ಲಕ್ಷ್ಮೇಶ್ವರ:ಊರೂರು ಸುತ್ತಿ ತರಕಾರಿ ಮಾರುವ ಬಡ ಕುಟುಂಬದ ಮಹಿಳೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಟ್ಟ ಒಲಿದು ಬಂದಿದೆ.ಚುನಾವಣೆಯಲ್ಲಿ ಗೆಲ್ಲಲು ಹಣ, ಜಾತಿ ಸೇರಿದಂತೆ ಅನೇಕ ಬಲಾಬಲಗಳು ಬೇಕು ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಆದರೆ, ತಾಲೂಕಿನ ಯಳವತ್ತಿ ಗ್ರಾಮದ ಹುಲಿಗೆವ್ವ ಲಕ್ಷ್ಮಣ ಭಜಂತ್ರಿ ಅವರಿಗೆ ಇದಾವುದರ ಬಲ ಇಲ್ಲದಿದ್ದರೂ ಜನಬಲ ಮತ್ತು ಅದೃಷ್ಟ ಬಲದಿಂದ ಅಧ್ಯಕ್ಷೆ ಪಟ್ಟ ಲಭಿಸಿದೆ.
ಯಳವತ್ತಿ ಗ್ರಾಪಂಗೆ ನಡೆದ ಚುನಾವಣೆಯಲ್ಲಿ ಹುಲಿಗೆವ್ವ ಜನಬಲದಿಂದ ಜಯಶಾಲಿಯಾಗಿದ್ದರು. ಗ್ರಾಪಂ ಅಧ್ಯಕ್ಷೆ ಸ್ಥಾನ ಎಸ್​ಸಿ ಮಹಿಳೆಗೆ ಮೀಸಲಾಗಿದ್ದರಿಂದ ಇರುವ ಏಕೈಕ ಸದಸ್ಯೆಗೆ ನಿರಾಯಾಸವಾಗಿ ಅಧ್ಯಕ್ಷ ಪಟ್ಟ ಒಲಿದು ಬಂದಿದೆ. ಹುಲಿಗೆವ್ವನ ಕುಟುಂಬಕ್ಕೆ ತೀರಾ ಹಳೆಯದಾದ ಜೋಪಡಿ ಮನೆ ಬಿಟ್ಟರೆ ಬೇರೆ ಆಸ್ತಿ ಇಲ್ಲ. ಗ್ರಾಮೀಣ ಸಂತೆಗಳಲ್ಲಿ ತರಕಾರಿ ಮಾರಾಟ ಮಾಡಿ ಬದುಕು ಸಾಗಿಸುತ್ತ ಬಂದಿದ್ದಾರೆ. ಇದರೊಟ್ಟಿಗೆ ಗ್ರಾಮದಲ್ಲಿ ಗೂಡಂಗಡಿಯಲ್ಲಿ ನಿತ್ಯ ತರಕಾರಿ ವ್ಯಾಪಾರ ಮಾಡುತ್ತಾರೆ. ಪತಿ ಪಾರಂಪರಿಕವಾಗಿ ಬಂದ ಶಹನಾಯಿ ಭಾರಿಸುವ ಕಾಯಕ ಮಾಡುತ್ತಾರೆ. ಹಿರಿ ಮಗ ಪಿಯುಸಿ, ಮತ್ತೊಬ್ಬ ಎಸ್​ಎಸ್​ಎಲ್​ಸಿ ಓದುತ್ತಿದ್ದಾನೆ. ಮಗಳನ್ನು ಮದುವೆ ಮಾಡಿಕೊಡಲಾಗಿದೆ.ಇದನ್ನೂ ಓದಿರಿಎಟಿಎಂನಲ್ಲಿ ಜ್ಯೋತಿ ಉದಯ್​ ಮೇಲೆ ಮಾರಣಾಂತಿಕ ಹಲ್ಲೆ: ಅಪರಾಧಿಗೆ ಇಂದು ಶಿಕ್ಷೆ ವಿಧಿಸಿದ ಕೋರ್ಟ್​!
ತಾನಿರುವ ಜೋಪಡಿ ತೆರವುಗೊಳಿಸಿ ವಸತಿ ಯೋಜನೆಯಡಿ ಮನೆ ಕಟ್ಟಿಕೊಳ್ಳಬೇಕೆಂಬ ಆಸೆಯಿಂದ ಗ್ರಾಪಂಗೆ ಅರ್ಜಿ ಸಲ್ಲಿಸಿ ಎಡತಾಕಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ, ಈಗ ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಎಂಬಂತೆ ಗ್ರಾಮದ ಜನರಿಗೆ ಮೂಲ ಸೌಲಭ್ಯ ಕಲ್ಪಿಸುವ ಅರ್ಜಿ ಸಹಿ ಮಾಡುವ ಅದೃಷ್ಟ ಹುಲಿಗೆವ್ವಳಿಗೆ ಒಲಿದು ಬಂದಿದೆ.
ಓದಿಲ್ಲದಿದ್ದರೂ ಬಡತನದಲ್ಲಿಯೇ ಹುಟ್ಟಿಬೆಳೆದು ಬಡವರ ಕಷ್ಟ, ಬೇಕು, ಬೇಡಿಕೆಗಳ ಬಗ್ಗೆ ಅರಿವಿದೆ. ಗ್ರಾಮದಲ್ಲಿ ಮುಖ್ಯವಾಗಿ ಕುಡಿಯುವ ನೀರು, ರಸ್ತೆ, ಚರಂಡಿ, ಆಶ್ರಯ ಮನೆ, ಶಿಕ್ಷಣ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಸೇವೆ ಮಾಡುತ್ತೇನೆ. ಅದಕ್ಕಾಗಿ ವಿದ್ಯಾವಂತ ಸದಸ್ಯರ, ಹಿರಿಯರ, ಅಧಿಕಾರಿಗಳಿಂದ ಮಾಹಿತಿ, ಸಹಕಾರ ಪಡೆಯುತ್ತೇನೆ. ಜನರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳುತ್ತೇನೆ.| ಹುಲಿಗೆವ್ವ ಭಜಂತ್ರಿಗ್ರಾಪಂ ಅಧ್ಯಕ್ಷೆ ಯಳವತ್ತಿ
ಪ್ರಿಯಕರನ ಕರೆ ಬಂತೆಂದು ಮನೆಯಿಂದ ಹೊರ ಹೋದ ಬಾಲಕಿ ಶವವಾಗಿ ಪತ್ತೆ! ಆ ರಾತ್ರಿಯ ರಹಸ್ಯ ಇಲ್ಲಿದೆ

ಎಟಿಎಂನಲ್ಲಿ ಜ್ಯೋತಿ ಉದಯ್​ ಮೇಲೆ ಮಾರಣಾಂತಿಕ ಹಲ್ಲೆ: ಅಪರಾಧಿಗೆ ಇಂದು ಶಿಕ್ಷೆ ವಿಧಿಸಿದ ಕೋರ್ಟ್​!

ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 8 =
Remember me
