ಬೆಂಗಳೂರು:ಮುಂಬರುವ ಫೆಬ್ರವರಿ 12ರಿಂದ 14ರವರೆಗೆ ಇಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ನಾನಾ ದೇಶಗಳ ರಾಯಭಾರಿಗಳು ಮತ್ತು ಔದ್ಯಮಿಕ ಸಂಘಟನೆಗಳನ್ನು ಭೇಟಿ ಮಾಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಸಂಜೆ ನವದೆಹಲಿಗೆ ಪಯಣ ಬೆಳೆಸಿದರು.
ಸೆ.10 ಮತ್ತು 11ರಂದು ಅಲ್ಲಿ ನಡೆಯುವ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಮಂಗಳವಾರ ಸಂಜೆ 4ಕ್ಕೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಜೆ 5ಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ತಮ್ಮ ಎರಡು ದಿನಗಳ ದೆಹಲಿ ಕಾರ್ಯಕ್ರಮದಲ್ಲಿ ಪಾಟೀಲರು ಸಿಂಗಾಪುರ ಹೈಕಮೀಷನರ್, ಜರ್ಮನಿ ರಾಯಭಾರಿ, ಅಮೆರಿಕದ ಯುಎಸ್ ಚೇಂಬರ್ ಆ್ ಕಾಮರ್ಸ್, ಇಂಡೋ-ಅಮೆರಿಕ ಬಿಜಿನೆಸ್ ಕೌನ್ಸಿಲ್, ಟಾಯ್ ಜೋನ್ ಮುಂತಾದ ಸಂಘಟನೆಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾತನಾಡಲಿದ್ದಾರೆ.
ಭಾರತ್ ಸೆಮಿ ಸಿಸ್ಟಮ್ಸ್ ಏರ್ಪಡಿಸಿರುವ ‘ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳು’ ಕುರಿತ ವಿಚಾರ ಸಂಕಿರಣ ಸೇರಿದಂತೆ ಇನ್ನೂ ಅನೇಕ ಚಟುವಟಿಕೆಗಳಲ್ಲಿ ಎಂ.ಬಿ.ಪಾಟೀಲ ಭಾಗವಹಿಸಲಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 5 =
Remember me
