ಚಾಮರಾಜನಗರ:ಜಿಲ್ಲೆy ಗುಂಡ್ಲುಪೇಟೆ ತಾಲೂಕು ಮದ್ದೂರು ವನ್ಯಜೀವಿ ವಲಯದಲ್ಲಿ ಕಳ್ಳಬೇಟೆಗಾರರ ಗುಂಪು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಕಳ್ಳಬೇಟೆಗಾರ ಮೃತಪಟ್ಟಿರುವ ಘಟನೆ ನಡೆದಿದೆ.
ಇಂದು ಬೆಳಗಿನ ಝಾವ 2 ಗಂಟೆ ಸುಮಾರಿನಲ್ಲಿ 8-10 ಜನರಿದ್ದ ಕಳ್ಳ ಬೇಟೆಗಾರರ ಗುಂಪು ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿ, ಸಾಂಬಾರ (ಕಡವೆ) ಬೇಟೆ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿ ಮೇಲೆ ಕಳ್ಳ ಬೇಟೆಗಾರರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಪ್ರತಿ ದಾಳಿ ಮಾಡಿದ ಸಂದರ್ಭದಲ್ಲಿ ಒಬ್ಬ ಕಳ್ಳ ಬೇಟೆಗಾರ ಮೃತಪಟ್ಟಿದ್ದು, ಇತರರು ತಪ್ಪಿಸಿಕೊಂಡಿರುವುದಾಗಿ ವರದಿಯಾಗಿದೆ.
ಸ್ಥಳದಿಂದ ಸಾಂಬಾರ್ (ಕಡವೆ) ಮಾಂಸ (ತಲೆ ಮತ್ತು ಕಾಲಿನ ಭಾಗ) ಮತ್ತು ಬಂದೂಕನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾ ದಂಡಾಧಾರಿಗಳೂ ಆದ ಜಿಲ್ಲಾಧಿಕಾರಿಗಳು ಮತ್ತು ಕೊಳ್ಳೇಗಾಲದ ಉಪ ವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ನಂಜೇಗೌಡನ ಕಟ್ಟೆ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದು ಕಾಡಿನ ಗಡಿಯಿಂದ ಸುಮಾರು 2 ಕಿ.ಮೀ ದೂರದಲ್ಲಿದೆ. ಬಂಡೀಪುರ ಅರಣ್ಯ ವಲಯದ ನಿರ್ದೇಶಕರು, ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಕೊಳ್ಳೆಗಾಲ ಉಪ ವಿಭಾಗಾಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಮನೆ ಬಾಗಿಲು ಬಳಿ ಬಂದು ನಿಂತ ಚಿರತೆ

ವಿಭಿನ್ನವಾಗಿ ಅಭಿಮಾನ ತೋರ್ಪಡಿಸಿದ ಜೂ. ಎನ್​ಟಿಆರ್​ ಅಭಿಮಾನಿ; ವ್ಯಾಪಕ ಮೆಚ್ಚುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
