ಬೆಂಗಳೂರು:ತೇಲುವ ಚಿನ್ನ ಖ್ಯಾತಿಯ ನಿಷೇಧಿತ ಅಂಬೇಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಎಸ್​ಜೆ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಅಂದಾಜು 20 ಕೋಟಿ ರೂ. ಬೆಲೆ ಬಾಳುವ 20 ಕೆಜಿ ಅಂಬೇಗ್ರೀಸ್ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊದಲು ಇಬ್ಬರು ಆರೋಪಿಗಳನ್ನು ಬಂಧಿಸಿ 2.5 ಕೆಜಿ ತಿಮಿಂಗಿಲ ವಾಂತಿಯನ್ನು ವಶಪಡಿಸಿಕೊಂಡಿದ್ದಾರೆ. ನಂತರ ಹೆಚ್ಚಿನ ತನಿಖೆ ನಡೆಸಿದಾಗ ಮತ್ತಿಬ್ಬರ ಮಾಹಿತಿ ಹೊರಬಿದ್ದಿದ್ದೆ. ಹೊಸಕೋಟೆ ಬಳಿ ಇದ್ದ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು 17.5 ಕೆಜಿ ಅಂಬೇಗ್ರೀಸ್ ಜಪ್ತಿ ಮಾಡಿದ್ದಾರೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಉಡುಪಿಯ ಮಲ್ಪೆ ಬೀಚ್​​ನಲ್ಲಿ ಆರೋಪಿಗಳಿಗೆ ಈ ವಸ್ತು ಸಿಕ್ಕಿದ್ದು, ಅದನ್ನು ಮಾರಾಟ ಮಾಡಲು ಬೆಂಗಳೂರಿಗೆ ತಂದಿದ್ದರು ಎನ್ನಲಾಗಿದೆ.
ಏನಿದು ಅಂಬರ್ಗ್ರೀಸ್..?
ಸ್ಪರ್ಮ್ ವೇಲ್ ಪ್ರಭೇದದ ತಿಮಿಂಗಿಲ ಹೊರಹಾಕುವ ವಾಂತಿಯನ್ನು ಅಂಬೇಗ್ರೀಸ್ ಎಂದು ಕರೆಯಾಗುತ್ತದೆ. ಘನ ಮೇಣದ ರೀತಿಯಲ್ಲಿದ್ದು, ವಾಸನೆಯಿಂದ ಕೂಡಿರಲಿದೆ‌‌. ಸುಗಂಧ ದ್ರವ್ಯ ಹಾಗೂ ಔಷಧಿ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಅರಬ್, ಚೀನಾ ಹಾಗೂ ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆಯಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆ.ಜಿ.ಗೆ ಅಂಬೇಗ್ರೀಸ್ ಸುಮಾರು ಒಂದು ಕೋಟಿ ರೂಪಾಯಿ ಬೆಲೆಯಿದೆ. ಪರ್ಫ್ಯೂಮ್​​​​ಗಾಗಿ ಬಳಕೆಯಾಗುವ ಈ ಅಂಬರ್ಗ್ರೀಸ್ ಭಾರತದಲ್ಲಿ ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧ. ಇದನ್ನು ಸಂಶೋಧನೆಗಾಗಿ ಮಾತ್ರ ಬಳಸಬಹುದಾಗಿದೆ.
ಏರ್​ಲಿಫ್ಟ್ ಮೂಲಕ ಅಫ್ಘಾನ್​​ನಿಂದ ಭಾರತಕ್ಕೆ ಬಂದ ‘ಸ್ನೈಫರ್ ಡಾಗ್ಸ್’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eleven =
Remember me
