ಯಾದಗಿರಿ:ನಿಂತಿದ್ದ ಲಾರಿಗೆ ಕ್ರೂಸರ್​​ ಡಿಕ್ಕಿಯಾಗಿ ಸ್ಥಳದಲ್ಲೇ ಐದು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಯಾದಗಿರಿ ತಾಲೂಕಿನ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150 (a) ನಲ್ಲಿ ನಡೆದಿದೆ.
ಈ ಅವಘಡದಲ್ಲಿ 13 ಜನರಿಗೆ ಗಾಯಗಳಾಗಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಬಾಲಕಿ ಹಾಗೂ ಓರ್ವ ಬಾಲಕ ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಮುನೀರ್ (40), ನಯಾಮತ್ (40), ಮುದ್ದತ್ ಶಿರ್ (12), ರಮೀಜಾ ಬೇಗಂ (50) ಹಾಗೂ ಸುಮ್ಮಿ (12) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಜನಸಂಖ್ಯೆಗಿಂತಲೂ ಅಧಿಕ ಆಧಾರ್!; 9 ರಾಜ್ಯಗಳಲ್ಲಿ ಬದುಕಿರುವವರಿಗಿಂತ ಹೆಚ್ಚು ಕಾರ್ಡ್
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು. ಈ ವೇಳೆ ಚಕ್ರ ಬಳಿ ಇರುವ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ 5 ಜನ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ನ್ಯಾಯದೇವತೆ | ಗಂಡ ಪ್ರತಿ ದಿನ ಹೊಡೆದು ಹಿಂಸಿಸುತ್ತಾರೆ, ಏನು ಮಾಡಬೇಕು?

ದೇವರೆಲ್ಲಿದ್ದಾನೆ?: ಮನೋಲ್ಲಾಸ ಅಂಕಣ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 2 =
Remember me
