ಕುಮಟಾ:ರಾಜ್ಯದಕಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರಿದೆ. ಲೋಕಲ್​ ಫೈಟ್​ನ ಅಖಾಡಕ್ಕಿಳಿಯುವ ಆಕಾಂಕ್ಷಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಭಾರಿ ಪೈಪೋಟಿ ಏರ್ಪಟ್ಟಿದೆ. ಈ ನಡುವೆ ಚುನಾವಣಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಹಲವು ವರ್ಷಗಳಿಂದ ಬಿಜೆಪಿಯಲ್ಲಿ ದುಡಿಯುತ್ತಿರುವ ನನಗೆ ಅನ್ಯಾಯವಾಗಿದೆ. ಚುನಾವಣೆಯನ್ನು ಮುಂದೂಡಿ ಎಂದು ಕೋರಿದ್ದಾರೆ.
ಅಂದಹಾಗೆ ಬಿಜೆಪಿ ಪಕ್ಷದಿಂದ ಆ ಆಕಾಂಕ್ಷಿಗೆ ಅನ್ಯಾಯ ಆಗಿಲ್ಲ. ಗ್ರಾಪಂ ಚುನಾವಣಾ ಮೀಸಲಾತಿಯಿಂದ ಅವರಿಗೆ ಅನ್ಯಾಯ ಆಗಿದೆಯಂತೆ. ಹೌದು, ಹಾಗಂತ ಹೊಲನಗದ್ದೆ ಪಂಚಾಯಿತಿ ಹಣ್ಣೆಮಠ ವಾರ್ಡ್​ನ (ಮತಗಟ್ಟೆ ಸಂಖ್ಯೆ 59) ಆಕಾಂಕ್ಷಿ ಸುಬ್ರಹ್ಮಣ್ಯ ಭಟ್​ ಅವರು ಪ್ರಧಾನಿಗೆ ಪತ್ರ ಬರೆದು ದೂರಿದ್ದಾರೆ.
ಉದ್ದೇಶಪೂರ್ವಕವಾಗಿ ಮೀಸಲಾತಿ ಬದಲಾಯಿಸಲಾಗಿದೆ. ಇದರಿಂದಾಗಿ ಸ್ಪರ್ಧಿಸುವ ಅವಕಾಶದಿಂದ ವಂಚಿತನಾಗಿದ್ದೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಹಣ್ಣೆಮಠ ವಾರ್ಡ್​ಗೆ ಅನುಸೂಚಿತ ಪಂಗಡ ಮಹಿಳೆ, ಹಿಂದುಳಿದ ವರ್ಗ “ಅ’ ಹಾಗೂ ಸಾಮಾನ್ಯ ಮಹಿಳೆಗೆ ಸ್ಥಾನ ಮೀಸಲು ಬಂದಿದೆ. ಇದರಿಂದ ಸಾಮಾನ್ಯ ವರ್ಗಕ್ಕೆ ಅವಕಾಶವೇ ಇಲ್ಲವಾಗಿದೆ. ಇಲ್ಲಿ ಸಿಗಬೇಕಿದ್ದ ಸಾಮಾನ್ಯ ವರ್ಗದ ಮೀಸಲಾತಿಯನ್ನು ಉದ್ದೇಶಪೂರ್ವಕ ಬದಲಿಸಲಾಗಿದೆ. ಹಲವು ವರ್ಷಗಳಿಂದ ಬಿಜೆಪಿಯಲ್ಲಿ ದುಡಿಯುತ್ತಿರುವ ನನಗೆ ಇದರಿಂದ ಅನ್ಯಾಯವಾಗಿದೆ. ಹೊಲನಗದ್ದೆ ಪಂಚಾಯಿತಿ ಚುನಾವಣೆ ಮುಂದೂಡಿ, ಸರಿಯಾದ ಮೀಸಲಾತಿ ಪ್ರಕಾರ ಚುನಾವಣೆ ನಡೆಸುವುದಕ್ಕೆ ಸಂಬಂಧಪಟ್ಟವರಿಗೆ ನಿರ್ದೇಶಿಸಬೇಕು ಎಂದು ಪತ್ರದ ಮೂಲಕ ಪ್ರಧಾನಿ ಅವರಲ್ಲಿ ಸುಬ್ರಹ್ಮಣ್ಯ ಭಟ್​ ವಿನಂತಿಸಿದ್ದಾರೆ.
ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!

ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​

ಇನ್ನೇನು ಮನೆಗೆ ಹೋಗಬೇಕು ಅನ್ನುವಷ್ಟರಲ್ಲಿ ತಾಯಿ-ಮಗನ ಪ್ರಾಣ ಹೊತ್ತೊಯ್ದ ಜವರಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
