ನವದೆಹಲಿ:ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯಿಲಿ ಅವರ “ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯ” ಮಹಾಕಾವ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಪಾತ್ರವಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಇದಾಗಿದೆ. ಅಕಾಡೆಮಿ ಅಧ್ಯಕ್ಷ, ಕನ್ನಡದ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರ ನೇತೃತ್ವದ ಸಮಿತಿ ಒಟ್ಟು 20 ವಿಭಾಗಗಳ ಕೃತಿಗಳನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.
ಬಾಲ ಸಾಹಿತ್ಯ ಪುರಸ್ಕಾರ ವಿಭಾಗದಲ್ಲಿ ಮಕ್ಕಳ ಸಾಹಿತಿ ಎಚ್‌.ಎಸ್‌. ಬ್ಯಾಕೋಡ ಅವರ ‘ನಾನೂ ಅಂಬೇಡ್ಕರ್‌’ ಕಾದಂಬರಿಯು ಅಕಾಡೆಮಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದರೆ, ಕೆ.ಎಸ್‌. ಮಹದೇವಸ್ವಾಮಿ ಅವರ ‘ಧೂಪದ ಮಕ್ಕಳು’ ಸಣ್ಣ ಕಥೆಗಳ ಸಂಕಲನ ಯುವ ಪುರಸ್ಕಾರದ ಗೌರವಕ್ಕೆ ಪಾತ್ರವಾಗಿದೆ. ಉರ್ದು ಭಾಷೆಯ ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಹಫೀಸ್ ಕರ್ನಾಟಕ ಅವರ ‘ಫಕ್ರ್-ಇ-ವತನ್’ ಎಂಬ ಉರ್ದು ಭಾಷೆಯ ಸಣ್ಣ ಕಥೆಗಳ ಸಂಕಲನ ಕೂಡ ಬಾಲ ಪುರಸ್ಕಾರಕ್ಕೆ ಅಯ್ಕೆಯಾಗಿರುವುದು ವಿಶೇಷ. ಶಿವಮೊಗ್ಗದ ಶಿಕಾರಿಪುರ ಮೂಲದ ಹಫೀಸ್ ಕರ್ನಾಟಕ ಅವರ ನಿಜ ಹೆಸರು ಅಮ್ಜದ್ ಹುಸೇನ್.
ರಾಜ್ಯದ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಯು.ಆರ್. ಅನಂತಮೂರ್ತಿ ಅವರ ಕುರಿತು ಲೇಖಕ ಅಂಕಿತ್ ನರ್ವಾಲ್ ಅವರು ಹಿಂದಿ ಭಾಷೆಯಲ್ಲಿ ರಚಿಸಿದ ‘ಯು.ಆರ್. ಅನಂತಮೂರ್ತಿ ಪ್ರತಿರೋಧ್ ಕಾ ವಿಕಲ್ಪ್’ ಎಂಬ ವಿಮರ್ಶಾ ಕೃತಿಯು ಯುವ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ವಿಶೇಷ.
ನವದೆಹಲಿಯಲ್ಲಿ ಏರ್ಪಡಿಸಲಾಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ವಾರ್ಷಿಕ ಪ್ರಶಸ್ತಿಯು ರೂ. 1 ಲಕ್ಷ ನಗದು ಮತ್ತು ಸ್ಮರಣಿಕೆ ಒಳಗೊಂಡಿದ್ದು, ಬಾಲ ಸಾಹಿತ್ಯ ಮತ್ತು ಯುವ ಪುರಸ್ಕಾರಗಳು ತಲಾ 50,000 ನಗದು ಹಾಗೂ ಸ್ಮರಣಿಕೆ ಒಳಗೊಂಡಿವೆ.
ಸಾಹಿತಿ ಡಾ.ಎಸ್‌.ಜಿ. ಸಿದ್ದರಾಮಯ್ಯ, ಡಾ.ಪದ್ಮಾ ಪ್ರಸಾದ್‌, ಅರವಿಂದ ಮಾಲಗತ್ತಿ, ಬೇಲೂರು ರಘುನಂದನ್‌, ಸಿದ್ಧಲಿಂಗ ಪಟ್ಟಣಶೆಟ್ಟಿ, ಟಿ.ಪಿ. ಅಶೋಕ್‌, ಎಚ್‌.ಎಲ್‌. ಪುಷ್ಪಾ, ಕುಂ. ವೀರಭದ್ರಪ್ಪ, ಎಚ್‌.ಎಸ್‌. ವೆಂಕಟೇಶಮೂರ್ತಿ ಅವರಿದ್ದ ವಿವಿಧ ಆಯ್ಕೆ ಸಮಿತಿಗಳು ಕನ್ನಡ ವಿಭಾಗದ ಕೃತಿಗಳನ್ನು ಪುರಸ್ಕಾರಕ್ಕೆ ಶಿಫಾರಸು ಮಾಡಿದ್ದವು ಎಂದು ಅಕಾಡೆಮಿ ಮಾಹಿತಿ ನೀಡಿದೆ.
ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ

ಪ್ರಶ್ನೆ ಕೇಳಿದ್ದಕ್ಕೆ ಪತ್ರಕರ್ತರ ಮುಖಕ್ಕೆ ಹ್ಯಾಂಡ್​ ಸ್ಯಾನಿಟೈಸರ್ ಸಿಂಪಡಿಸಿದ ಪ್ರಧಾನಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten − eight =
Remember me
