ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಮಿತಿಮೀರುತ್ತಿವೆ. ಅತಿಯಾದ ಪ್ರಕರಣಗಳ ಕಾರಣಕ್ಕೆ ಆಸ್ಪತ್ರೆ, ಆರೋಗ್ಯ ವ್ಯವಸ್ಥೆ, ಸರ್ಕಾರದ ಮೇಲೆ ತಡೆಯಲಾರದ ಒತ್ತಡ ಸೃಷ್ಟಿಯಾಗುತ್ತಿದೆ. ಮಹಾಮಾರಿ ವಿರುದ್ಧ ಎಷ್ಟು ಸೆಣಸಿದರೂ ಇನ್ನೂ ಸೆಣಸಬೇಕಾದದ್ದು ಈಗಿನ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟು ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಹತ್ತು ಸಲಹೆಗನ್ನು ನೀಡಿದ್ದಾರೆ.
ಕೋವಿಡ್‌ ಅನ್ನು ಹೇಗೆ ತಡೆಯಬೇಕು, ಯಾವ ರೀತಿ ಇದರಿಂದ ಪಾರಾಗಬೇಕು ಎಂಬುದರ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೊಸ ಆಲೋಚನೆ, ಹೊಸ ಅವಕಾಶಗಳ ಬಗ್ಗೆ ಯೋಚಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ನನಗೆ ಪರಿಚಿತರಿರುವ ತಜ್ಞರು, ವೈದ್ಯರು, ಸಲಹೆಗಾರರ ಗುಂಪಿನೊಂದಿಗೆ ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಮುಖ ಎನಿಸುವ ಹತ್ತು ಸಲಹೆಗಳನ್ನು ನೀಡಿದ್ದೇನೆ ಎಂದಿದ್ದಾರೆ. ಎಚ್​ಡಿಕೆ ನೀಡಿರುವ ಹತ್ತು ಸಲಹೆಗಳು ಇಲ್ಲಿವೆ ನೋಡಿ…
1.ಫೀವರ್‌ ಕ್ಲಿನಿಕ್‌ಗಳುಪ್ರತಿ ವಾರ್ಡ್‌, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 3-4 ಫೀವರ್‌ ಕ್ಲಿನಿಕ್‌ಗಳನ್ನು ಆರಂಭಿಸಬೇಕು. ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಇರುವವರಿಂದ ಆಸ್ಪತ್ರೆಗಳ ಮೇಲೆ ಬೀಳುತ್ತಿರುವ ಒತ್ತಡವನ್ನು ಈ ಮೂಲಕ ನಿಯಂತ್ರಿಸಬಹುದು. ಮತ್ತು, ಸೋಂಕಿತರನ್ನು ಪತ್ತೆಹಚ್ಚಲೂ ಈ ಫೀವರ್‌ ಕ್ಲಿನಿಕ್‌ಗಳು ನೆರವಾಗಬಲ್ಲವು.
2.ಸಿಬ್ಬಂದಿ ನಿಯೋಜನೆವೈದ್ಯಕೀಯೇತರ ಬೋಧನಾ ಸಿಬ್ಬಂದಿ ಮತ್ತು ‘ರಾಷ್ಟ್ರೀಯ ಹೆಲ್ತ್‌ ಮಿಷನ್‌’ನ ಸಿಬ್ಬಂದಿಯನ್ನು ಕೋವಿಡ್‌ ನಿಯಂತ್ರಣಾ ವ್ಯವಸ್ಥೆಗೆ ನಿಯೋಜಿಸಬೇಕು. ಸಿಬ್ಬಂದಿ ಕೊರತೆ ಅನುಭವಿಸುತ್ತಿರುವ ಆಸ್ಪತ್ರೆಗಳು ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಇವರ ಸೇವೆಯನ್ನು ಅಗತ್ಯವಾಗಿ ಬಳಸಿಕೊಳ್ಳಬೇಕು.
