೆಟ್ಟಿಗರು…

ಬಿಎಸ್​ವೈ ಮೊಮ್ಮಗಳ ಆತ್ಮಹತ್ಯೆ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವರಿಂದ ಸಾಂತ್ವನ

ಠಾಣೆಗೇ ಬಂದಿತ್ತು ಎಸ್​ಪಿ ಕಾರು: ಸರ್ಕಲ್ ಇನ್​ಸ್ಪೆಕ್ಟರ್​ಗೂ ಮುಳುವಾಯ್ತು ಎಸ್​ಐ ದರ್ಬಾರು…

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:two × three =
Remember me
