ಬೆಂಗಳೂರು:ತರಗತಿ ಬಿಟ್ಟು ಮಾಲ್​ಗೆ ಹೋಗಬೇಡ ಎಂದು ಪೋಷಕರು ಹೇಳಿದ್ದಕ್ಕೆ ಸಿಟ್ಟಾದ ಬಾಲಕಿಯೊಬ್ಬಳು ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದಾಳೆ.
ವಿಜಯನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಕಳೆದ ಜ.04ರಂದು ಶಾಲೆಗೆ ರಜೆ ಮಾಡಿ ಮಾಲ್​ಗೆ ತೆರಳಿದ್ದಾರೆ. ಈ ವಿಚಾರ ಶಾಲಾ ಆಡಳಿತ ಮಂಡಳಿ ಗಮನಕ್ಕೆ ಬಂದಿದೆ. ಜಾಗರೂಕತೆಯ ದೃಷ್ಟಿಯಿಂದ ಪೋಷಕರಿಗೆ ಶಾಲಾ ಆಡಳಿತ ಮಂಡಳಿಯವರು ಮಾಹಿತಿ ನೀಡಿದ್ದಾರೆ.
ಶಾಲಾ ಆಡಳಿತ ಮಂಡಳಿಯಿಂದ ಮಾಹಿತಿ ಬರುತ್ತಿದ್ದಂತೆ ಪೋಷಕರು ಮಗಳಿಗೆ ಬೈದು ಬುದ್ದಿ ಹೇಳಿದ್ದಾರೆ. ಇದಾಗಿ ಮರುದಿನ ಸ್ಕೂಟಿಯಲ್ಲಿ ಶಾಲೆಗೆಂದು ತೆರಳಿದ ಬಾಲಕಿ, ಮತ್ತೆ ಮನೆಗೆ ಹಿಂತಿರುಗಿಲ್ಲ. ಇದರಿಂದ ಚಿಂತಿತರಾದ ಪೋಷಕರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಷಕರು ದೂರು ದಾಖಲಿಸಿದ ದಿನದಂದೇ ಬಾಲಕಿ ಸಂಜೆಯ ವೇಳೆ ಗೊರಗುಂಟೆಪಾಳ್ಯ ಬಸ್‌ ನಿಲ್ದಾಣದಲ್ಲಿ ಒಬ್ಬೊಂಟಿಯಾಗಿ ನಿಂತಿದ್ದಳು. ಇದನ್ನು ಗಮನಿಸಿದ ಆಟೋ ಚಾಲಕನೊಬ್ಬ ಬಂದು ಬಾಲಕಿಯನ್ನು ಪ್ರಶ್ನಿಸಿದ್ದಾನೆ. ಈ ವೇಳೆ ಬಾಲಕಿ ಅನುಮಾನ ಬರುವ ರೀತಿಯಲ್ಲಿ ಉತ್ತರಿಸಿದ್ದಾಳೆ. ಕೂಡಲೇ ಎಚ್ಚೆತ್ತ ಆಟೋ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಬಾಲಕಿಯ ರಕ್ಷಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
