ಬೆಂಗಳೂರು: ಗಂಗಾ ಕಲ್ಯಾಣ ಕಾರ್ಯಕ್ತಮದಡಿ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ತಾಕೀತು ಮಾಡಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಮುಂದುವರಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು ಬಾಕಿ ಉಳಿಸಿಕೊಳ್ಳಬಾರದು. ಇದಕ್ಕೆ ಟ್ರಾನ್ಸ್‌ಫಾರ್ಮರ್‌ ಗಳು ಇಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನು ಹೇಳಬಾರದು ಎಂದು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜೆಸ್ಕಾಂ ಮತ್ತು ಹೆಸ್ಕಾಂ ಗಳಲ್ಲಿ ಬಾಕಿ ಅರ್ಜಿಗಳ ಸಂಖ್ಯೆ ಹೆಚ್ಚಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಅಭಿಯಾನ ಕೈಗೆತ್ತಿಕೊಂಡು ವಿದ್ಯುದೀಕರಣ ಕೈಗೊಳ್ಳಲು ಸೂಚಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ ವೆಲ್‌ ಕೊರೆಯುವುದು ಹಾಗೂ ವಿದ್ಯುದೀಕರಣದಲ್ಲಿ ಅನಗತ್ಯವಾಗಿ ವಿಳಂಬ ಮಾಡಬಾರದು. ಈ ವಿಳಂಬ ನೀತಿ ಅಪರಾಧ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ವಿದ್ಯುತ್ ಉಪಕೇಂದ್ರ ಆರಂಭಿಸಲು ಮತ್ತು ಟ್ರಾನ್ಸ್ ಫಾರ್ಮರ್ ಲೈನ್ ಗೆ ಭೂಮಿ ಒದಗಿಸುವಂತೆ ಎಷ್ಟು ಅರ್ಜಿಗಳು ಬಂದಿವೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಯೊಬ್ಬರ ಉತ್ತರದಿಂದ ಅಸಮಾಧಾನಗೊಂಡ ಸಿಎಂ ಆ ಅರ್ಜಿಗಳನ್ನು ಜೇಬಿನಲ್ಲಿ ಇಟ್ಕೊಂಡು ಏನ್ ಮಾಡ್ತಾ ಇದೀರ ಮೊದಲು ಆ ಎಲ್ಲಾ ಅರ್ಜಿಗಳ ಬೇಡಿಕೆ ಪೂರ್ಣಗೊಳಿಸಿ ಎಂದು ಸೂಚಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + fifteen =
Remember me
