ಹಾವೇರಿ:ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಹಾವೇರಿ ತಾಲ್ಲೂಕಿನ ಆಲದಕಟ್ಟಿಯಲ್ಲಿ ನಡೆದಿದೆ.
ಮೃತರನ್ನು ದ್ಯಾಮಪ್ಪ ಓಲೇಕಾರ್​(45), ರಮೇಶ್​​ ಬಾರ್ಕಿ(28), ಶಿವಲಿಂಗ ಅಕ್ಕಿ(28) ಎಂದು ಗುರುತಿಸಲಾಗಿದೆ. ವೆಲ್ಡರ್​​ ವಾಸಿಂ ಶಫಿ ಅಹ್ಮದ್(32)​​ ಹಾಗೂ ಶೇರು ಮಾಳಪ್ಪ ಕಟ್ಟಿಮನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವೀರೇಶ್​ ಸಾತೇನಹಳ್ಳಿ ಎಂಬುವವರಿಗೆ ಈ ಗೋದಾಮು ಸೇರಿದ್ದು, ಮುಂಬರುವ ಗಣೇಶ ಚತುರ್ಥಿ, ದಸರಾ ಹಾಗೂ ದೀಪಾವಳಿ ಹಬ್ಬಕ್ಕೆ ಪಟಾಕಿಯನ್ನು ದಾಸ್ತಾನು ಮಾಡಲಾಗಿತ್ತು. ಗೋದಾಮಿನ ಗೇಟ್​ ವೆಲ್ಡಿಂಗ್​ ಮಾಡುವ ಸಂದರ್ಭದಲ್ಲಿ ಬೆಂಕಿ ಕಿಡಿ ಹಾರಿ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಪಟಾಕಿ ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ:ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್‌ಗೆ 200 ರೂ. ಇಳಿಕೆ; ಕೇಂದ್ರದಿಂದ ಮಹಿಳೆಯರಿಗೆ ರಕ್ಷಾಬಂಧನ ಗಿಫ್ಟ್
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸತತ ಐದು ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತ್ತೋಟಿಗೆ ತಂದಿದ್ದಾರೆ. ಕಾರ್ಯಾಚರಣೆಯಲ್ಲಿ ಆರು ವಾಹನಗಳು ಹಾಗೂ 25 ಸಿಬ್ಬಂದಿ ಪಾಲ್ಗೊಂಡಿದ್ದರು. ಗೋದಾಮಿನ ಒಳಗೆ ಇನ್ನೂ ಇಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಪಟಾಕಿ ಗೋದಾಮಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದ ಕುರಿತು ಮಾಹಿತಿ ಪಡೆದಿರುವ ಸಿಎಂ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್​ ಪಾಟೀಲ್​ ಅವರಿಗೆ ದುರಂತ ನಡೆದ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
