ಕುಂದಾಪುರ:ಮಹಿಳೆಯೋರ್ವರಿಗೆ ಸರ್ಕಾರಿ ಕೆಲಸ ಕೊಡಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆಂದು ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ಆರೋಪದಲ್ಲಿ ಕಾಂಗ್ರೆಸ್‌ ಬೆಂಬಲಿತ ಕುಂದಾಪುರದ ಮಾಜಿ ಪುರಸಭಾ ಸದಸ್ಯ ಸಂದೀಪ ಪೂಜಾರಿ ಕೋಡಿ (34) ಎನ್ನುವಾತನನ್ನು ಸೆ.4ರಂದು ಬಂಧಿಸಲಾಗಿದೆ.
ಸಂದೀಪ ಪೂಜಾರಿ ಎನ್ನುವ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು ಅವರ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆಯಿಂದ ಹಣವನ್ನು ಪಡೆದಿದ್ದನು. ನಂತರ ಸಂದೀಪ ಪೂಜಾರಿ ಆಕೆಗೆ ಬೈದು ಜಾತಿ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ಪಬ್ಜಿ ಬ್ಯಾನ್​ ಆದ್ರೇನಂತೆ ಫೌಜಿ ಇದೆಯಲ್ಲ; ಬೆಂಗಳೂರು ಮೂಲದ ಸಂಸ್ಥೆಯ ಕಾರ್ಯಕ್ಕೆ ಅಕ್ಷಯ್​ ಮೆಚ್ಚುಗೆ
ಈ ಬಗ್ಗೆ ಆ ಮಹಿಳೆ ತನ್ನ ಗೆಳತಿಯಲ್ಲಿ ಮೂಲಕ ಆಪಾದಿತನಲ್ಲಿ ವಿಚಾರಿಸಿದಾಗ ಅವರಿಗೂ ಸಹ ಅವಾಚ್ಯವಾಗಿ ಅವಹೇಳನ ಮಾಡಿದ್ದಾನೆ ಎನ್ನಲಾಗಿದೆ. ಸೆ.1ರಂದು ಸಂದೀಪ ಪೂಜಾರಿ ಮೊಬೈಲ್ ನಂಬ್ರದಿಂದ ಆತನ ಪತ್ನಿಯೂ ಕೂಡ ವಂಚನೆಗೊಳಗಾದ ಮಹಿಳೆಗೆ ಕರೆ ಮಾಡಿ ನನ್ನ ಗಂಡನ ಬಗ್ಗೆ ಮಾತನಾಡದೆ ಸುಮ್ಮನಿರಬೇಕು ಎಂದು ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ್ದಳು.
ಈ ಬಗ್ಗೆ ಆ ಮಹಿಳೆ ಸಂದೀಪ ಪೂಜಾರಿ ತನಗೆ ಕೆಲಸ ಕೊಡಿಸುತ್ತೇನೆಂದು ನಂಬಿಸಿ ಹಣವನ್ನೆಲ್ಲಾ ಮೋಸದಿಂದ ಪಡೆದುಕೊಂಡಿದ್ದು ವಿವಾಹವಾಗುತ್ತೇನೆ ಎಂದು ಸುಳ್ಳು ಹೇಳಿ ವಂಚಿಸಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಲಾರಿ-ಕಾರು ಡಿಕ್ಕಿಗೆ ಸ್ಥಳದಲ್ಲೇ ನಾಲ್ವರು ಸಾವು: ಅಂತ್ಯಸಂಸ್ಕಾರಕ್ಕೆ ಹೋಗಿ ಬರುತ್ತಿದ್ದವರ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
