ಬೆಂಗಳೂರು:ಉದ್ಯೋಗ ಹಾಗೂ ನಾನಾ ಕಾರಣಗಳಿಂದ ನಗರದಲ್ಲಿ ನೆಲೆಸಿರುವರು ಗಣೇಶ ಹಬ್ಬದ ಪ್ರಯುಕ್ತ ತಮ್ಮ ತಮ್ಮ ಊರುಗಳಿಗೆ ಹೊರಟಿರುವುದರಿಂದ ನಗರದ ಬಸ್​ ನಿಲ್ದಾಣಗಳಲ್ಲಿ ಭಾರೀ ಜನದಟ್ಟಣೆ ಉಂಟಾಯಿತು. ಹೊರಜಿಲ್ಲೆ, ಹೊರ ರಾಜ್ಯಗಳನ್ನು ಸಂಪರ್ಕಿಸುವ ನಗರದ ರಸ್ತೆಗಳಲ್ಲಿ ಸಂಚಾರಕ್ಕೆ ತೊಡಕುಂಟಾಯಿತು.
ಇದನ್ನೂ ಓದಿ:ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಸೆರೆ ಹಿಡಿಯುವಂತೆ ವಿದ್ಯಾರ್ಥಿಗಳು ಮನವಿ
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ನಿಟ್ಟಿನಲ್ಲಿ ನಗರದ ಹಲವೆಡೆ ಟ್ರಾಫಿಕ್​ ಜಾಮ್​ ಉಂಟಾಗಿದೆ. ಟಿನ್ ಫ್ಯಾಕ್ಟರಿ, ಕೆ.ಆರ್.ಪುರಂನ ಐಟಿಐ ಗೇಟ್, ಆನಂದ್ ರಾವ್ ಸರ್ಕಲ್​ನಲ್ಲಿ, ಹೆಬ್ಬಾಳ ಬಳಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಇದರಿಂದ ಪ್ರಯಾಣಿಕರು, ಸವಾರರು ಪರದಾಡಿದ್ದಾರೆ.
ರಾತ್ರಿಯಾಗುತ್ತಿದ್ದಂತೆ​ ಕೆಎಸ್ಆರ್​ಟಿಸಿಯತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ತಮ್ಮ ತಮ್ಮ ಊರುಗಳಿಗೆ ಹೋಗಲು ಸಾವಿರಾರು ಸಂಖ್ಯೆಯಲ್ಲಿ ಜನರು ಲಗೇಜುಗಳೊಂದಿಗೆ ಮೆಜೆಸ್ಟಿಕ್​ ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಸ್ಯಾಟ್​ಲೈಟ್ ನಿಲ್ದಾಣ, ಐಟಿಐ ಬಸ್​ ನಿಲ್ದಾಣಗಳು ಕಿಕ್ಕಿರಿದವು.
ಹೂಡಿ ಸರ್ಕಲ್ ಹತ್ತಿರ ಅಯ್ಯಪ್ಪ ನಗರ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿರುವ ಕಾರಣ ಅಯ್ಯಪ್ಪ ನಗರದ ಕಡೆಗೆ ಹಾಗೂ ಐಟಿಪಿಎಲ್ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು ವಾಹನಗಳ ದಟ್ಟಣೆಯನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
2026ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − three =
Remember me
