ಬೆಂಗಳೂರು:ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್​ಸಿಸಿ) ಜೀವನದ ಎಲ್ಲ ಹಂತಗಳಲ್ಲಿ ನಾಯಕತ್ವದ ಗುಣಗಳನ್ನು ಹೊಂದಿರುವ ಸಂಘಟಿತ, ತರಬೇತಿ ಪಡೆದ ಮತ್ತು ಪ್ರೇರಿತ ಯುವಕರ ಸಮೂಹ ರಚಿಸುವ ಗುರಿಯನ್ನು ಹೊಂದಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್ ಹೇಳಿದರು.
ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್(ಎನ್​ಸಿಸಿ) ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯ ಕೆಡೆಟ್‌ಗಳಿಗೆ ರಾಜಭವನದ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜನವರಿ 26ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ನವದೆಹಲಿಯ ರಾಜಪಥದಲ್ಲಿ ಆಯೋಜಿಸಲಾದ ಪರೇಡ್ ಮತ್ತು ಇತರ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯ ಎನ್‌ಸಿಸಿ ಕೆಡೆಟ್‌ಗಳನ್ನು ರಾಜಭವನದಲ್ಲಿ ಅಭಿನಂದಿಸಲು ಅವಕಾಶ ದೊರಕಿರುವುದು ನನ್ನ ಸೌಭಾಗ್ಯ. ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜಪಥದಲ್ಲಿ ನಿಮ್ಮ ಪ್ರದರ್ಶನ ಮತ್ತು ನಿಮ್ಮ ಅತ್ಯುತ್ತಮ ಕೊಡುಗೆಗಾಗಿ ನಾನು ಅಭಿನಂದಿಸುತ್ತೇನೆ ಎಂದು ಶುಭಹಾರೈಸಿದರು.
ಎನ್​ಸಿಸಿ ಸಶಸ್ತ್ರ ಪಡೆಗಳನ್ನು ಸೇರಲು ಮತ್ತು ಪ್ರೇರೇಪಿಸಲು ಯುವ ಭಾರತೀಯರಿಗೆ ಅನುಕೂಲಕರ ವಾತಾವರಣ ಒದಗಿಸುತ್ತಿದ್ದು. ಯುವಕರಲ್ಲಿ ಚಾರಿತ್ರ್ಯ ನಿರ್ಮಾಣ, ಶಿಸ್ತು, ಜಾತ್ಯತೀತ ದೃಷ್ಟಿಕೋನ, ಧೈರ್ಯದ ಮನೋಭಾವ ಮತ್ತು ಸ್ವಯಂಸೇವಕತೆಯ ಆದರ್ಶಗಳನ್ನು ಬೆಳೆಸುವ ಗುರಿ ಹಾಗೂ ಜೀವನದ ಎಲ್ಲ ಹಂತಗಳಲ್ಲಿ ನಾಯಕತ್ವದ ಗುಣಗಳನ್ನು ಹೊಂದಿರುವ ಸಂಘಟಿತ, ತರಬೇತಿ ಪಡೆದ ಮತ್ತು ಪ್ರೇರಿತ ಯುವಕರ ಸಮೂಹವನ್ನು ರಚಿಸುವ ಗುರಿ ಹೊಂದಿದೆ. ಅವರು ಆಯ್ಕೆ ಮಾಡುವ ವೃತ್ತಿಜೀವನವನ್ನು ಲೆಕ್ಕಿಸದೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಾರೆ ಎಂದು ತಿಳಿಸಿದರು.
ಎನ್​​ಸಿಸಿಯ ಧ್ಯೇಯವಾಕ್ಯ “ಏಕತೆ ಮತ್ತು ಶಿಸ್ತು”. ಇದು ಒಂದು ಜವಾಬ್ದಾರಿಯುತ, ನಿರಂತರವಾಗಿ ಕಲಿಯುತ್ತಿರುವ ಮತ್ತು ಬೆಳೆಯುತ್ತಿರುವ ಸಂಸ್ಥೆ. ಇದರ ಚಟುವಟಿಕೆಯು ಕೆಲವು ಪ್ರಮುಖ ಮೌಲ್ಯಗಳಿಂದ ಮಾರ್ಗದರ್ಶಿಸಲ್ಪಡುತ್ತದೆ. ಎನ್‌ಸಿಸಿಯಂತಹ ಯುವ ಸಂಘಟನೆಯಲ್ಲಿರುವುದು ಹೆಮ್ಮೆ ಮತ್ತು ಗೌರವದ ಸಂಗತಿ ಎಂದರು.

ದೇಶದ ಅನೇಕ ಶಾಲೆಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಎನ್‌ಸಿಸಿಯ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ತರಬೇತಿ ನೀಡಲಾಗುತ್ತದೆ. ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ದೇಶ ಮತ್ತು ವಿಶ್ವದಲ್ಲಿ ಹೆಮ್ಮೆಪಡುವಂತೆ ಮಾಡಿದ್ದಾರೆ ಮತ್ತು ಅನೇಕ ಗೌರವಗಳು ಮತ್ತು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರೊನಾ ಅವಧಿಯಲ್ಲೂ ಎನ್‌ಸಿಸಿಯ ಯುವಕರು ಸಾಮಾಜಿಕ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಭರತನಾಟ್ಯ, ಯಕ್ಷಗಾನ, ಸಮೂಹನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ‌ನಡೆದವು. ಬಾರಿಸು ಕನ್ನಡ ಡಿಂಡಿಮವ ಹಾಡುಗಳ ನೃತ್ಯ ಪ್ರದರ್ಶನ ಬಹಳ ಸುಂದರವಾಗಿ ಮೂಡಿಬಂತು. ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಕರ್ನಾಟಕ ಮತ್ತು ಗೋವಾ ಡೆಪ್ಯುಟಿ ಡೈರೆಕ್ಟರ್ ಜನರಲ್ ಏರ್ ಕಮಾಂಡರ್ ಬಿ.ಎಸ್. ಕನ್ವರ್, ವಿ.ಎಸ್.ಎಂ. ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಸ್ವಾಮೀಜಿಗೆ ಪಿಎಫ್​​ಐನಿಂದ ಜೀವ ಬೆದರಿಕೆ; ಕೇಂದ್ರ ಸರ್ಕಾರದಿಂದ ವೈ ಕೆಟಗರಿ ಭದ್ರತೆ

ಪ್ರೇಮಿಗಳ ದಿನದಂದು ‘ಅಪ್ಪಿಕೋ ದನ’; ಫೆ. 14 ‘ಕೌ ಹಗ್ ಡೇ’ ಎಂದು ಆಚರಿಸಲು ಸರ್ಕಾರದ ಮನವಿ

ಸಿನಿಮಾ ಹೀರೋಯಿನ್​ಗೆ ಹೋಲಿಸಿದ್ದಕ್ಕೆ ಪತಿಗೆ ಊಟ ಹಾಕಲ್ಲ ಎಂದ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − four =
Remember me
