ಬೆಂಗಳೂರು:ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಆರ್.ಟಿ. ನಗರ ನಿವಾಸದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ‌ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ ಅವರಿಗೆ ನಿರಾಶೆ ಮೂಡಿಸಿದ್ದಾರೆ. ಕೇವಲ ಘೋಷಣೆ ಮಾತ್ರ ಮಾಡಲಾಗಿದ್ದು, ಎಂದಿನಿಂದ ಜಾರಿ ಅಂತ ವಿವರವಾಗಿ ಹೇಳಿಲ್ಲ ಎಂದರು.
ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಹೇಳುತ್ತೇವೆ ಎಂದಿದ್ದಾರೆ. ಇದರಿಂದ ಜನರ ನಿರೀಕ್ಷೆ ಹುಸಿಗೊಳಿಸುವ ಸಂಪುಟ ನಿರ್ಣಯ ಆಗಿದೆ. ಐದು ಗ್ಯಾರಂಟಿ ಈಡೇರಿಕೆಗೆ 50 ಸಾವಿರ ಕೋಟಿ ರೂ. ಆಗುತ್ತದೆ ಎಂದು ಹೇಳಿದ್ದಾರೆ. ಇದರಿಂದಾಗಿ ಹಣಕಾಸು ಒದಗಿಸಲು ಯಾವುದೇ ಪೂರ್ವ ಆಲೋಚನೆ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:ನಿರುದ್ಯೋಗಿಗಳಿಗೆ ಯುವನಿಧಿ: ಆದೇಶ ಮಾಡೇಬಿಟ್ಟ ಸರ್ಕಾರ; ಈ ಗ್ಯಾರಂಟಿಗೆ ಷರತ್ತುಗಳೇನು?
ದಾರಿಯಲ್ಲಿ ಹೋಗುವವರಿಗೆಲ್ಲ ಹಣ ಕೊಡಲು ಆಗುತ್ತಾ? ಅಂತ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದಾರಿಯಲ್ಲಿದ್ದವರು, ಮನೆಯಲ್ಲಿದ್ದವರು ಎಲ್ಲರೂ ಸೇರಿಯೇ ವೋಟ್ ಹಾಕಿದ್ದಾರೆ. ಚುನಾವಣೆಯಲ್ಲಿ ಗೆದ್ದ ಬಳಿಕ ಈಗ ಮತದಾರರಿಗೆ ಎಷ್ಟು ಗೌರವ ಕೊಡುತ್ತಿದ್ದಾರೆ ಎಂದು ಗೊತ್ತಾಗುತ್ತಿದೆ. ಕಾಂಗ್ರೆಸ್ ‌ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದರು.
ಕಾಂಗ್ರೆಸ್ ಮನಸ್ಸು ‌ಮಾಡಿದರೆ ನಾಳೆಯೇ 2000 ರೂ. ನೀಡಬಹುದು. ಬಿಪಿಎಲ್ ಕಾರ್ಡ್ದಾರರ ಬಗ್ಗೆ ರಾಜ್ಯ ಸರ್ಕಾರದ ಬಳಿ ಈಗಾಗಲೇ ಮಾಹಿತಿ ಇದೆ. ಮನಸ್ಸಿದ್ದರೆ ಮಾತ್ರ ಮಾರ್ಗ ಎಂದ ಮಾಜಿ ಸಿಎಂ, ವಿದ್ಯುತ್ ಉಚಿತ ನೀಡಲು ಕುಂಟು ನೆಪ ಹೇಳುತ್ತಿದ್ದಾರೆ. ಈ ವರ್ಷ ಪಾಸಾದ ಪದವೀಧರರಿಗೆ ಭತ್ಯೆ ಅಂತ ಹೇಳಿದ್ದಾರೆ. ನಿಜವಾದ ಕಷ್ಟದಲ್ಲಿರುವ ನಿರುದ್ಯೋಗಿಗಳಿಗೆ ಸಹಾಯ ಮಾಡುವ ಉದ್ದೇಶ ಇವರಿಗಿಲ್ಲ ಎಂದರು.
ಇದನ್ನೂ ಓದಿ:ಐದೂ ‘ಗ್ಯಾರಂಟಿ’, ಆರನೇ ಭರವಸೆ ಗ್ಯಾರಂಟಿಯಾ?: ರಾಹುಲ್ ಗಾಂಧಿ ಹೇಳಿದ್ದೇನು?
