ಬಳ್ಳಾರಿ:ಪೌರತ್ವ ತಿದ್ದಪಡಿ ಕಾಯ್ದೆ ಪರ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮುಸ್ಲಿಂ ಸಮುದಾಯದಿಂದ, ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಒಳಗಾಗಿದ್ದ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಇಂದು ತಮ್ಮ ಮಾತುಗಳಿಗೆ ಸಮರ್ಥನೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿತ್ತು. ಹಾಗಾಗಿ ನನಗೆ ತುಂಬ ಬೇಜಾರಾಗಿ ಹಾಗೆ ಹೇಳಿದೆ ಎಂದಿದ್ದಾರೆ.
ಈ ಕಾಯ್ದೆಯಿಂದ ಯಾರಿಗೂ ತೊಂದರೆಯಿಲ್ಲ. ಕಾಂಗ್ರೆಸ್​ನವರು ಮುಸ್ಲಿಂ ಸಮುದಾಯವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಆಸ್ತಿಪಾಸ್ತಿ ಹಾನಿಯಾಗೋದು ಯಾರಿಗೂ ಶೋಭೆಯಲ್ಲ. 13, 800 ಕೋಟಿ ಆಸ್ತಿ ಹಾನಿಯಾಗಿದ್ದಕ್ಕೆ ನನಗೆ ಆಕ್ರೋಶ ಉಂಟಾಯಿತು ಎಂದು ಸೋಮಶೇಖರ್​ ರೆಡ್ಡಿ ಹೇಳಿದ್ದಾರೆ.
ನಾನು ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿಲ್ಲ. ನಾನು ಸತ್ತರೆ ಸ್ಮಶಾನದಲ್ಲಿ ಹೂಳುತ್ತಾರೆ, ನೀವು ಸತ್ತರೆ ಖಬರಸ್ತಾನ್​ನಲ್ಲಿ ಹೂಳುತ್ತಾರೆ. ಇಲ್ಲೇ ಹುಟ್ಟಿ, ಇಲ್ಲೇ ಬೆಳೆದಿದ್ದೇವೆ. ಇಲ್ಲೇ ಸಾಯುತ್ತೇವೆ. ದೇಶದ ಯಾವೊಬ್ಬ ನಾಗರಿಕನಿಗೂ ಕಾಯ್ದೆಯಿಂದ ತೊಂದರೆಯಾಗೋದಿಲ್ಲ. ಕಾಂಗ್ರೆಸ್​ನವರು ಹೇಳುತ್ತಾರೆಂದು ನೀವು ಬಂದಿರಿ. ಅವರು ನಿಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ನಾವು ಮತ್ತು ಮುಸ್ಲಿಂ ಸಮುದಾಯದವರು ಸೋದರರಂತೆ ಇದ್ದೇವೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 16 =
Remember me
