ಧಾರವಾಡ:ನಗರದ ಬೈಪಾಸ್‌ನ ಇಟ್ಟಿಗಟ್ಟಿ ಬಳಿ ಪಟಾಕಿ ತುಂಬಿದ್ದ ಲಾರಿ ಹಾಗೂ ಮತ್ತೊಂದು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಕಳೆದ ಸಂಕ್ರಾಂತಿ ಹಬ್ಬದ ಮಾರನೇ ದಿನ ಇದೇ ಸ್ಥಳದಲ್ಲಿ ಭೀಕರ ಅಪಘಾತ ಸಂಭವಿಸಿ 9 ಮಂದಿ ಬಾಲ್ಯ ಸ್ನೇಹಿತೆಯರು ಸೇರಿ 11 ಮಂದಿ ಬಾರದ ಲೋಕಕ್ಕೆ ಹೋಗಿದ್ದರು. ಈ ಕಹಿ ಘಟನೆ ಇನ್ನೂ ಕಾಡುತ್ತಿದ್ದೆ. ಇದೀಗ ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯಿಂದ ಪಟಾಕಿ ಬಾಕ್ಸ್​ಗಳು ಹೊರಬಿದ್ದಿವೆ.
ಪಟಾಕಿ ತುಂಬಿಕೊಂಡು ಶಿವಕಾಶಿಯಿಂದ ಮುಂಬೈಗೆ ಹೊರಟಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪಟಾಕಿ ತುಂಬಿದ್ದ ಲಾರಿ ಅಪಘಾತಕ್ಕೀಡಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಚ್ಚಿಬಿದ್ದರು. ಒಂದು ವೇಳೆ ಪಟಾಕಿಗೆ ಬೆಂಕಿ ಹೊತ್ತಿಕೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್​ ಪ್ರಾಣಾಪಾಯ ಆಗಲಿಲ್ಲ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಪರಿಶೀಲಿಸಿದರು. ಅಗ್ನಿ ಅವಘಡ ತಡೆ ಸಲಕರಣೆಯಿಲ್ಲದೆ ಪಟಾಕಿ ಸಾಗಾಟ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಹಟ್ಟೇಕರ ಅವರು ಪರಿಶೀಲನೆ ನಡೆಸಿದರು.
ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ಕೋಟಿ ಮೌಲ್ಯದ ಜಮೀನು ದಾನ ಕೊಡ್ತೀನಿ, ತಾಕತ್​ ಇದ್ರೆ ರಾಮಮಂದಿರ ಕಟ್ಟಿಸಿ: ಸಿದ್ದುಗೆ ರೈತನ ಸವಾಲು

ಜೆಡಿಎಸ್​ಗೆ ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven + ten =
Remember me
