ಬೆಂಗಳೂರು:ಕರೊನಾ ಲಾಕ್​ಡೌನ್ ಅವಧಿಯ ಕಾರಣಕ್ಕೆ ಬಹುತೇಕ ಎಲ್ಲವೂ ಸ್ಥಗಿತಗೊಂಡಿರುವಾಗಲೇ ಕಾಂಗ್ರೆಸ್ ನಾಯಕರು ಗ್ರಾಮಪಂಚಾಯಿತಿ ಚುನಾವಣೆ ನಡೆಸುವಂತೆ ಆಯೋಗದ ಮೇಲೆ ಒತ್ತಡ ಹೇರುವ ಕೆಲಸ ಆರಂಭಿಸಿದ್ದಾರೆ. ಶುಕ್ರವಾರ ಈ ಬಗ್ಗೆ ಆಯುಕ್ತರಿಗೆ ಮನವಿಯನ್ನೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದಾರೆ.
ಈ ಮನವಿ ಪ್ರಕಾರ, ಸಂವಿಧಾನದ 243ಇ ವಿಧಿ ಪ್ರಕಾರ ಗ್ರಾಮ ಪಂಚಾಯತಿಯೊಂದು ಮೊದಲ ಸಭೆ ನಡೆಸಿದ ದಿನಾಂಕದಿಂದ ಐದು ವರ್ಷಗಳ ಅವಧಿಯವರೆಗೆ ಅಧಿಕಾರ ಹೊಂದಿರುತ್ತದೆ. ಅದರಂತೆ 2015ನೇ ಇಸವಿಯಲ್ಲಿ ನಮ್ಮ ರಾಜ್ಯದ 6024 ಗ್ರಾಮ ಪಂಚಾಯತಿಗಳ ಸದಸ್ಯರ ಸ್ಥಾನಗಳಿಗಾಗಿ ಚುನಾವಣೆಯು ನಡೆದಿರುತ್ತದೆ. ಬಹುಪಾಲು ಗ್ರಾಮ ಪಂಚಾಯತಿಗಳ ಅಧಿಕಾರಾದ ಅವಧಿಯು ಇದೇ ಜೂನ್ ಮತ್ತು ಜುಲೈ ತಿಂಗಳಲ್ಲಿ ಮುಕ್ತಾಯವಾಗುತ್ತದೆ.ಹೀಗೆ ಗ್ರಾಮ ಪಂಚಾಯತಿಗಳ ಅಧಿಕಾರಾವಧಿಯು ಮುಕ್ತಾಯಗೊಳ್ಳುತ್ತಿದ್ದರೂ ಸಹ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಪ್ರಾಮಾಣಿಕವಾಗಿ ಪ್ರಕ್ರಿಯೆಯನ್ನು ಭಾರತೀಯ ಸಂವಿಧಾನ 1950 ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾಯ್ದೆ 1993 ರ ಆಶಯದಂತೆ ಆರಂಭಿಸಿಲ್ಲದಿರುವುದು ಸಂವಿಧಾನ ವಿರೋಧಿಯಾದ ನಡೆಯಾಗಿರುತ್ತದೆ.
ಇದನ್ನೂ ಓದಿ:VIDEO| ಕೆನಡಾ ಮೂಲದ ಕನ್ನಡಿಗನಿಂದ ಕರೊನಾಗೆ ಔಷಧಿ: ವಿಶ್ವದ ಗಮನ ಸೆಳೆದ ಸಂಶೋಧನೆ!