3.ಆಯುಷ್‌ ಕಾಲೇಜು, ಆಸ್ಪತ್ರೆಗಳ ಸೇವೆ ಬಳಕೆಸೋಂಕಿನ ಲಕ್ಷಣವಿಲ್ಲದ ಅಥವಾ ಕಡಿಮೆ ಲಕ್ಷಣಗಳಿರುವ ಕೋವಿಡ್‌ ರೋಗಿಗಳಿಗೆ ರಾಜ್ಯದ ಆಯುಷ್‌ ಕಾಲೇಜುಗಳು ಮತ್ತು ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು. ಅವುಗಳು ತಮ್ಮಲ್ಲಿ ಲಭ್ಯವಿರುವ ಸಿಬ್ಬಂದಿಯ ನೆರವಿನಿಂದಲೇ ಆರೋಗ್ಯ ಸೇವೆ ನೀಡಿದರೆ, ಇತರೆ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬಹುದು.
4.ನಿಗಾ ಕೇಂದ್ರಗಳುವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳು, ಹೋಟೆಲ್‌ಗಳನ್ನು ಸೋಂಕು ಲಕ್ಷಣ ರಹಿತರ ಆರೈಕೆ ಮತ್ತು ನಿಗಾ ಕೇಂದ್ರಗಳಾಗಿ ಪರಿವರ್ತಿಸಬೇಕು. ಲಕ್ಷಣಗಳು ಕಾಣಿಸಿಕೊಂಡು, ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ಮಾತ್ರ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ವರ್ಗಾಯಿಸಬೇಕು.
5.ಹಾಸಿಗೆ ನೀಡಬೇಕಾದ್ದನ್ನು ಯಾರು ನಿರ್ಧರಿಸಬೇಕು?ವಾರ್ಡ್‌, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಕ್ಲಿನಿಕ್‌ಗಳು ಮತ್ತು ಆರೋಗ್ಯ ಸಿಬ್ಬಂದಿ ಮಾತ್ರ ಹಾಸಿಗೆಗಾಗಿ ವಾರ್‌ ರೂಂಗಳಿಗೆ ಶಿಫಾರಸು ಮಾಡಬೇಕು. ಹಾಸಿಗೆ ಒದಗಿಸುವ ಅಧಿಕಾರ, ಹೊಣೆಗಾರಿಕೆಯನ್ನು ಅವರಿಗೇ ನೀಡಬೇಕು. ಹಾಸಿಗೆ ನೀಡಬೇಕೇ ಬೇಡವೇ ಎಂಬುದನ್ನು ಡೇಟಾ ಎಂಟ್ರಿ ಆಪರೇಟರ್‌ಗಳು ನಿರ್ಧರಿಸಬಾರದು.
ಇದನ್ನೂ ಓದಿ:ಸಂಸದೆ ಸುಮಲತಾ ಸ್ವಂತ ಹಣದಲ್ಲಿ ಆಕ್ಸಿಜನ್​ ತಂದಿಲ್ಲ, ಸರ್ಕಾರ ಕೊಟ್ಟದ್ದು: ಪ್ರಚಾರಕ್ಕಾಗಿ ಸುಳ್ಳು ಹೇಳಿದ್ದಾರೆ…
6.ಆಸ್ಪತ್ರೆಗೊಬ್ಬ ಅಧಿಕಾರಿಎಲ್ಲಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವ್ಯವಸ್ಥಾಪನೆ ಮೇಲೆ ನಿಗಾ ವಹಿಸಲು ಐಎಎಸ್‌ ಮತ್ತು ಕೆಎಎಸ್‌ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಬೇಕು. ಅವರು ರೋಗಿಗಗಳ ಹಾಸಿಗೆ, ಔಷಧ, ಆರೈಕೆ, ಆಹಾರ ಪೂರೈಕೆ ವ್ಯವಸ್ಥೆಯನ್ನು ನಿಭಾಯಿಸಬೇಕು. ಅದರ ಜೊತೆಗೇ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರೂ ಸೇರಿದಂತೆ ಆರೋಗ್ಯ ಸಿಬ್ಬಂದಿಯ ಅಗತ್ಯಗಳನ್ನು ಪೂರೈಸಬೇಕು.
