ಬೆಂಗಳೂರು:ಸ್ನೇಹ ಸೇವಾ ಟ್ರಸ್ಟ್ ಬಸವನಗುಡಿಯ ವಾಸವಿ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಆಯೋಜಸಿದ್ದ ಜ್ಞಾನಸಿರಿ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಅಭಿನಂದಿಸಲಾಯಿತು.ಸ್ನೇಹ ಸೇವಾ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಸ್ವಾವಲಂಬನೆ ಒಳಗೊಂಡಂತೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಧನಾತ್ಮಕ ಪರಿವರ್ತನೆ ತರುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ಸಮಯ ಪಾಲನೆ, ಸಂವಹನ ಕಲೆ, ಪ್ರಾಥಮಿಕ ಕಂಪ್ಯೂಟರ್ ಜ್ಞಾನ, ಕೌಶಲ್ಯ ತರಬೇತಿ ಜೊತೆಗೆ ಪ್ರತಿ ವರ್ಷ 1,000 ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಿಸುತ್ತಿರುವುದು ಸಂತಸದ ವಿಷಯ ಎಂದು ಕಾನಾಡ್ ಕಂಪನಿ ಮಾಲೀಕ ಸುಂದರ್ ಕಣ್ಣನ್ ಪ್ರಶಂಸೆ ವ್ಯಕ್ತಪಡಿಸಿದರು.
ಎಪಿಎಸ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ, ಒಮ್ಮೆ ಜ್ಞಾನ ಗಳಿಸಿದರೆ ಅದು ಶಾಶ್ವತ ಮತ್ತು ಯಾರೂ ದರೋಡೆ ಮಾಡಲು ಸಾಧ್ಯವಿಲ್ಲ. ಸತತ ಪರಿಶ್ರಮ, ಬದ್ಧತೆಯಿಂದ ಅಧ್ಯಯನ ಮಾಡಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಂ.ಎಸ್. ಮೆಟಲ್ಸ್ ನಿರ್ದೇಶಕ ಸಚಿನ್ ರಾಥೋಡ್ ಮತ್ತಿತರರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × five =
Remember me