ರಾಜ್ಯ ಚುನಾವಣಾ ಆಯೋಗವು ರಾಜ್ಯದ ಗ್ರಾಮ ಪಂಚಾಯತಿಗಳಿಗೆ ನಿಗಧಿತ ಅವಧಿಯಲ್ಲಿ ಚುನಾವಣೆಗಳನ್ನು ನಡೆಸದೆ ಇರುವುದರಿಂದ ಗ್ರಾಮಗಳ ವಿಕೇಂದ್ರೀಕೃತ ಸ್ಥಳೀಯ ಸ್ವಯಂ ಆಡಳಿತ ವ್ಯವಸ್ಥೆಯನ್ನು ದಮನ ಮಾಡಿದಂತಾಗುತ್ತದೆ. ಇದರಿಂದ ಸಂವಿಧಾನದ 73 ನೇ ತಿದ್ದುಪಡಿಯ ಧ್ಯೇಯೋದ್ದೇಶಗಳನ್ನು ಉಲ್ಲಂಘಿಸಿದಂತಾಗುತ್ತದೆ.
ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ,1993 ರ ಸೆಕ್ಷನ್ 308ಎಎ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಗಳ ಹಾಲಿ ಅಧಿಕಾರಾವಧಿ ಮುಗಿಯುವ ಮೊದಲೆ ಚುನಾವಣಾ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಬೇಕಾಗಿದೆ. ಇದಕ್ಕಾಗಿ ಚುನಾವಣಾ ವೇಳಾಪಟ್ಟಿ ಮತ್ತು ಮೀಸಲಾತಿಗಳ ವಿವರಗಳನ್ನು ಚುನಾವಣೆಗಳ ಅಧಿಸೂಚನೆ ಹೊರಡಿಸುವ 45 ದಿನಗಳ ಮೊದಲೇ ಹೊರಡಿಸಬೇಕಾಗುತ್ತದೆ. ಆದರೆ ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳ ಅಧಿಕಾರಾವಧಿ ಮುಗಿದು ಹೋಗುತ್ತಿದ್ದರೂ ಕೂಡ ರಾಜ್ಯ ಚುನಾವಣಾ ಆಯೋಗವು ಮೀಸಲಾತಿಯ ನಿಗಧಿ, ವೇಳಾಪಟ್ಟಿಗಳ ಪ್ರಕಟ ಮುಂತಾದ ಯಾವುದೇ ಚುನಾವಣಾ ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವ ಕುರಿತು ಯಾವ ಮಾಹಿತಿಯೂ ಇಲ್ಲ. ಸೂಚನೆಯೂ ಇಲ್ಲ. ಇದರಿಂದಾಗಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 308ಎಎ ಅನ್ನು ಉದ್ದೇಶ ಪೂರ್ವಕವಾಗಿ ಉಲ್ಲಂಘನೆ ಮಾಡಿದೆ ಮತ್ತು ಕಾಯ್ದೆಯ ಕುರಿತು ಸಂಪೂರ್ಣ ನಿರ್ಲಕ್ಷ್ಯ ತೋರಿದೆ.
ಇದನ್ನೂ ಓದಿ:VIDEO: 107 ಜನರಿದ್ದ ಪಾಕಿಸ್ತಾನದ ವಿಮಾನ ಪತನ
ಭಾರತದ ಸಂವಿಧಾನದ ಅನುಚ್ಛೇದ 243ಇ[3] ರ ಅನ್ವಯ ಯಾವುದೇ ಪಂಚಾಯತಿಯ ಐದು ವರ್ಷಗಳ ಅದಿಕಾರಾವಧಿ ಮುಕ್ತಾಯಗೊಳ್ಳುವ ಮೊದಲೇ ಚುನಾವಣೆಗಳನ್ನು ನಡೆಸಬೇಕೆಂಬ ಸ್ಪಷ್ಟ ನಿರ್ದೇಶನವಿದೆ. ಆದ ಕಾರಣ ನಿಗಧಿತ ಅವಧಿಯಲ್ಲಿ ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಕಡ್ಡಾಯ ಕರ್ತವ್ಯವಾಗಿರುತ್ತದೆ. ಭಾರತದ ಸಂವಿಧಾನದ ಅನುಚ್ಛೇದ 243ಇ[3] ರ ಅನ್ವಯ ಯಾವುದೇ ಪಂಚಾಯತಿಯ ಐದು ವರ್ಷಗಳ ಅದಿಕಾರಾವಧಿ ಮುಕ್ತಾಯಗೊಳ್ಳುವ ಮೊದಲೇ ಚುನಾವಣೆಗಳನ್ನು ನಡೆಸಬೇಕೆಂಬ ಸ್ಪಷ್ಟ ನಿರ್ದೇಶನವಿದೆ. ಆದ ಕಾರಣ ನಿಗಧಿತ ಅವಧಿಯಲ್ಲಿ ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಕಡ್ಡಾಯ ಕರ್ತವ್ಯವಾಗಿರುತ್ತದೆ.
ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ,1993 ರ ನಿಯಮ 8 ರಂತೆ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯತುಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದಿದ್ದಾಗ ಮತ್ತು ಎರಡು ಬಾರಿ ನಿರಂತರವಾಗಿ ಚುನಾವಣೆ ನಡೆಸಿದರೂ ಸದಸ್ಯರು ಆಯ್ಕೆಯಾಗದಿದ್ದಾಗ ಅಥವಾ ಇನ್ನಾವುದೇ ಸಮರ್ಥನೀಯವಾದ ಸ್ಪಷ್ಟ ಕಾರಣಗಳಿದ್ದರೆ ಮಾತ್ರ ಆಡಳಿತ ಸಮಿತಿಯನ್ನು ಅಧಿಸೂಚನೆ ಹೊರಡಿಸುವುದರ ಮೂಲಕ ರಚಿಸಬಹುದಾಗಿದೆ. ಗ್ರಾಮ ಪಂಚಾಯತಿಗಳಿಗೆ ಸದಸ್ಯರನ್ನು ಚುನಾಯಿಸುವುದು ಅಸಾಧ್ಯವಾದಾಗ ಅಥವಾ ನಿರಂತರವಾಗಿ ಎರಡು ಚುನಾವಣೆಗಳನ್ನು ನಡೆಸಿದರೂ ಸದಸ್ಯರನ್ನು ಆಯ್ಕೆ ಮಾಡಲು ಸಾಧ್ಯವಾಗದಿದ್ದಾಗ ರಾಜ್ಯ ಸರ್ಕಾರವು ಆಡಳಿತ ಸಮಿತಿಯನ್ನು ನೇಮಿಸಬಹುದಾಗಿದೆ. ಪ್ರಸ್ತುತ ಇಂಥಹ ಯಾವುದೇ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವವಾಗಿಲ್ಲ. ಹಾಗಾಗಿ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 8 ರಂತೆ ಆಡಳಿತ ಸಮಿತಿಗಳನ್ನು ರಚಿಸಲು ಅವಕಾಶವಿಲ್ಲ.
ಇದನ್ನೂ ಓದಿ:VIDEO: ಪಡಿತರ ಚೀಟಿ ಸಮಸ್ಯೆಯೇ ಪರಿಹರಿಸಿ ಕೊಡ್ತೇವೆ – ವಿಜಯವಾಣಿ ಫೋನ್​ ಇನ್​ ನಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಭರವಸೆ
ರಾಜ್ಯ ಚುನಾವಣಾ ಆಯೋಗವು ತನ್ನ ಸಾಂವಿಧಾನಿಕ ಜವಾಬ್ಧಾರಿಯನ್ನು ನ್ಯಾಯಬದ್ಧವಾಗಿ, ಪಕ್ಷಪಾತರಹಿತವಾಗಿ ರಾಷ್ಟ್ರದ ಸಂವಿಧಾನ ಹಾಗೂ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ರಂತೆ ನೈಜ ಸ್ಫೂರ್ತಿಯಿಂದ ವರ್ತಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ಆಗ್ರಹಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಕೊಲೆ ಬೆದರಿಕೆ- ಪ್ರಕರಣ ದಾಖಲಿಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − five =
Remember me
