ಕೊರಟಗೆರೆ:ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲಕ್ಕೂ ಕರೊನಾ ಛಾಯೆ ಆವರಿಸಿದ್ದು, ದೇವಸ್ಥಾನವನ್ನು ಸೀಲ್​ಡೌನ್​ ಮಾಡಲಾಗಿದೆ.
ಮಾರಮ್ಮ ದೇಗುಲದ ಅರ್ಚಕರ ಪತ್ನಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಅರ್ಚಕರ ಪ್ರಾಥಮಿಕ ಸಂಪರ್ಕದಲ್ಲಿದ್ದ ದೇವಾಲಯದ 80 ಸಿಬ್ಬಂದಿಯನ್ನು ಕ್ವಾರಂಟೈನ್​ ಮಾಡಿ, ಜು.20ರಿಂದಲೇ ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲವನ್ನು ಸೀಲ್​ಡೌನ್​ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿರಿಇನ್ನೂ 30 ವರ್ಷ ಕರೊನಾ ಹೋಗಲ್ಲ; ಬ್ರಹ್ಮಾಂಡ ಗುರೂಜಿ ಭವಿಷ್ಯ
ವರಮಹಾಲಕ್ಷ್ಮೀ ಹಬ್ಬಕ್ಕೆ ಗೊರವನಹಳ್ಳಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ, ಈ ವರ್ಷ ದೇವಾಲಯ ತೆರೆಯುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು. ಹಬ್ಬದಲ್ಲಿ ದರ್ಶನದ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್​ಕುಮಾರ್​ ತಿಳಿಸಿದ್ದಾರೆ.
ದೇಗುಲ ನೌಕರನ ಪತ್ನಿಗೆ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಜು.20ರಿಂದ ಮಹಾಲಕ್ಷ್ಮೀ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ. ಆದರೆ, ಪ್ರತಿನಿತ್ಯ ಪೂಜೆ ನಡೆಯುತ್ತಿದೆ. ಆಡಳಿತ ಮಂಡಳಿ ಸೂಚನೆಯಂತೆ ನಾವು ಕೆಲಸ ಮಾಡುತ್ತೇವೆ ಎಂದು ಪ್ರಧಾನ ಅರ್ಚಕ ಪ್ರಸನ್ನಕುಮಾರ್​ ತಿಳಿಸಿದ್ದಾರೆ.
ಕಾರು ಅಡ್ಡಗಟ್ಟಿ 45.5 ಲಕ್ಷ ರೂ. ದರೋಡೆ, ಕದ್ದ ಹಣವನ್ನು ಟೈರ್​ನಲ್ಲಿ ಬಚ್ಚಿಟ್ಟಿದ್ದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
