ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣಾ ಚಟುವಟಿಕೆಯಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಮತದಾನ ಮುಗಿಯುತ್ತಿದ್ದಂತೆ ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದರು. ಇಂದು ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ತಡರಾತ್ರಿಯೇ ಎಚ್​ಡಿಕೆ ಬೆಂಗಳೂರಿಗೆ ಬಂದಿಳಿದಿದ್ದಾರೆ.
ರಾತ್ರಿ 12.20ರ ವಿಮಾನದಲ್ಲಿ ಮಾಜಿ ಸಿಎಂ ಎಚ್​ಡಿಕೆ ಸಿಂಗಾಪುರದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಸಾಕಷ್ಟು ಅಭಿಮಾನಿಗಳು ಅವರ ಜತೆ ಪೊಟೋಗೆ ಮುಗಿಬಿದ್ದರು.
ಇದನ್ನೂ ಓದಿ:ಅಧಿಕಾರ ಸೂತ್ರ, ತ್ರಿಪಕ್ಷಗಳ ತಂತ್ರ: ಇಂದು ಫಲಿತಾಂಶ, ವಿವಿಧ ಲೆಕ್ಕಾಚಾರ; ಕುರುಡು ಅಂದಾಜಿನಲ್ಲಿ ನೇತಾರರ ನಡೆ
ಕೆಲ ಕಾಲ ಅಲ್ಲಿಯೇ ನಿಂತು ಮಾಜಿ ಸಿಎಂ ಎಚ್​ಡಿಕೆ ಫೋಟೋ ತೆಗೆಸಿಕೊಂಡರು. ವಿದೇಶಿ ಪ್ರಯಾಣಿಕರ ಆಗಮನ ದ್ವಾರದ ಬಳಿ ಏರ್ಪೊಟ್ ಸಿಬ್ಬಂದಿ ಮತ್ತು ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಬಳಿಕ ಎಚ್​ಡಿಕೆ ಅಲ್ಲಿಂದ ಹೊರಟರು.
ಕರ್ನಾಟಕದ 16ನೇ ವಿಧಾನಸಭೆಗೆ ಮೇ 10ರಂದು ಮತದಾನ ನಡೆದಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಯಾವುದೇ ಪಕ್ಷ ಅಧಿಕಾರ ರಚನೆ ಮಾಡಲು 113 ಸ್ಥಾನಗಳನ್ನು ಗೆಲ್ಲಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.(ದಿಗ್ವಿಜಯ ನ್ಯೂಸ್​)
ಸಾಮೂಹಿಕ ಜವಾಬ್ದಾರಿ: ಮತದಾನ ಪ್ರಮಾಣ, ನಗದು ವಶದಲ್ಲಿ ದಾಖಲೆ

ಡೀಸೆಲ್ ವಾಹನ ನಿಷೇಧದ ಆಚೆ ಈಚೆ

ಸಿಹಿ ಹಂಚೋಣ..: ಮನೋಲ್ಲಾಸ ಅಂಕಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
