ಚಿತ್ರದುರ್ಗ:ಶಾಸಕ ಮಹೇಶ್ ಕುಮಟಳ್ಳಿಯವರು ಕೂಡ ತ್ಯಾಗ ಮಾಡಿ ಬಂದವರು. ಅವರಿಗೂ ಸೂಕ್ತ ಸ್ಥಾನಮಾನ ಸಿಗಬೇಕು ಎಂದು ಸಚಿವ ಬಿ.ಸಿ.ಪಾಟೀಲ್​ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋತವರಿಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ. ಅವರಿಗೆಲ್ಲ ಜುಲೈ ವೇಳೆಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯನವರ ಬಗ್ಗೆ ವ್ಯಂಗ್ಯವಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರು ಹತಾಶರಾಗಿ ಮಾತನಾಡುತ್ತಿದ್ದಾರೆ. ನಮ್ಮಿಂದಲೇ ಅವರಿಗೆ ವಿಪಕ್ಷ ನಾಯಕನ ಸ್ಥಾನ ಸಿಕ್ಕಿದ್ದು. ಸರ್ಕಾರದ ಕಾರು, ಬಂಗಲೆ ಇಲ್ಲದೆ ಯಾರೋದ್ದೋ ಹೆಸರಿನ ಬಂಗಲೆಯಲ್ಲಿ ವಾಸವಾಗಿದ್ದರು. ನಮ್ಮನ್ನೆಲ್ಲ ಸಿದ್ದರಾಮಯ್ಯನವರು ನೆನಪಿಸಿಕೊಳ್ಳಬೇಕು. ಅವರಿಗೆ ನಮ್ಮ ಬಗ್ಗೆ ಒಳಗೇ ಪ್ರಿತಿ ಇರುತ್ತದೆ. ವಿಪಕ್ಷ ನಾಯಕನೆಂಬ ಕಾರಣಕ್ಕೆ ಮಾತನಾಡುತ್ತಾರೆ ಎಂದು ಹೇಳಿದರು.
ದೇಶ ವಿರೋಧಿ ಘೋಷಣೆ ಕೂಗಿದರೆ ಕಂಡಲ್ಲಿ ಗುಂಡಿಕ್ಕುವ ಕಾನೂನು ತರಬೇಕು. ದೇಶದ ಅನ್ನ, ನೀರು, ಗಾಳಿ ಸೇವಿಸಿ ಬಳಿಕ ಇದೇ ದೇಶದ ವಿರೋಧವಾಗಿ ಘೋಷಣೆ ಕೂಗುವುದು ಸಲ್ಲದು. ಗುಂಡಿಕ್ಕುವ ಕಾನೂನು ತರಲು ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
