ಬೆಂಗಳೂರು:ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ವತಿಯಿಂದ ಏರ್ಪಡಿಸುವ ‘ಸಪ್ತಪದಿ’ ಯೋಜನೆಯ ಮುಹೂರ್ತವನ್ನು ಸರ್ಕಾರ ನಿಗದಿ ಮಾಡಿದೆ.
‘ಎ’ ದರ್ಜೆ 110 ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಯೋಜನೆ ಇದಾಗಿದೆ. ಕಳೆದ ಏಪ್ರಿಲ್​ 26 ಮತ್ತು ಮೇ 24ರಂದು ಮದುವೆಗಳು ನಡೆಯಬೇಕಿತ್ತು. ಆದರೆ ಕರೊನಾ ವೈರಸ್​ ಹಾಗೂ ಲಾಕ್​ಡೌನ್​ ಹಿನ್ನೆಲೆಯಲ್ಲಿ, ದಿನಾಂಕಗಳನ್ನು ಮುಂದೂಡಲಾಗಿತ್ತು.
ಇದೀಗ ಜುಲೈ ಮತ್ತು ಆಗಸ್ಟ್​ ತಿಂಗಳಿನಲ್ಲಿ ಮುಹೂರ್ತವನ್ನು ಸರ್ಕಾರ ನಿಗದಿ ಮಾಡಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಮದುವೆಗೆ ನೊಂದಾಯಿಸಿದ ವಧು, ವರರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಒಪ್ಪಿಗೆ ಪತ್ರ ಪಡೆದು ನಿಗದಿತ ದಿನದಂದು ಸಾಮೂಹಿಕ ಮದುವೆ ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಆಕಾಶದಿಂದ ಉದುರಿದ ಮುಖವಾಡದಂಥ ನಿಗೂಢ ವಸ್ತು!
ಜುಲೈ 23, 26, 29 ಹಾಗೂ ಆಗಸ್ಟ್ 6, 10, 14, 17 ರಂದು ಒಳ್ಳೆಯ ಮುಹೂರ್ತ ಇದ್ದು, ಈ ಪೈಕಿ ಎರಡು ದಿನಾಂಕಗಳನ್ನು ನಿಗದಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಈಗಾಗಲೇ ಒಂದೂವರೆ ಸಾವಿರಕ್ಕೂ ಅಧಿಕ ವಧು-ವರರು ಸಪ್ತಪದಿ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಇಲ್ಲಿಯವರೆಗಿನ ನಿಯಮದಂತೆ ವರನಿಗೆ ಹಾರ ಬಟ್ಟೆ ಖರೀದಿಗೆ 5000 ರೂ. ವಧುವಿನ ಬಟ್ಟೆ ಖರೀದಿಗೆ 10 ಸಾವಿರ ರೂ. ಮತ್ತು ತಾಳಿಗೆ 40 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಮದುವೆ ದಿನವೇ ವಧು-ವರರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ನಿಗದಿಯಂತೆ ಮುಜರಾಯಿ ಇಲಾಖೆ ಎ ದರ್ಜೆ ದೇವಾಲಯಗಳಲ್ಲಿ ಮದುವೆ ನಡೆಯಲಿವೆ. ಕರೊನಾ ಭೀತಿ ಇನ್ನೂ ಮಾಸದ ಹಿನ್ನೆಲೆಯಲ್ಲಿ ಎಲ್ಲಾ ನಿಮಯಗಳ ಅನ್ವಯವೇ ಮದುವೆ ಮಾಡಲಾಗಲು ಯೋಜನೆ ರೂಪಿಸಲಾಗಿದೆ.
ಅಮೆರಿಕದಲ್ಲಿ ಸಿಕ್ಕಿಬಿದ್ದ ಮುಂಬೈ ದಾಳಿ​ ಸಂಚುಕೋರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + 16 =
Remember me