ನಮ್ಮ ಅವಧಿಯಲ್ಲಿ 3 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ ಅಂತ ಹೇಳಿದ್ದಾರೆ. ಇದಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಉತ್ತರ ಕೊಟ್ಟಿದ್ದೇನೆ. ಕೋವಿಡ್​ನಿಂದ ಎಲ್ಲ ರಾಜ್ಯದಲ್ಲೂ ಸಾಲ ಹೆಚ್ಚಾಗಿದೆ. ಈಗಲೂ ಅವರು ಪ್ರತಿಪಕ್ಷ ನಾಯಕನ ತರಹ ಮಾತಾಡುತ್ತಿದ್ದಾರೆ. ಈಗ ಅವರಿಗೆ ಜವಾಬ್ದಾರಿ ಇದೆ. ಇದು ಕೇವಲ ಘೋಷಣೆ ಇರುವ ಗ್ಯಾರಂಟಿ. ಮುಂದಿನ ಸಚಿವ ಸಂಪುಟದವರೆಗೆ ನಾವು ಕಾಯೋಣ. ಏನು ಹೇಳಿದ್ದಾರೆ, ಏನು ಮಾಡುತ್ತಾರೆ ಅಂತ ನೋಡೋಣ ಎಂದರು.
ಇಡೀ ದೇಶದಲ್ಲಿ ಜಿಎಸ್​ಟಿ ಆದಾಯದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರ ಸಬ್ ಅರ್ಬನ್, ಮೆಟ್ರೋ, ರೈಲ್ವೆಗೆ ಅನುದಾನ ಕೊಡುತ್ತಿದೆ. ಅರ್ಧ ಮಾಹಿತಿ ಹೇಳಿ ಅರ್ಧ ಮಾಹಿತಿ ಮುಚ್ಚಿಡುವ ಕೆಲಸ‌ ಸಿಎಂ ಮಾಡಿದ್ದಾರೆ. ವಿಧಾನಸಭೆಯಲ್ಲಿ ನಾನು ಇದರ ಸಂಪೂರ್ಣ ವಿವರ ಕೊಡಲು ಸಿದ್ಧನಿದ್ದೇನೆ. ನಾವು ಧ್ವನಿ ಎತ್ತಲು ಆರಂಭ ಮಾಡಿದ್ದೇವೆ ಎಂದರು.
ಇದನ್ನೂ ಓದಿ:ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!
ನಾವು ಆದಾಯ ಹೆಚ್ಚು ಮಾಡಲು ಏನೆಲ್ಲ ಪ್ರಯತ್ನ ಮಾಡಿದ್ದೇವೆ ಅಂತಾ ನಮ್ಮ ಬಜೆಟ್​​ನಲ್ಲಿ ಇದೆ. ಗ್ಯಾರಂಟಿ ಘೋಷಣೆಗಳ 50 ಸಾವಿರ ಕೋಟಿ ರೂ. ಸಣ್ಣ ಮೊತ್ತವೇ ಎಂದು ಪ್ರಶ್ನೆ ಮಾಡಿದ ಮಾಜಿ ಸಿಎಂ, ಸಿದ್ದರಾಮಯ್ಯ ಕಾಲದಲ್ಲಿ ಮಾಡಿದ ಸಾಲಕ್ಕೆ ಹತ್ತು ವರ್ಷ ಬಡ್ಡಿ ಕಟ್ಟುವುದೇ ಇತ್ತು. ಈಗ ಅಸಲು ಕಟ್ಟುವ ಕಾಲ ಬಂದಿದೆ. ನಮ್ಮ ಬಜೆಟ್ ಮರು ಹಂಚಿಕೆ ಮಾಡುವ ಅಧಿಕಾರ ಅವರಿಗೆ ಇದೆ, ಮಾಡಲಿ. ಗ್ಯಾರಂಟಿಗಳಿಗೆ ಖಂಡಿತ ಷರತ್ತು ವಿಧಿಸುವ ಕೆಲಸ ಮಾಡುತ್ತಾರೆ. ಅದರ ಬಗ್ಗೆ ಜನ ತೀರ್ಮಾನ ಮಾಡಲಿ. ನಂತರ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದರು.
ನಾಳೆ ಬಿಜೆಪಿ ಶಾಸಕಾಂಗ ಸಭೆ: ನಾಳೆ ಬಿಜೆಪಿ ಜಿಲ್ಲಾ ಮುಖಂಡರ ಸಭೆ ಇದೆ. ಈ ಸಭೆಯ ಬಳಿಕ ಶಾಸಕಾಂಗ ಸಭೆ ನಿರ್ಧಾರ ಮಾಡುತ್ತೇವೆ. ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಾನು ಇನ್ನೂ ಏನೂ ಚಿಂತನೆ ಮಾಡಿಲ್ಲ ಎಂದರು.
‘ಗೃಹಜ್ಯೋತಿ’ಯೂ ಗ್ಯಾರಂಟಿ: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಖಚಿತ ಎಂದು ಸರ್ಕಾರಿ ಆದೇಶ

ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