7.ಆಸ್ಪತ್ರೆ ಅಧಿಕಾರಿಯ ಹೊಣೆಗಾರಿಕೆಗಳುನಿರ್ದಿಷ್ಟ ಆಸ್ಪತ್ರೆಗೆ ನಿಯೋಜಿಸಲಾದ ಅಧಿಕಾರಿಯು ಪ್ರತಿನಿತ್ಯ ತನ್ನ ಜವಾಬ್ದಾರಿಯ ಆಸ್ಪತ್ರೆಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ತಾಕೀತು ಮಾಡಬೇಕು. ರೋಗಿಗಳು ಮತ್ತು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯ ಬೇಕು ಬೇಡಗಳ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಸಮಸ್ಯೆ ಬಗೆಹರಿಸುವ ಅಧಿಕಾರ, ಹೊಣೆಗಾರಿಕೆ, ಸಂಪನ್ಮೂಲವನ್ನು ಸರ್ಕಾರ ನೀಡಬೇಕು.
8.ಸ್ವಯಂ ಸೇವಕರು, ಯುಕವರಿಗೆ ಕರೆಕೋವಿಡ್‌ ವಿರುದ್ಧ ಅವಿರತವಾಗಿ ಹೋರಾಡುತ್ತಿರುವ, ನಾಗರಿಕರ ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸೆಣಸುತ್ತಿರುವ ಅರೋಗ್ಯ ವ್ಯವಸ್ಥೆಯ ನೆರವಿಗೆ ಬರುವಂತೆ ಯುವಕರಿಗೆ, ಸ್ವಯಂ ಸೇವಕರಿಗೆ ಸರ್ಕಾರ ಕರೆ ನೀಡಬೇಕು. ಅವರ ಸೇವೆ ಪಡೆಯುವ ಜೊತೆಗೆ, ಕೋವಿಡ್‌ ವಿರುದ್ಧ ಹೋರಾಟಕ್ಕೆ ಉಪಯುಕ್ತ ಎನಿಸುವ ಅವರ ಚಿಂತನೆಗಳನ್ನೂ ಸರ್ಕಾರ ಪ್ರೋತ್ಸಾಹಿಸಬೇಕು.
9.ಲಸಿಕೆ ಮತ್ತು ಜಾಗೃತಿಫೀವರ್‌ ಕ್ಲಿನಿಕ್‌ಗಳ ಹಂತದಲ್ಲಿಯೂ ಲಸಿಕೆ ಲಭ್ಯವಾಗಬೇಕು. ಮತ್ತು, ಲಸಿಕೆಯು ಕೋವಿಡ್‌ ಅನ್ನು ನಿಯಂತ್ರಿಸಬಲ್ಲದು ಎಂದು ಜಾಗೃತಿ ಮೂಡಿಸುವ ಕಾರ್ಯವೂ ಇಲ್ಲಿಂದಲೇ ಆರಂಭವಾಗಬೇಕು.
10.ಅರ್ಹರು ಕಾಯಂ ಆಗಬೇಕುಆರೋಗ್ಯ ಇಲಾಖೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಸಿಬ್ಬಂದಿಯಲ್ಲಿ ಅರ್ಹರನ್ನು ಸರ್ಕಾರ ಕೂಡಲೇ ಕಾಯಂಗೊಳಿಸಬೇಕು.
ಆಗಸ್ಟ್​ನಲ್ಲಿ ಮಹಾಮಾರಿ ಕರೊನಾ ಮುಕ್ತವಾಗಲಿದೆ ಬ್ರಿಟನ್​: ಸರ್ಕಾರದ ವರದಿಯಲ್ಲೇನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
