ನೆಲಮಂಗಲ: ಗ್ರಾಮ ಪಂಚಾಯಿತಿ ಚುನಾವಣಾ ಸಮರದ ಫಲಿತಾಂಶ ಬಂದ ಕೂಡಲೇ ಇಲ್ಲೊಂದು ಗ್ರಾಮದಲ್ಲಿ ವಿಜೇತ ಮತ್ತು ಪರಾಜಿತ ಅಭ್ಯರ್ಥಿಗಳ ಬೆಂಬಲಿಗರು ಪರಸ್ಪರ ಹೊಡೆದಾಟ ನಡೆಸಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ಗಲಾಟೆ ನಡೆದಿರುವಂಥದ್ದು. ಅನಿಲ್ (25) ಮತ್ತು ಕೆಂಪರಾಜು (37) ಹಲ್ಲೆಗೊಳಗಾದವರು. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಭೀಕರ ರಸ್ತೆ ಅಪಘಾತ : ಅಪ್ಪನ ಮತಎಣಿಕೆಗೆ ಹೊರಟ ಮಗ ಮತ್ತು ಇನ್ನೊಬ್ಬನ ಬಲಿ
ಗಂಗರಾಜು, ಗೋಪಾಲಯ್ಯ, ಭಾಗ್ಯಮ್ಮ ವಿಜೇತ ಅಭ್ಯರ್ಥಿಗಳು. ಸಿದ್ದರಾಜಯ್ಯ, ಅಶೋಕ್ ಕುಮಾರ್, ಯಶೋದಾ ಪರಾಜಿತ ಅಭ್ಯರ್ಥಿಗಳು. ಗೆಲುವು ಕಂಡ ಅಭ್ಯರ್ಥಿಗಳನ್ನು ಒಳಗೊಂಡಂತೆ ಬೆಂಬಲಿಗರು ಊರಿನಲ್ಲಿ ಮೆರವಣಿಗೆ ಮಾಡುತ್ತ ಪರಾಜಿತ ಅಭ್ಯರ್ಥಿಗಳ ಮನೆ ಎದುರು ಸಾಗಿದ ವೇಳೆ ಜಗಳವಾಗಿದ್ದು, ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಮದ್ಯಪಾನಕ್ಕೆ ಕನಿಷ್ಠ ವಯಸ್ಸು ಇಳಿಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + sixteen =
Remember me
